Homeಚಳವಳಿಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

’ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ’

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಸಂಯುಕ್ತ ಹೋರಾಟ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಭಾರತ್ ಬಂದ್ ಪೂರಕವಾಗಿ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಇಂದು (ಭಾನುವಾರ) ಸಂಯುಕ್ತ ಹೋರಾಟ ಕರ್ನಾಟಕ  ಆನ್‌ಲೈನ್ ಬಹಿರಂಗ ಸಭೆ ನಡೆಸಿದೆ.

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ದೇಶದಲ್ಲಿ ರೈತರ ಸತ್ಯಾಗ್ರಹ ಆರಂಭವಾಗಿ 10 ತಿಂಗಳಾಗುತ್ತಾ ಬಂದಿದೆ. ಭಾರತ ಸರ್ಕಾರ ರೈತರ ಧ್ವನಿಗೆ ಒಗುಡುತ್ತಿಲ್ಲ. ಭಾರತ ಸರ್ಕಾರ ರೈತರ ಪರ ಇಲ್ಲ. ರೈತರನ್ನು ಕೀಟಲೆ ಮಾಡುತ್ತಿದೆ. ರೈತರ ಬಗ್ಗೆ ಅವರಿಗಿರುವ ತಿರಸ್ಕಾರ ಭಾವನೆ ಇದು. ಈಗಾಗಲೇ ಹಲವು ಭಾರಿ ಸರ್ಕಾರವನ್ನು ಎಚ್ಚರಿಸಲು ರೈತರು ಪ್ರಯತ್ನಿಸಿದ್ದರೂ ಅವರು ಎಚ್ಚರಗೊಳ್ಳುತ್ತಿಲ್ಲ. ಹಾಗಾಗಿ ದೇಶದ ರೈತರು 27 ರಂದು ರಸ್ತೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು” ಎಂದರು.

“ಕರ್ನಾಟಕದ ಚಳುವಳಿಗಾರ ಮುಂದಿರುವ ಸವಾಲು ಎಂದರೆ ಕರ್ನಾಟಕ ಬಂದ್. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ಮುಖ್ಯ. ಬೆಂಗಳೂರು, ನಮ್ಮ ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯದಲ್ಲಿಯೂ ಬಂದ್ ಯಶಸ್ವಿಯಾಗಬೇಕು. ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾಥಿ ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

“ಕೇಂದ್ರ, ಜಿಲ್ಲಾ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ತಡೆ ಹಾಕಲು ಪ್ರಯತ್ನಿಸುತ್ತವೆ. ಹಾಗಾಗಿ ನಾವು ನಾಗರಿಕರ ಮನವೊಲಿಸಲು ಮುಂದಾಗಬೇಕು. ಈ ಸೆ.27 ದೇಶಕ್ಕೆ ಮಹತ್ತರ ಸಂದೇಶ ನೀಡಬೇಕು” ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

“ವಿಪಕ್ಷಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ ಬಗ್ಗೆ ಮಾತ್ರ ಮಾತನಾಡುತ್ತಿವೆ. ಆದರೆ, ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪನಿಗಳುಗೆ ದಾರೆ ಎರೆಯುತ್ತಿರುವ ಬಗ್ಗೆ ನಾವು ನಾಗರಿಕರಿಗೆ  ಮನವರಿಕೆ ಮಾಡಬೇಕು. ನಾವು ನಾಗರಿಕರಾಗಿ ಸರ್ಕಾರ ಮಾಡುವ ತಪ್ಪುಗಳಿಂದ ನಮ್ಮ ಬದುಕಿನ ನೆಲೆ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು” ಎಂದರು.

” ಈ ಹಿನ್ನೆಲೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಶಾಲಾ ಕಾಲೇಜು ಮಟ್ಟದಲ್ಲಿ ಎಲ್ಲರಿಗೂ ಬಂದ್‌ ಬಗ್ಗೆ ಜೊತೆಗೆ ಕೃಷಿ ಮೇಲೆ ಒಕ್ಕೂಟ ಸರ್ಕಾರ ತಂದಿರುವ ಕಾನೂನುಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕು. ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಸಂಯುಕ್ತ ಹೋರಾಟ ವೇದಿಕೆ ಕರೆ ನೀಡಿರುವ ಸಂಪೂರ್ಣ ಯಶಸ್ವಿಯಾಗಬೇಕು. ಇದಕ್ಕೆ ನಾವೇಲ್ಲರು ಪ್ರಯತ್ನ ಪಡೆಬೇಕು” ಎಂದು ಹೇಳಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆ ಸಂಯುಕ್ತ ಹೋರಾಟ, ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿದೆ. ಅದರ ಸಿದ್ಧತೆಯ ಭಾಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ರೈತ, ದಲಿತ, ಮಹಿಳಾ, ಕಾರ್ಮಿಕ, ವಿದ್ಯಾರ್ಥಿ-ಯುವಜನರ ಸಂಘಟನೆಗಳು ಒಗ್ಗೂಡಿ ಪೂರ್ವಭಾವಿ ಸಭೆಗಳನ್ನು ನಡೆಸಿವೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಕರ್ನಾಟಕ ಬಂದ್ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತಯಾರಿಗಳು ಪ್ರಾರಂಭಗೊಂಡಿವೆ.

ಬಹಿರಂಗ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ, ಆರ್‌ಕೆಎಸ್‌ನ ದಿವಾಕರ್‌, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ದಲಿತ ಸಂಘಟನೆ ವಕ್ಕೂಟದ ಮಾವಳ್ಳಿ ಶಂಕರ್ ಭಾಗವಹಿಸಿದ್ದರು.

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಬೆಂಗಳೂರಿನ  ಫ್ರೀಡಂ ಪಾರ್ಕ್ ಒಳಾವರಣದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಮಾಲೀ ಪಾಟೀಲ್, ಮೈಕೆಲ್ ಫರ್ನಾಂಡೀಸ್, ಎಸ್.ಆರ್.ಹಿರೇಮಠ ಅವರಿದ್ದ ಅಧ್ಯಕ್ಷೀಯ ಮಂಡಳಿ ಸೆ.16 ರಂದು ಸಮಾಲೋಚನಾ ಸಭೆ ನಡೆಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...