Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಅಕಾಲಿದಳದ ಮುಖ್ಯಸ್ಥರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿ ಮಾಡಿ ಒಂದು ವರ್ಷವಾದ ಹಿನ್ನೆಲೆ ಅಕಾಲಿದಳ ದೆಹಲಿಯಲ್ಲಿ ’ಕರಾಳ ಶುಕ್ರವಾರ ಮೆರವಣಿಗೆ’ (black Friday march) ಆಯೋಜಿಸಿತ್ತು.

ಪ್ರತಿಭಟನೆ ನಡೆಸುತ್ತಿದ್ದ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್, ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಇತರ  12ಕ್ಕೂ ಹೆಚ್ಚು ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ಇತರರನ್ನು ಸೆಕ್ಷನ್ 144 ಉಲ್ಲಂಘನೆ ಆರೋಪದಲ್ಲಿ ಬಂಧಿಸಿ, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

“ನಾವು ಪ್ರತಿಭಟನೆ ನಡೆಸಲು ಬಂದಿದ್ದೆವು. ಇದು ಶಾಂತಿಯುತ ಪ್ರತಿಭಟನೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಆದರೆ, ದೆಹಲಿ ಪೊಲೀಸರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಅರವಿಂದ್ ಕೇಜ್ರೀವಾಲ್ ನಮಗೆ ಗುರುದ್ವಾರದಲ್ಲಿ ಸೇರುವಂತಿಲ್ಲ ಎಂದು ಆದೇಶ ನೀಡಿದೆ. ಒಕ್ಕೂಟ ಸರ್ಕಾರ ಕೂಡ ನಮ್ಮನ್ನು ತಡೆದಿದೆ. ಇದು ಪ್ರಜಾಪ್ರಭುತ್ವವಲ್ಲ” ಎಂದು ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ರೈತ ಹೋರಾಟ: 4 ರಾಜ್ಯಗಳಿಂದ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಈ ಮೊದಲು ರೈತರು ಮತ್ತು ಅಕಾಲಿ ದಳದ ಕಾರ್ಯಕರ್ತರು ದೆಹಲಿಯ ಗಡಿಗಳಲ್ಲಿ ನೆರೆದಿದ್ದರು, ಆದರೆ, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ, ಪ್ರಮುಖ ರಸ್ತೆಗಳನ್ನು ಮುಚ್ಚಿದ್ದರು. ಜೊತೆಗೆ ಪ್ರತಿಭಟನಾಕಾರರು ಗಡಿಯನ್ನು ಪ್ರವೇಶಿಸುವುದನ್ನು ತಡೆಯಲು ಎರಡು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿದ್ದರು.

ಗುರುದ್ವಾರದ ರಕಾಬ್ ಗಂಜ್ ಸಾಹಿಬ್‌ನಿಂದ ನವದೆಹಲಿಯ ಸಂಸತ್ತಿನವರೆಗೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ರೈತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ ಎಂದು ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ತಿಳಿಸಿದ್ದರು.

ಕೃಷಿ ಕಾನೂನನ್ನು ವಿರೋಧಿಸಿ ಅಕಾಲಿದಳದ ಸಂಸದೆ ಹರ್ಸಿಮ್ರತ್ ಕೌರ್ ಒಕ್ಕೂಟ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದ್ದು ಮಾತ್ರವಲ್ಲದೆ, ಪಕ್ಷವು ಬಿಜೆಪಿ ನೇತೃತ್ವದ NDA ಮೈತ್ರಿ ಕೂಟದಿಂದ ಹೊರ ಬಂದಿತ್ತು.

ರೈತರು ಮತ್ತು ವಿರೋಧ ಪಕ್ಷಗಳು ಕಳೆದ ವರ್ಷದ ನವೆಂಬರ್ 26, 27 ರಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರೈತ ಮುಖಂಡರ ನಡುವೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ, ಆದರೆ ಎಲ್ಲವು ವಿಫಲವಾಗಿವೆ. ಸೆಪ್ಟಂಬರ್‌ 27ಕ್ಕೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ.


ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...