Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...