Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿ ಮಾಡಿ ಒಂದು ವರ್ಷವಾದ ಹಿನ್ನೆಲೆ ಅಕಾಲಿದಳ ದೆಹಲಿಯಲ್ಲಿ ’ಕರಾಳ ಶುಕ್ರವಾರ ಮೆರವಣಿಗೆ’ (black Friday march) ಆಯೋಜಿಸಿತ್ತು.

ಪ್ರತಿಭಟನೆ ನಡೆಸುತ್ತಿದ್ದ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್, ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಇತರ  12ಕ್ಕೂ ಹೆಚ್ಚು ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ಇತರರನ್ನು ಸೆಕ್ಷನ್ 144 ಉಲ್ಲಂಘನೆ ಆರೋಪದಲ್ಲಿ ಬಂಧಿಸಿ, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

“ನಾವು ಪ್ರತಿಭಟನೆ ನಡೆಸಲು ಬಂದಿದ್ದೆವು. ಇದು ಶಾಂತಿಯುತ ಪ್ರತಿಭಟನೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಆದರೆ, ದೆಹಲಿ ಪೊಲೀಸರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಅರವಿಂದ್ ಕೇಜ್ರೀವಾಲ್ ನಮಗೆ ಗುರುದ್ವಾರದಲ್ಲಿ ಸೇರುವಂತಿಲ್ಲ ಎಂದು ಆದೇಶ ನೀಡಿದೆ. ಒಕ್ಕೂಟ ಸರ್ಕಾರ ಕೂಡ ನಮ್ಮನ್ನು ತಡೆದಿದೆ. ಇದು ಪ್ರಜಾಪ್ರಭುತ್ವವಲ್ಲ” ಎಂದು ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಈ ಮೊದಲು ರೈತರು ಮತ್ತು ಅಕಾಲಿ ದಳದ ಕಾರ್ಯಕರ್ತರು ದೆಹಲಿಯ ಗಡಿಗಳಲ್ಲಿ ನೆರೆದಿದ್ದರು, ಆದರೆ, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ, ಪ್ರಮುಖ ರಸ್ತೆಗಳನ್ನು ಮುಚ್ಚಿದ್ದರು. ಜೊತೆಗೆ ಪ್ರತಿಭಟನಾಕಾರರು ಗಡಿಯನ್ನು ಪ್ರವೇಶಿಸುವುದನ್ನು ತಡೆಯಲು ಎರಡು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿದ್ದರು.

ಗುರುದ್ವಾರದ ರಕಾಬ್ ಗಂಜ್ ಸಾಹಿಬ್‌ನಿಂದ ನವದೆಹಲಿಯ ಸಂಸತ್ತಿನವರೆಗೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ರೈತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ ಎಂದು ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ತಿಳಿಸಿದ್ದರು.

ಕೃಷಿ ಕಾನೂನನ್ನು ವಿರೋಧಿಸಿ ಅಕಾಲಿದಳದ ಸಂಸದೆ ಹರ್ಸಿಮ್ರತ್ ಕೌರ್ ಒಕ್ಕೂಟ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದ್ದು ಮಾತ್ರವಲ್ಲದೆ, ಪಕ್ಷವು ಬಿಜೆಪಿ ನೇತೃತ್ವದ NDA ಮೈತ್ರಿ ಕೂಟದಿಂದ ಹೊರ ಬಂದಿತ್ತು.

ರೈತರು ಮತ್ತು ವಿರೋಧ ಪಕ್ಷಗಳು ಕಳೆದ ವರ್ಷದ ನವೆಂಬರ್ 26, 27 ರಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರೈತ ಮುಖಂಡರ ನಡುವೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ, ಆದರೆ ಎಲ್ಲವು ವಿಫಲವಾಗಿವೆ. ಸೆಪ್ಟಂಬರ್‌ 27ಕ್ಕೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ.


ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...