Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...