Homeಚಳವಳಿಹೋಲಿಕಾ ದಹನದಲ್ಲಿ ಕೃಷಿ ಕಾಯ್ದೆಗಳ ಪ್ರತಿ ದಹನ ಮಾಡಲಿರುವ ರೈತ ಹೋರಾಟಗಾರರು

ಹೋಲಿಕಾ ದಹನದಲ್ಲಿ ಕೃಷಿ ಕಾಯ್ದೆಗಳ ಪ್ರತಿ ದಹನ ಮಾಡಲಿರುವ ರೈತ ಹೋರಾಟಗಾರರು

- Advertisement -
- Advertisement -

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನುನೂಗಳನ್ನು ರದ್ದುಗಿಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು (ಮಾರ್ಚ್ 28) ಹೋಲಿಕಾ ದಹನದಲ್ಲಿ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು ಹೋಳಿ ಹಬ್ಬ ಆಚರಿಸಲಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸ್ವೀಕರಿಸಲು ನಿರಾಕರಿಸುತ್ತಿರುವ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಲು ಹೋಲಿಕಾ ದಹನದ ವೇಳೆ ಈ ಮೂರು ವಿವಾದಿತ ಕೃಷಿ ಕಾನೂನುಗಳನ್ನು ಸುಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಸಿದೆ.

ದುಷ್ಟರ ಮೇಲೆ ನಡೆದ ಒಳ್ಳೆತನದ ರೂಪಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಉತ್ತರ ಭಾರತದಲ್ಲಿ ಇದನ್ನು ಹೋಲಿಕಾ ದಹನವೆಂದು ಕರೆದರೆ, ದಕ್ಷಿಣ ಭಾರತದಲ್ಲಿ ಇದನ್ನು ಕಾಮ ದಹನವೆಂದು ಕರೆಯಲಾಗುತ್ತದೆ. ಹಾಗಾಗಿ ಇಂದು ಕೃಷಿ ಕಾನೂನುಗಳನ್ನು ಬೆಂಕಿಗೆ ಹಾಕಿ ಅವುಗಳ ವಿರುದ್ಧ ವಿಜಯವನ್ನು ಸೂಚಿಸುವ ಮೂಲಕ ಹಬ್ಬ ಆಚರಿಸಲಾಗುತ್ತದೆ ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಈ ಕುರಿತು ಕಿಸಾನ್ ಏಕ್ತಾ ಮೋರ್ಚಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕಳೆದ ಬಾರಿ ಲೋಹ್ರಿ (ಸಂಕ್ರಾಂತಿ) ಹಬ್ಬದಲ್ಲೂ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು ಹೋರಾಟನಿರತ ರೈತರು ಆಕ್ರೋಶ ಹೊರಹಾಕಿದ್ದರು.

ಕಳೆದ ನಾಲ್ಕು ತಿಂಗಳಿನಿಂದ ಪಂಜಾಬ್, ಹರಿಯಾಣ ಮೂಲದ ರೈತರು ಎಲ್ಲಾ ಹಬ್ಬ, ಹರಿದಿನಗಳನ್ನು ಪ್ರತಿಭಟನಾ ಸ್ಥಳಗಳಲ್ಲಿಯೇ ಆಚರಿಸುತ್ತಿದ್ದಾರೆ. ಎಲ್ಲಾ ಹಬ್ಬಗಳಲ್ಲೂ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮೂಲಕ ಎಷ್ಟೇ ತಿಂಗಳುಗಳಾದರೂ ಕಾಯ್ದೆಗಳು ರದ್ದಾಗುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂಮ ಸಂದೇಶ ರವಾನಿಸುತ್ತಿದ್ದಾರೆ.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...