Homeಚಳವಳಿರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಪುನರುಚ್ಚರಿಸಿದ್ದರು.

- Advertisement -
- Advertisement -

ಭಾರತ ಮತ್ತೆ ಕೆನಡಾ ಉಭಯ ದೇಶಗಳ ಉನ್ನತ ರಾಜತಾಂತ್ರಿಕರ ನಡುವಿನ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡುವಂತೆ ಭಾರತ ಸರ್ಕಾರ ಕೆನಡಾವನ್ನು ಕೋರಿದೆ. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಟೀಕೆಗಳ ನಂತರ ಎರಡು ದೇಶಗಳ ನಡುವಿನ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಮುನ್ಸೂಚನೆ ಇದಾಗಿದೆ.

ಇಂದು (ಡಿ.15) ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ), ರಿವಾ ಗಂಗೂಲಿ ದಾಸ್ ಮತ್ತು ಅವರ ಕೆನಡಾದ ಅಧಿಕಾರಿಯೊಂದಿಗೆ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡಲಾಗಿದೆ. ಸಮಾಲೋಚನೆ ನಡೆಸಲು ದಿನಾಂಕ ಅನಾನುಕೂಲವಾಗಿದೆ ಎಂದು ನವದೆಹಲಿ ಒಟ್ಟಾವಾಕ್ಕೆ ತಿಳಿಸಿದೆ.

ದಿನಾಂಕ ಅನಾನುಕೂಲವಾಗಿದೆ ಎಂಬ ಕಾರಣವಿಟ್ಟುಕೊಂಡು ಕೆನಡಾದ ವಿದೇಶಾಂಗ ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಆಯೋಜಿಸಿದ್ದ ಕೋವಿಡ್ -19 ಮಂತ್ರಿ ಸಮನ್ವಯ ಗುಂಪಿನ ಸಭೆಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗೈರಾಗಿದ್ದರು. ಇದರ ಹಿಂದಿನ ಮಂತ್ರಿ ಸಮನ್ವಯ ಗುಂಪಿನ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಡಿಸೆಂಬರ್ 7 ರ ಸಭೆಯಿಂದ ದೂರವಿರಲು ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಗುರುನಾನಕ್ ಅವರ 551 ನೇ ಜನ್ಮ ದಿನಾಚರಣೆಯಂದು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಹೇಳಿದ್ದರು.

ಇದಕ್ಕೆ ದೇಶದಲ್ಲಿ ಅನೇಕ ಪ್ರತಿರೋಧಗಳು ವ್ಯಕ್ತವಾಗಿದ್ದವು. ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೂ ಕೂಡ ಕೆನಡಾ ಪ್ರಧಾನಿ ರೈತರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿರಲಿಲ್ಲ. ವಿದೇಶಾಂಗ ಇಲಾಖೆ ಎಚ್ಚರಿಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದರು. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿಸುವ ಮುನ್ಸೂಚನೆ ನೀಡುತ್ತಿವೆ.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...