Homeಚಳವಳಿಹೋಲಿಕಾ ದಹನದಲ್ಲಿ ಕೃಷಿ ಕಾಯ್ದೆಗಳ ಪ್ರತಿ ದಹನ ಮಾಡಲಿರುವ ರೈತ ಹೋರಾಟಗಾರರು

ಹೋಲಿಕಾ ದಹನದಲ್ಲಿ ಕೃಷಿ ಕಾಯ್ದೆಗಳ ಪ್ರತಿ ದಹನ ಮಾಡಲಿರುವ ರೈತ ಹೋರಾಟಗಾರರು

- Advertisement -
- Advertisement -

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನುನೂಗಳನ್ನು ರದ್ದುಗಿಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು (ಮಾರ್ಚ್ 28) ಹೋಲಿಕಾ ದಹನದಲ್ಲಿ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು ಹೋಳಿ ಹಬ್ಬ ಆಚರಿಸಲಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸ್ವೀಕರಿಸಲು ನಿರಾಕರಿಸುತ್ತಿರುವ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಲು ಹೋಲಿಕಾ ದಹನದ ವೇಳೆ ಈ ಮೂರು ವಿವಾದಿತ ಕೃಷಿ ಕಾನೂನುಗಳನ್ನು ಸುಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಸಿದೆ.

ದುಷ್ಟರ ಮೇಲೆ ನಡೆದ ಒಳ್ಳೆತನದ ರೂಪಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಉತ್ತರ ಭಾರತದಲ್ಲಿ ಇದನ್ನು ಹೋಲಿಕಾ ದಹನವೆಂದು ಕರೆದರೆ, ದಕ್ಷಿಣ ಭಾರತದಲ್ಲಿ ಇದನ್ನು ಕಾಮ ದಹನವೆಂದು ಕರೆಯಲಾಗುತ್ತದೆ. ಹಾಗಾಗಿ ಇಂದು ಕೃಷಿ ಕಾನೂನುಗಳನ್ನು ಬೆಂಕಿಗೆ ಹಾಕಿ ಅವುಗಳ ವಿರುದ್ಧ ವಿಜಯವನ್ನು ಸೂಚಿಸುವ ಮೂಲಕ ಹಬ್ಬ ಆಚರಿಸಲಾಗುತ್ತದೆ ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಈ ಕುರಿತು ಕಿಸಾನ್ ಏಕ್ತಾ ಮೋರ್ಚಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕಳೆದ ಬಾರಿ ಲೋಹ್ರಿ (ಸಂಕ್ರಾಂತಿ) ಹಬ್ಬದಲ್ಲೂ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು ಹೋರಾಟನಿರತ ರೈತರು ಆಕ್ರೋಶ ಹೊರಹಾಕಿದ್ದರು.

ಕಳೆದ ನಾಲ್ಕು ತಿಂಗಳಿನಿಂದ ಪಂಜಾಬ್, ಹರಿಯಾಣ ಮೂಲದ ರೈತರು ಎಲ್ಲಾ ಹಬ್ಬ, ಹರಿದಿನಗಳನ್ನು ಪ್ರತಿಭಟನಾ ಸ್ಥಳಗಳಲ್ಲಿಯೇ ಆಚರಿಸುತ್ತಿದ್ದಾರೆ. ಎಲ್ಲಾ ಹಬ್ಬಗಳಲ್ಲೂ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮೂಲಕ ಎಷ್ಟೇ ತಿಂಗಳುಗಳಾದರೂ ಕಾಯ್ದೆಗಳು ರದ್ದಾಗುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂಮ ಸಂದೇಶ ರವಾನಿಸುತ್ತಿದ್ದಾರೆ.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...