Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...