Homeಚಳವಳಿರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಪುನರುಚ್ಚರಿಸಿದ್ದರು.

- Advertisement -
- Advertisement -

ಭಾರತ ಮತ್ತೆ ಕೆನಡಾ ಉಭಯ ದೇಶಗಳ ಉನ್ನತ ರಾಜತಾಂತ್ರಿಕರ ನಡುವಿನ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡುವಂತೆ ಭಾರತ ಸರ್ಕಾರ ಕೆನಡಾವನ್ನು ಕೋರಿದೆ. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಟೀಕೆಗಳ ನಂತರ ಎರಡು ದೇಶಗಳ ನಡುವಿನ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಮುನ್ಸೂಚನೆ ಇದಾಗಿದೆ.

ಇಂದು (ಡಿ.15) ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ), ರಿವಾ ಗಂಗೂಲಿ ದಾಸ್ ಮತ್ತು ಅವರ ಕೆನಡಾದ ಅಧಿಕಾರಿಯೊಂದಿಗೆ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡಲಾಗಿದೆ. ಸಮಾಲೋಚನೆ ನಡೆಸಲು ದಿನಾಂಕ ಅನಾನುಕೂಲವಾಗಿದೆ ಎಂದು ನವದೆಹಲಿ ಒಟ್ಟಾವಾಕ್ಕೆ ತಿಳಿಸಿದೆ.

ದಿನಾಂಕ ಅನಾನುಕೂಲವಾಗಿದೆ ಎಂಬ ಕಾರಣವಿಟ್ಟುಕೊಂಡು ಕೆನಡಾದ ವಿದೇಶಾಂಗ ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಆಯೋಜಿಸಿದ್ದ ಕೋವಿಡ್ -19 ಮಂತ್ರಿ ಸಮನ್ವಯ ಗುಂಪಿನ ಸಭೆಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗೈರಾಗಿದ್ದರು. ಇದರ ಹಿಂದಿನ ಮಂತ್ರಿ ಸಮನ್ವಯ ಗುಂಪಿನ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಡಿಸೆಂಬರ್ 7 ರ ಸಭೆಯಿಂದ ದೂರವಿರಲು ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಗುರುನಾನಕ್ ಅವರ 551 ನೇ ಜನ್ಮ ದಿನಾಚರಣೆಯಂದು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಹೇಳಿದ್ದರು.

ಇದಕ್ಕೆ ದೇಶದಲ್ಲಿ ಅನೇಕ ಪ್ರತಿರೋಧಗಳು ವ್ಯಕ್ತವಾಗಿದ್ದವು. ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೂ ಕೂಡ ಕೆನಡಾ ಪ್ರಧಾನಿ ರೈತರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿರಲಿಲ್ಲ. ವಿದೇಶಾಂಗ ಇಲಾಖೆ ಎಚ್ಚರಿಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದರು. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿಸುವ ಮುನ್ಸೂಚನೆ ನೀಡುತ್ತಿವೆ.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...