Homeಕರ್ನಾಟಕಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

ಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

- Advertisement -
- Advertisement -

ಕೊರೋನಾ ಸೋಂಕು ಪ್ರಸರಣ ಮತ್ತು ಅದರ ನಿಯಂತ್ರಣ ವಿಷಯಕ್ಕಿಂತ ಸದ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಾಕ್ ಡೌನ್ ನಿರ್ವಹಣೆಯ ಪೊಲೀಸರ ವರಸೆಯೇ ಹೆಚ್ಚು ಚರ್ಚೆಯಾಗತೊಡಗಿದೆ.

ಒಂದು ಕಡೆ; ಹಾಲು, ತರಕಾರಿ, ಔಷಧ ಮತ್ತಿತರ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿರುವ ಸರ್ಕಾರ, ಕನಿಷ್ಠ ಅಂತರ ಮತ್ತು ಸುರಕ್ಷಾ ಮಂಜಾಗ್ರತೆಯೊಂದಿಗೆ ಜನರು ತೀರಾ ಅನಿವಾರ್ಯ ಸಂದರ್ಭದಲ್ಲಿ ರಸ್ತೆಗಿಳಿಯಬಹುದು ಎಂದು ಹೇಳಿದೆ. ಆದರೆ, ಅದೇ ಹೊತ್ತಿಗೆ, ಪೊಲೀಸರು ಔಷಧಿ, ಕುಡಿಯುವ ನೀರು, ತರಕಾರಿ, ಹಾಲು ಮುಂತಾದ ವಸ್ತುಗಳ ತರಲು ಹೋದವರಿಗಷ್ಟೇ ಅಲ್ಲದೆ, ಸರ್ಕಾರದ ಆರೋಗ್ಯಸೇವೆಯಲ್ಲಿ ಕರ್ತವ್ಯನಿರತರಾದ ಸಿಬ್ಬಂದಿಯ ಮೇಲೂ ಲಾಠಿ ಬೀಸುತ್ತಿರುವ ಪ್ರಕರಣಗಳು ಎಲ್ಲೆಡೆಯಿಂದ ವರದಿಯಾಗುತ್ತಿವೆ. ಒಂದು ಕಡೆ ಸರ್ಕಾರದ ವಿನಾಯ್ತಿಯನ್ನೇ ಬಳಸಿಕೊಂಡು ತರಕಾರಿ- ದಿನಸಿ ಖರೀದಿಗೆ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಮುಗಿಬೀಳುವ ನಾಗರಿಕರು, ಮತ್ತೊಂದು ಕಡೆ ಲಾಕ್ ಡೌನ್ ಮತ್ತು ಕರ್ಫ್ಯೂಗೆ ವ್ಯತ್ಯಾಸವಿಲ್ಲದಂತೆ ಕಂಡಕಂಡವರ ಮೇಲೆ ಯಾವುದೇ ಪೂರ್ವಾಪರ ವಿಚಾರಿಸದೇ ಪೈಶಾಚಿಕ ದಾಳಿ ನಡೆಸುತ್ತಿರುವ ಪೊಲೀಸರು!

ಪೊಲೀಸರ ಇಂತಹ ವರಸೆಗೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲೇ ರೈತನೊಬ್ಬ ಜೀವ ಬಿಟ್ಟಿರುವ ಘಟನೆ ವರದಿಯಾಗಿದೆ. ಪೊಲೀಸರು ಆತನ ಸಾವಿಗೆ ತಾವು ಕಾರಣವಲ್ಲ; ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದರೂ, ವಾಸ್ತವವಾಗಿ ಶನಿವಾರ ರಾತ್ರಿ 10.30ರ ಸುಮಾರಿಗೆ ಜಮೀನಿಗೆ ನೀರು ಹಾಯಿಸಲು ಹೋಗಿ ವಾಪಸು ಬರುವಾಗ ಮನೆಯ ಸಮೀಪದ ಚೆಕ್ ಪೋಸ್ಟಿನಲ್ಲಿ ಪೊಲೀಸರು ತಮ್ಮ ತಂದೆಯನ್ನು ತಡೆದು ಒಂಟಿಯಾಗಿದ್ದ ಅವರ ಮೇಲೆ ದಾಳಿ ನಡೆಸಿದರು. ಲಾಠಿ ಏಟಿನಿಂದ ಅವರು ಸಾವು ಕಂಡಿದ್ದಾರೆ. ಎದೆಯ ಭಾಗದಲ್ಲಿ ಲಾಠಿ ಗುರುತುಗಳಿರುವುದೇ ಇದಕ್ಕೆ ನಿದರ್ಶನ ಎಂದು ಮೃತ ಲಕ್ಷ್ಮಣ ನಾಯ್ಕ(55)ನ ಪುತ್ರ ರಾಮಚಂದ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಣ್ಣದಕೊಪ್ಪದ ಲಕ್ಷ್ಮಣ ನಾಯ್ಕ ಅವರ ಶವದ ವೀಡಿಯೋ ದೃಶ್ಯಾವಳಿಗಳಲ್ಲಿ ಕೂಡ ಪೆಟ್ಟಿನ ಗುರುತುಗಳು ಕಾಣುತ್ತಿವೆ ಎಂಬುದು ಕೂಡ ಗಮನಾರ್ಹ. ಸ್ವತಃ ಲಕ್ಷ್ಮಣ ನಾಯ್ಕನ ಮನೆಮಂದಿ ಮತ್ತು ಗ್ರಾಮಸ್ಥರು ಕೂಡ ಇದು ಪೊಲೀಸರ ಲಾಠಿ ಏಟಿನಿಂದಲೇ ಆಗಿರುವ ಸಾವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿ, ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದು, ರಾಮಚಂದ್ರ ತನ್ನ ಲಜೇಜು ವಾಹನದಲ್ಲಿ ಎರಡು ಮೂರು ಬಾರಿ ಓಡಾಡಿದ್ದರಿಂದ ಪೊಲೀಸರು ತಡೆದು ಬುದ್ದಿವಾದ ಹೇಳಿದ್ದರು. ಅಷ್ಟರಲ್ಲಿ ಸಮೀಪದ ಮನೆಯಲ್ಲಿದ್ದ ಲಕ್ಷ್ಮಣ ಕೂಡ ಚೆಕ್ ಪೋಸ್ಟ್ ಬಳಿ ಬಂದಿದ್ದರು. ಬಳಿಕ ಪೊಲೀಸರು ಅಪ್ಪ- ಮಗ ಇಬ್ಬರನ್ನೂ ಮನೆಗೆ ಕಳಿಸಿದ್ದರು. ಆಗ ನಡೆದುಕೊಂಡು ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಕುಸಿದುಬಿದ್ದು ಲಕ್ಷ್ಮಣ ಸಾವು ಕಂಡಿದ್ದಾರೆ ಎಂದು ತಮ್ಮ ಸಿಬ್ಬಂದಿ ತಿಳಿಸಿದ್ದಾರೆ ಎಂದಿದ್ದಾರೆ. ಆದರೆ, ರಾಮಚಂದ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಲಾಗುವುದು. ಶವಪರೀಕ್ಷೆಯ ವರದಿ ಬಂದ ಬಳಿಕ ತನಿಖೆ ಆರಂಭವಾಗುವುದು ಎಂದಿದ್ದಾರೆ.

ಇದನ್ನು ಓದಿ: ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಆದರೆ, ಪೊಲೀಸರ ಹೇಳಿಕೆ ಪ್ರಕಾರವೇ ರಾಮಚಂದ್ರ ಒಂಟಿಯಾಗಿ ತನ್ನ ಲಗೇಜ್ ಆಟೋದಲ್ಲಿ ತನ್ನ ಹೊಲಕ್ಕೆ ಎರಡು ಮೂರು ಬಾರಿ ಓಡಾಡಿದ್ದರಲ್ಲಿ ಲಾಕ್ ಡೌನ್ ಉಲ್ಲಂಘನೆಯ ಪ್ರಶ್ನೆ ಎಲ್ಲಿದೆ? ಒಬ್ಬ ರೈತ ಬೇಸಿಗೆಯಲ್ಲಿ ಬೆಳೆಗೆ ನೀರು ಹಾಯಿಸಲು ವಿದ್ಯುತ್ ಅಭಾವದ ನಡುವೆ ಹತ್ತಾರು ಬಾರಿ ಹೊಲಕ್ಕೆ ಓಡಾಡಬೇಕಾಗುತ್ತದೆ. ಅದೂ ಆತ ಒಂಟಿಯಾಗಿ ಓಡಾಡುವುದರಿಂದ ಮತ್ತೊಬ್ಬರಿಗೆ ಸೋಂಕು ಹರಡಿಸುವ ಅಥವಾ ಸೋಂಕಿಗೆ ಸ್ವತಃ ಒಳಗಾಗುವ ಪ್ರಮೇಯ ಕೂಡ ಇರದು. ಹಾಗಿದ್ದರೂ ಪೊಲೀಸರು ಯಾಕೆ ಆತನನ್ನು ಚೆಕ್ ಪೋಸ್ಟ್ ನಲ್ಲಿ ತಡೆದು, ಮನೆಯಲ್ಲಿದ್ದ ಆತನ ತಂದೆ ರಸ್ತೆಗೆ ಬರುವಂತೆ ಮಾಡಿದರು ? ಎಂಬುದು ತನಿಖೆಯಾಗಬೇಕಾದ ಸಂಗತಿ. ಪೊಲೀಸರು ಹೊಡೆದಿಲ್ಲವೆಂಬ ಮಾತನ್ನು ಒಪ್ಪಿಕೊಂಡರೂ, ಅವರು ಆತನನ್ನು ತಡೆದಿದ್ದು ಯಾವ ಕಾರಣಕ್ಕೆ ಎಂಬುದು ಕೂಡ ಅನುಮಾಸ್ಪದವಾಗಿದೆ. ಲಾಕ್ ಡೌನ್ ಇರುವಾಗ ರೈತರು ಏಕಾಂಗಿಯಾಗಿ ತನ್ನ ಹೊಲಕ್ಕೆ ಹೋಗಬಾರದು ಎಂಬ ಕಾನೂನು ಇದೆಯೇ ಎಂಬ ಪ್ರಶ್ನೆ ಕೂಡ ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ.

ಈ ನಡುವೆ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಗಾವಿಯಲ್ಲಿ ನಡೆದಿದೆ. ಅಲ್ಲಿನ ಆರೋಗ್ಯ ಇಲಾಖೆಯ ನೌಕರರೊಬ್ಬರು ಕರೋನಾ ಕಾರ್ಯಾಚರಣೆಯ ಮೇಲೆ ಕರ್ತವ್ಯದಲ್ಲಿದ್ದವರನ್ನೇ ಪೊಲೀಸರು ಮನಸೋಇಚ್ಛೆ ಥಳಿಸಿ ಕೈಕಾಲು ಮುರಿದು ಆಸ್ಪತ್ರೆಗೆ ಸೇರುವಂತೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅವರ ವೀಡಿಯೋದಲ್ಲಿ, ‘ತಾವು ಜಿಲ್ಲಾಧಿಕಾರಿಗಳು ಕರೆದಿರುವ ವಿಶೇಷ ಸಭೆಗೆ ತೆರಳುತ್ತಿದ್ದೇನೆ. ಕರ್ತವ್ಯದ ಮೇಲೆ ಇರುವ ಆರೋಗ್ಯ ಇಲಾಖೆ ನೌಕರ ಎಂದು ಕಡತ ತೋರಿಸಿದರೂ ಪೊಲೀಸರು ಅಟ್ಟಾಡಿಸಿ ಹೊಡೆದರು. ತಮ್ಮ ಐಡಿ ಕಾರ್ಡು, ಕಡತ ಯಾವುದನ್ನು ತೋರಿಸಿದರೂ ಅದನ್ನು ಕೇಳುವ ವ್ಯವಧಾನವೇ ಇರಲಿಲ್ಲ. 25-30 ಬಾರಿ ಪೊಲೀಸರು ಗುಂಪಾಗಿ ಹೊಡೆದ ಪರಿಣಾಮ ಒಂದು ಕೈ ಮುರಿದಿದೆ. ಕಾಲು ಮತ್ತು ಬೆನ್ನಿಗೆ ತೀವ್ರ ಪೆಟ್ಟಾಗಿದೆ” ಎಂದು ಹೇಳಿದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಕೈಗೆ ಬ್ಯಾಂಡೇಜು ಹಾಕಿಸಿಕೊಂಡು ಅವರು ನೀಡಿರುವ ಹೇಳಿಕೆಯ ವೀಡಿಯೋ ಈಗ ವೈರಲ್ ಆಗಿದೆ.

ಇದನ್ನು ಓದಿ: ಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಪೊಲೀಸರಿಗೆ ಮುಖ್ಯವಾಗಿ; ಕರ್ಫ್ಯೂ ಮತ್ತು ಲಾಕ್ ಡೌನ್ ನಡುವೆ ಇರುವ ವ್ಯತ್ಯಾಸದ ಬಗ್ಗೆ ಹಿರಿಯ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೇ ಇರುವುದೇ ಪೊಲೀಸರ ಈ ಅಟ್ಟಹಾಸಕ್ಕೆ ಕಾರಣ ಎನ್ನಲಾಗುತ್ತಿದೆ. ವೃದ್ಧರು, ಮಕ್ಕಳು ಮರಿ, ಮಹಿಳೆಯರೆನ್ನದೆ ಪೊಲೀಸರು ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದಾರೆ. ಇಷ್ಟಾಗಿಯೂ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತುಟಿಬಿಚ್ಚಿಲ್ಲ. ಕಾನೂನು ಸುವ್ಯವಸ್ಥೆ ಕಾಯುವ ಕರ್ಫ್ಯೂ ಸಂದರ್ಭಕ್ಕೂ ಒಂದು ಸಾಂಕ್ರಾಮಿಕದ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೇರುವ ಲಾಕ್ ಡೌನ್ ಸಂದರ್ಭಕ್ಕೂ ಇರುವ ವ್ಯತ್ಯಾಸ ಸ್ವತಃ ಗೃಹ ಸಚಿವರಿಗೆ ಸ್ಪಷ್ಟವಿದ್ದಂತಿಲ್ಲ. ಹಾಗಾಗಿಯೇ ಇಷ್ಟೊಂದು ಅವಘಡಗಳಿಗೆ ಈ ಲಾಕ್ ಡೌನ್ ಸಾಕ್ಷಿಯಾಗುತ್ತಿದೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ಈ ನಡುವೆ, ಹಲವು ಸಾಮಾಜಿಕ ಸಂಘಟನೆಗಳು ಮತ್ತು ಹೋರಾಟಗಾರರು ಪೊಲೀಸರ ಕ್ರಮವನ್ನು ಖಂಡಿಸಿದ್ದು, “ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಮೊಂಡುತನದ ಜನರನ್ನು ಆ ಶಿಸ್ತಿಗೆ ಒಗ್ಗಿಸಲು ಪೊಲೀಸರು ಬೀದಿಗಿಳಿಯುವುದು ಕೂಡ ಅನಿವಾರ್ಯ. ಆದರೆ, ರಸ್ತೆಯಲ್ಲಿ ಸಂಚರಿಸುವ ವ್ಯಕ್ತಿ ಏಕೆ ಬಂದಿದ್ದಾನೆ ಎಂಬುದನ್ನು ತಿಳಿಯುವ ತಾಳ್ಮೆ ಪೊಲೀಸರಿಗೆ ಇರಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿಯೂ ಜನ ತೀರಾ ಅನಿವಾರ್ಯವಿಲ್ಲದೆ ತಮ್ಮ ಸುರಕ್ಷತೆಯನ್ನೂ ಪಣಕ್ಕಿಟ್ಟು ರಸ್ತೆಗೆ ಇಳಿಯಲಾರರು ಎಂಬುದು ಸಾಮಾನ್ಯ ಜ್ಞಾನ. ಪೊಲೀಸರು ಇದನ್ನು ಅರ್ಥಮಾಡಿಕೊಂಡು ಒಂದಿಷ್ಟು ಸಂಯಮದಿಂದ ವರ್ತಿಸದೇ ಹೋದರೆ, ಕರೋನಾ ಸಾವಿಗೆ ಮುನ್ನವೇ ಜನರ ಲಾಠಿ ಏಟಿಗೆ ಸಾಯುವ ಪರಿಸ್ಥಿತಿ ತಲೆದೋರಬಹುದು” ಎಂಬ ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ ವಕೀಲ ಕೆ ಪಿ ಶ್ರೀಪಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

“ಮುಖ್ಯವಾಗಿ ಶಿಕಾರಿಪುರ ತಾಲ್ಲೂಕಿನ ರೈತನ ಸಾವಿನ ಕುರಿತು ಪ್ರತ್ಯೇಕವಾಗಿ ನ್ಯಾಯಾಂಗ ತನಿಖೆಯಾಗಬೇಕು. ಏಕೆಂದರೆ, ಸಾವಿನ ವಿಷಯದಲ್ಲಿ ಜನರು ಮತ್ತು ಕುಟುಂಬವರ್ಗದವರು ಹೇಳುವ ಸಂಗತಿಗಳಿಗೂ, ಪೊಲೀಸರ ಸ್ಪಷ್ಟನೆಗೆ ಸಾಕಷ್ಟು ಗೊಂದಲವಿದೆ. ಜೊತೆಗೆ ರೈತನೊಬ್ಬ ತನ್ನ ಹೊಲಕ್ಕೆ ನೀರು ಬಿಡಲು ಹೋಗುತ್ತಿದ್ದಾಗ ಆತನನ್ನು ತಡೆದು ಆತಂಕ ಮೂಡಿಸುವ ಪ್ರಮೇಯವೇ ಇಲ್ಲ. ಹಾಗಿದ್ದರೂ ಚೆಕ್ ಪೋಸ್ಟ್ ಪೊಲೀಸರು ಯಾಕೆ ಹಾಗೆ ಮಾಡಿದರು? ಎಂಬ ಪ್ರಶ್ನೆಯೂ ಇದೆ. ಹಾಗಾಗಿ ಘಟನೆ ಕುರಿತು ನ್ಯಾಯಾಂಗ ತನಿಖೆಯಾಗಬೇಕು ಮತ್ತು ಒಂದು ವೇಳೆ ಪೊಲೀಸರ ತಪ್ಪಿದ್ದರೆ, ತಕ್ಕ ಶಿಕ್ಷೆಯಾಗಬೇಕು” ಎಂದೂ ಶ್ರೀಪಾಲ್ ಆಗ್ರಹಿಸಿದ್ದಾರೆ.

ಈ ನಡುವೆ, ಜನರು ಅಗತ್ಯ ವಸ್ತಗಳಿಗಾಗಿ ಹೊರಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ವಿವಿಧ ಜಿಲ್ಲಾಡಳಿತಗಳು ಪ್ರತಿ ಮನೆ ಬಾಗಿಲಿಗೆ ತರಕಾರಿ, ಹಾಲು, ಹಣ್ಣು ಮುಂತಾದ ವಸ್ತುಗಳನ್ನು ತಲುಪಿಸುವ ಕ್ರಮಕೈಗೊಳ್ಳುತ್ತಿವೆ. ಜೊತೆಗೆ ಔಷಧಿ, ಆಹಾರ ಪದಾರ್ಥ ಮುಂತಾದ ತುರ್ತು ಅಗತ್ಯಗಳನ್ನು ಕೂಡ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ವೃತ್ತಿನಿರತರ ಸ್ವಯಂಸೇವಕರನ್ನು ಬಳಸಿಕೊಂಡು ಪರಿಣಾಮಕಾರಿ ವ್ಯವಸ್ಥೆ ಜಾರಿಗೊಳಿಸಿದ್ದಲ್ಲಿ ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ. ಆ ದಿಸೆಯಲ್ಲಿ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳು ಹೆಚ್ಚು ಗಮನ ಹರಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...