Homeಚಳವಳಿಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

’ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ’

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಸಂಯುಕ್ತ ಹೋರಾಟ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಭಾರತ್ ಬಂದ್ ಪೂರಕವಾಗಿ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಇಂದು (ಭಾನುವಾರ) ಸಂಯುಕ್ತ ಹೋರಾಟ ಕರ್ನಾಟಕ  ಆನ್‌ಲೈನ್ ಬಹಿರಂಗ ಸಭೆ ನಡೆಸಿದೆ.

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ದೇಶದಲ್ಲಿ ರೈತರ ಸತ್ಯಾಗ್ರಹ ಆರಂಭವಾಗಿ 10 ತಿಂಗಳಾಗುತ್ತಾ ಬಂದಿದೆ. ಭಾರತ ಸರ್ಕಾರ ರೈತರ ಧ್ವನಿಗೆ ಒಗುಡುತ್ತಿಲ್ಲ. ಭಾರತ ಸರ್ಕಾರ ರೈತರ ಪರ ಇಲ್ಲ. ರೈತರನ್ನು ಕೀಟಲೆ ಮಾಡುತ್ತಿದೆ. ರೈತರ ಬಗ್ಗೆ ಅವರಿಗಿರುವ ತಿರಸ್ಕಾರ ಭಾವನೆ ಇದು. ಈಗಾಗಲೇ ಹಲವು ಭಾರಿ ಸರ್ಕಾರವನ್ನು ಎಚ್ಚರಿಸಲು ರೈತರು ಪ್ರಯತ್ನಿಸಿದ್ದರೂ ಅವರು ಎಚ್ಚರಗೊಳ್ಳುತ್ತಿಲ್ಲ. ಹಾಗಾಗಿ ದೇಶದ ರೈತರು 27 ರಂದು ರಸ್ತೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು” ಎಂದರು.

“ಕರ್ನಾಟಕದ ಚಳುವಳಿಗಾರ ಮುಂದಿರುವ ಸವಾಲು ಎಂದರೆ ಕರ್ನಾಟಕ ಬಂದ್. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ಮುಖ್ಯ. ಬೆಂಗಳೂರು, ನಮ್ಮ ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯದಲ್ಲಿಯೂ ಬಂದ್ ಯಶಸ್ವಿಯಾಗಬೇಕು. ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾಥಿ ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

“ಕೇಂದ್ರ, ಜಿಲ್ಲಾ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ತಡೆ ಹಾಕಲು ಪ್ರಯತ್ನಿಸುತ್ತವೆ. ಹಾಗಾಗಿ ನಾವು ನಾಗರಿಕರ ಮನವೊಲಿಸಲು ಮುಂದಾಗಬೇಕು. ಈ ಸೆ.27 ದೇಶಕ್ಕೆ ಮಹತ್ತರ ಸಂದೇಶ ನೀಡಬೇಕು” ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

“ವಿಪಕ್ಷಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ ಬಗ್ಗೆ ಮಾತ್ರ ಮಾತನಾಡುತ್ತಿವೆ. ಆದರೆ, ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪನಿಗಳುಗೆ ದಾರೆ ಎರೆಯುತ್ತಿರುವ ಬಗ್ಗೆ ನಾವು ನಾಗರಿಕರಿಗೆ  ಮನವರಿಕೆ ಮಾಡಬೇಕು. ನಾವು ನಾಗರಿಕರಾಗಿ ಸರ್ಕಾರ ಮಾಡುವ ತಪ್ಪುಗಳಿಂದ ನಮ್ಮ ಬದುಕಿನ ನೆಲೆ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು” ಎಂದರು.

” ಈ ಹಿನ್ನೆಲೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಶಾಲಾ ಕಾಲೇಜು ಮಟ್ಟದಲ್ಲಿ ಎಲ್ಲರಿಗೂ ಬಂದ್‌ ಬಗ್ಗೆ ಜೊತೆಗೆ ಕೃಷಿ ಮೇಲೆ ಒಕ್ಕೂಟ ಸರ್ಕಾರ ತಂದಿರುವ ಕಾನೂನುಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕು. ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಸಂಯುಕ್ತ ಹೋರಾಟ ವೇದಿಕೆ ಕರೆ ನೀಡಿರುವ ಸಂಪೂರ್ಣ ಯಶಸ್ವಿಯಾಗಬೇಕು. ಇದಕ್ಕೆ ನಾವೇಲ್ಲರು ಪ್ರಯತ್ನ ಪಡೆಬೇಕು” ಎಂದು ಹೇಳಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆ ಸಂಯುಕ್ತ ಹೋರಾಟ, ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿದೆ. ಅದರ ಸಿದ್ಧತೆಯ ಭಾಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ರೈತ, ದಲಿತ, ಮಹಿಳಾ, ಕಾರ್ಮಿಕ, ವಿದ್ಯಾರ್ಥಿ-ಯುವಜನರ ಸಂಘಟನೆಗಳು ಒಗ್ಗೂಡಿ ಪೂರ್ವಭಾವಿ ಸಭೆಗಳನ್ನು ನಡೆಸಿವೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಕರ್ನಾಟಕ ಬಂದ್ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತಯಾರಿಗಳು ಪ್ರಾರಂಭಗೊಂಡಿವೆ.

ಬಹಿರಂಗ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ, ಆರ್‌ಕೆಎಸ್‌ನ ದಿವಾಕರ್‌, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ದಲಿತ ಸಂಘಟನೆ ವಕ್ಕೂಟದ ಮಾವಳ್ಳಿ ಶಂಕರ್ ಭಾಗವಹಿಸಿದ್ದರು.

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಬೆಂಗಳೂರಿನ  ಫ್ರೀಡಂ ಪಾರ್ಕ್ ಒಳಾವರಣದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಮಾಲೀ ಪಾಟೀಲ್, ಮೈಕೆಲ್ ಫರ್ನಾಂಡೀಸ್, ಎಸ್.ಆರ್.ಹಿರೇಮಠ ಅವರಿದ್ದ ಅಧ್ಯಕ್ಷೀಯ ಮಂಡಳಿ ಸೆ.16 ರಂದು ಸಮಾಲೋಚನಾ ಸಭೆ ನಡೆಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...