Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...