Homeಚಳವಳಿಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

’ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ’

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಸಂಯುಕ್ತ ಹೋರಾಟ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಭಾರತ್ ಬಂದ್ ಪೂರಕವಾಗಿ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಇಂದು (ಭಾನುವಾರ) ಸಂಯುಕ್ತ ಹೋರಾಟ ಕರ್ನಾಟಕ  ಆನ್‌ಲೈನ್ ಬಹಿರಂಗ ಸಭೆ ನಡೆಸಿದೆ.

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ದೇಶದಲ್ಲಿ ರೈತರ ಸತ್ಯಾಗ್ರಹ ಆರಂಭವಾಗಿ 10 ತಿಂಗಳಾಗುತ್ತಾ ಬಂದಿದೆ. ಭಾರತ ಸರ್ಕಾರ ರೈತರ ಧ್ವನಿಗೆ ಒಗುಡುತ್ತಿಲ್ಲ. ಭಾರತ ಸರ್ಕಾರ ರೈತರ ಪರ ಇಲ್ಲ. ರೈತರನ್ನು ಕೀಟಲೆ ಮಾಡುತ್ತಿದೆ. ರೈತರ ಬಗ್ಗೆ ಅವರಿಗಿರುವ ತಿರಸ್ಕಾರ ಭಾವನೆ ಇದು. ಈಗಾಗಲೇ ಹಲವು ಭಾರಿ ಸರ್ಕಾರವನ್ನು ಎಚ್ಚರಿಸಲು ರೈತರು ಪ್ರಯತ್ನಿಸಿದ್ದರೂ ಅವರು ಎಚ್ಚರಗೊಳ್ಳುತ್ತಿಲ್ಲ. ಹಾಗಾಗಿ ದೇಶದ ರೈತರು 27 ರಂದು ರಸ್ತೆ ಬಂದು ಒಗ್ಗಟ್ಟು ಪ್ರದರ್ಶಿಸಬೇಕು” ಎಂದರು.

“ಕರ್ನಾಟಕದ ಚಳುವಳಿಗಾರ ಮುಂದಿರುವ ಸವಾಲು ಎಂದರೆ ಕರ್ನಾಟಕ ಬಂದ್. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದು ಮುಖ್ಯ. ಬೆಂಗಳೂರು, ನಮ್ಮ ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯದಲ್ಲಿಯೂ ಬಂದ್ ಯಶಸ್ವಿಯಾಗಬೇಕು. ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾಥಿ ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

“ಕೇಂದ್ರ, ಜಿಲ್ಲಾ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೋರಾಟಕ್ಕೆ ತಡೆ ಹಾಕಲು ಪ್ರಯತ್ನಿಸುತ್ತವೆ. ಹಾಗಾಗಿ ನಾವು ನಾಗರಿಕರ ಮನವೊಲಿಸಲು ಮುಂದಾಗಬೇಕು. ಈ ಸೆ.27 ದೇಶಕ್ಕೆ ಮಹತ್ತರ ಸಂದೇಶ ನೀಡಬೇಕು” ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

“ವಿಪಕ್ಷಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್ ಬಗ್ಗೆ ಮಾತ್ರ ಮಾತನಾಡುತ್ತಿವೆ. ಆದರೆ, ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪನಿಗಳುಗೆ ದಾರೆ ಎರೆಯುತ್ತಿರುವ ಬಗ್ಗೆ ನಾವು ನಾಗರಿಕರಿಗೆ  ಮನವರಿಕೆ ಮಾಡಬೇಕು. ನಾವು ನಾಗರಿಕರಾಗಿ ಸರ್ಕಾರ ಮಾಡುವ ತಪ್ಪುಗಳಿಂದ ನಮ್ಮ ಬದುಕಿನ ನೆಲೆ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು” ಎಂದರು.

” ಈ ಹಿನ್ನೆಲೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಾರಿಗೆ, ಅಂಗಡಿ ಮುಂಗಟ್ಟು, ಶಾಲಾ ಕಾಲೇಜು ಮಟ್ಟದಲ್ಲಿ ಎಲ್ಲರಿಗೂ ಬಂದ್‌ ಬಗ್ಗೆ ಜೊತೆಗೆ ಕೃಷಿ ಮೇಲೆ ಒಕ್ಕೂಟ ಸರ್ಕಾರ ತಂದಿರುವ ಕಾನೂನುಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕು. ಭಾರತ ಸರ್ಕಾರ ತಂದಿರುವ ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಆಗ ನಮ್ಮ ವಿಚಾರಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಸಂಯುಕ್ತ ಹೋರಾಟ ವೇದಿಕೆ ಕರೆ ನೀಡಿರುವ ಸಂಪೂರ್ಣ ಯಶಸ್ವಿಯಾಗಬೇಕು. ಇದಕ್ಕೆ ನಾವೇಲ್ಲರು ಪ್ರಯತ್ನ ಪಡೆಬೇಕು” ಎಂದು ಹೇಳಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತ ಸಂಘಟನೆ ಸಂಯುಕ್ತ ಹೋರಾಟ, ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿದೆ. ಅದರ ಸಿದ್ಧತೆಯ ಭಾಗವಾಗಿ ಎಲ್ಲಾ ಜಿಲ್ಲೆಗಳಲ್ಲೂ ರೈತ, ದಲಿತ, ಮಹಿಳಾ, ಕಾರ್ಮಿಕ, ವಿದ್ಯಾರ್ಥಿ-ಯುವಜನರ ಸಂಘಟನೆಗಳು ಒಗ್ಗೂಡಿ ಪೂರ್ವಭಾವಿ ಸಭೆಗಳನ್ನು ನಡೆಸಿವೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಕರ್ನಾಟಕ ಬಂದ್ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ತಯಾರಿಗಳು ಪ್ರಾರಂಭಗೊಂಡಿವೆ.

ಬಹಿರಂಗ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್, ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ, ಆರ್‌ಕೆಎಸ್‌ನ ದಿವಾಕರ್‌, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ದಲಿತ ಸಂಘಟನೆ ವಕ್ಕೂಟದ ಮಾವಳ್ಳಿ ಶಂಕರ್ ಭಾಗವಹಿಸಿದ್ದರು.

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಬೆಂಗಳೂರಿನ  ಫ್ರೀಡಂ ಪಾರ್ಕ್ ಒಳಾವರಣದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಮಾಲೀ ಪಾಟೀಲ್, ಮೈಕೆಲ್ ಫರ್ನಾಂಡೀಸ್, ಎಸ್.ಆರ್.ಹಿರೇಮಠ ಅವರಿದ್ದ ಅಧ್ಯಕ್ಷೀಯ ಮಂಡಳಿ ಸೆ.16 ರಂದು ಸಮಾಲೋಚನಾ ಸಭೆ ನಡೆಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...