Homeಚಳವಳಿಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

’ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ’

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಸಂಯುಕ್ತ ಹೋರಾಟ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಭಾರತ್ ಬಂದ್ ಪೂರಕವಾಗಿ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಇಂದು (ಭಾನುವಾರ) ಸಂಯುಕ್ತ ಹೋರಾಟ ಕರ್ನಾಟಕ  ಆನ್‌ಲೈನ್ ಬಹಿರಂಗ ಸಭೆ ನಡೆಸಿದೆ.

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ದೇಶದಲ್ಲಿ ರೈತರ ಸತ್ಯಾಗ್ರಹ ಆರಂಭವಾಗಿ 10 ತಿಂಗಳಾಗುತ್ತಾ ಬಂದಿದೆ. ಭಾರತ ಸರ್ಕಾರ ರೈತರ ಧ್ವನಿಗೆ ಒಗುಡುತ್ತಿಲ್ಲ. ಭಾರತ ಸರ್ಕಾರ ರೈತರ ಪರ ಇಲ್ಲ. ರೈತರನ್ನು ಕೀಟಲೆ ಮಾಡುತ್ತಿದೆ. ರೈತರ ಬಗ್ಗೆ ಅವರಿಗಿರುವ ತಿರಸ್ಕಾರ ಭಾವನೆ ಇದು. ಈಗಾಗಲೇ ಹಲವು ಭಾರಿ ಸರ್ಕಾರವನ್ನು ಎಚ್ಚರಿಸಲು ರೈತರು ಪ್ರಯತ್ನಿಸಿದ್ದರೂ ಅವರು ಎಚ್ಚರಗೊಳ್ಳುತ್ತಿಲ್ಲ. ಹಾಗಾಗಿ ದೇಶದ ರೈತರು 27 ರಂದು ರಸ್ತೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು” ಎಂದರು.

“ಕರ್ನಾಟಕದ ಚಳುವಳಿಗಾರ ಮುಂದಿರುವ ಸವಾಲು ಎಂದರೆ ಕರ್ನಾಟಕ ಬಂದ್. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ಮುಖ್ಯ. ಬೆಂಗಳೂರು, ನಮ್ಮ ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯದಲ್ಲಿಯೂ ಬಂದ್ ಯಶಸ್ವಿಯಾಗಬೇಕು. ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾಥಿ ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

“ಕೇಂದ್ರ, ಜಿಲ್ಲಾ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ತಡೆ ಹಾಕಲು ಪ್ರಯತ್ನಿಸುತ್ತವೆ. ಹಾಗಾಗಿ ನಾವು ನಾಗರಿಕರ ಮನವೊಲಿಸಲು ಮುಂದಾಗಬೇಕು. ಈ ಸೆ.27 ದೇಶಕ್ಕೆ ಮಹತ್ತರ ಸಂದೇಶ ನೀಡಬೇಕು” ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

“ವಿಪಕ್ಷಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ ಬಗ್ಗೆ ಮಾತ್ರ ಮಾತನಾಡುತ್ತಿವೆ. ಆದರೆ, ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪನಿಗಳುಗೆ ದಾರೆ ಎರೆಯುತ್ತಿರುವ ಬಗ್ಗೆ ನಾವು ನಾಗರಿಕರಿಗೆ  ಮನವರಿಕೆ ಮಾಡಬೇಕು. ನಾವು ನಾಗರಿಕರಾಗಿ ಸರ್ಕಾರ ಮಾಡುವ ತಪ್ಪುಗಳಿಂದ ನಮ್ಮ ಬದುಕಿನ ನೆಲೆ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು” ಎಂದರು.

” ಈ ಹಿನ್ನೆಲೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಶಾಲಾ ಕಾಲೇಜು ಮಟ್ಟದಲ್ಲಿ ಎಲ್ಲರಿಗೂ ಬಂದ್‌ ಬಗ್ಗೆ ಜೊತೆಗೆ ಕೃಷಿ ಮೇಲೆ ಒಕ್ಕೂಟ ಸರ್ಕಾರ ತಂದಿರುವ ಕಾನೂನುಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕು. ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಸಂಯುಕ್ತ ಹೋರಾಟ ವೇದಿಕೆ ಕರೆ ನೀಡಿರುವ ಸಂಪೂರ್ಣ ಯಶಸ್ವಿಯಾಗಬೇಕು. ಇದಕ್ಕೆ ನಾವೇಲ್ಲರು ಪ್ರಯತ್ನ ಪಡೆಬೇಕು” ಎಂದು ಹೇಳಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆ ಸಂಯುಕ್ತ ಹೋರಾಟ, ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿದೆ. ಅದರ ಸಿದ್ಧತೆಯ ಭಾಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ರೈತ, ದಲಿತ, ಮಹಿಳಾ, ಕಾರ್ಮಿಕ, ವಿದ್ಯಾರ್ಥಿ-ಯುವಜನರ ಸಂಘಟನೆಗಳು ಒಗ್ಗೂಡಿ ಪೂರ್ವಭಾವಿ ಸಭೆಗಳನ್ನು ನಡೆಸಿವೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಕರ್ನಾಟಕ ಬಂದ್ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತಯಾರಿಗಳು ಪ್ರಾರಂಭಗೊಂಡಿವೆ.

ಬಹಿರಂಗ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ, ಆರ್‌ಕೆಎಸ್‌ನ ದಿವಾಕರ್‌, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ದಲಿತ ಸಂಘಟನೆ ವಕ್ಕೂಟದ ಮಾವಳ್ಳಿ ಶಂಕರ್ ಭಾಗವಹಿಸಿದ್ದರು.

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಬೆಂಗಳೂರಿನ  ಫ್ರೀಡಂ ಪಾರ್ಕ್ ಒಳಾವರಣದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಮಾಲೀ ಪಾಟೀಲ್, ಮೈಕೆಲ್ ಫರ್ನಾಂಡೀಸ್, ಎಸ್.ಆರ್.ಹಿರೇಮಠ ಅವರಿದ್ದ ಅಧ್ಯಕ್ಷೀಯ ಮಂಡಳಿ ಸೆ.16 ರಂದು ಸಮಾಲೋಚನಾ ಸಭೆ ನಡೆಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...