Homeಚಳವಳಿರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಪುನರುಚ್ಚರಿಸಿದ್ದರು.

- Advertisement -
- Advertisement -

ಭಾರತ ಮತ್ತೆ ಕೆನಡಾ ಉಭಯ ದೇಶಗಳ ಉನ್ನತ ರಾಜತಾಂತ್ರಿಕರ ನಡುವಿನ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡುವಂತೆ ಭಾರತ ಸರ್ಕಾರ ಕೆನಡಾವನ್ನು ಕೋರಿದೆ. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಟೀಕೆಗಳ ನಂತರ ಎರಡು ದೇಶಗಳ ನಡುವಿನ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಮುನ್ಸೂಚನೆ ಇದಾಗಿದೆ.

ಇಂದು (ಡಿ.15) ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ), ರಿವಾ ಗಂಗೂಲಿ ದಾಸ್ ಮತ್ತು ಅವರ ಕೆನಡಾದ ಅಧಿಕಾರಿಯೊಂದಿಗೆ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡಲಾಗಿದೆ. ಸಮಾಲೋಚನೆ ನಡೆಸಲು ದಿನಾಂಕ ಅನಾನುಕೂಲವಾಗಿದೆ ಎಂದು ನವದೆಹಲಿ ಒಟ್ಟಾವಾಕ್ಕೆ ತಿಳಿಸಿದೆ.

ದಿನಾಂಕ ಅನಾನುಕೂಲವಾಗಿದೆ ಎಂಬ ಕಾರಣವಿಟ್ಟುಕೊಂಡು ಕೆನಡಾದ ವಿದೇಶಾಂಗ ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಆಯೋಜಿಸಿದ್ದ ಕೋವಿಡ್ -19 ಮಂತ್ರಿ ಸಮನ್ವಯ ಗುಂಪಿನ ಸಭೆಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗೈರಾಗಿದ್ದರು. ಇದರ ಹಿಂದಿನ ಮಂತ್ರಿ ಸಮನ್ವಯ ಗುಂಪಿನ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಡಿಸೆಂಬರ್ 7 ರ ಸಭೆಯಿಂದ ದೂರವಿರಲು ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಗುರುನಾನಕ್ ಅವರ 551 ನೇ ಜನ್ಮ ದಿನಾಚರಣೆಯಂದು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಹೇಳಿದ್ದರು.

ಇದಕ್ಕೆ ದೇಶದಲ್ಲಿ ಅನೇಕ ಪ್ರತಿರೋಧಗಳು ವ್ಯಕ್ತವಾಗಿದ್ದವು. ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೂ ಕೂಡ ಕೆನಡಾ ಪ್ರಧಾನಿ ರೈತರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿರಲಿಲ್ಲ. ವಿದೇಶಾಂಗ ಇಲಾಖೆ ಎಚ್ಚರಿಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದರು. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿಸುವ ಮುನ್ಸೂಚನೆ ನೀಡುತ್ತಿವೆ.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....