Homeಕರ್ನಾಟಕಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

ಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

- Advertisement -
- Advertisement -

ಕೊರೋನಾ ಸೋಂಕು ಪ್ರಸರಣ ಮತ್ತು ಅದರ ನಿಯಂತ್ರಣ ವಿಷಯಕ್ಕಿಂತ ಸದ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಾಕ್ ಡೌನ್ ನಿರ್ವಹಣೆಯ ಪೊಲೀಸರ ವರಸೆಯೇ ಹೆಚ್ಚು ಚರ್ಚೆಯಾಗತೊಡಗಿದೆ.

ಒಂದು ಕಡೆ; ಹಾಲು, ತರಕಾರಿ, ಔಷಧ ಮತ್ತಿತರ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿರುವ ಸರ್ಕಾರ, ಕನಿಷ್ಠ ಅಂತರ ಮತ್ತು ಸುರಕ್ಷಾ ಮಂಜಾಗ್ರತೆಯೊಂದಿಗೆ ಜನರು ತೀರಾ ಅನಿವಾರ್ಯ ಸಂದರ್ಭದಲ್ಲಿ ರಸ್ತೆಗಿಳಿಯಬಹುದು ಎಂದು ಹೇಳಿದೆ. ಆದರೆ, ಅದೇ ಹೊತ್ತಿಗೆ, ಪೊಲೀಸರು ಔಷಧಿ, ಕುಡಿಯುವ ನೀರು, ತರಕಾರಿ, ಹಾಲು ಮುಂತಾದ ವಸ್ತುಗಳ ತರಲು ಹೋದವರಿಗಷ್ಟೇ ಅಲ್ಲದೆ, ಸರ್ಕಾರದ ಆರೋಗ್ಯಸೇವೆಯಲ್ಲಿ ಕರ್ತವ್ಯನಿರತರಾದ ಸಿಬ್ಬಂದಿಯ ಮೇಲೂ ಲಾಠಿ ಬೀಸುತ್ತಿರುವ ಪ್ರಕರಣಗಳು ಎಲ್ಲೆಡೆಯಿಂದ ವರದಿಯಾಗುತ್ತಿವೆ. ಒಂದು ಕಡೆ ಸರ್ಕಾರದ ವಿನಾಯ್ತಿಯನ್ನೇ ಬಳಸಿಕೊಂಡು ತರಕಾರಿ- ದಿನಸಿ ಖರೀದಿಗೆ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಮುಗಿಬೀಳುವ ನಾಗರಿಕರು, ಮತ್ತೊಂದು ಕಡೆ ಲಾಕ್ ಡೌನ್ ಮತ್ತು ಕರ್ಫ್ಯೂಗೆ ವ್ಯತ್ಯಾಸವಿಲ್ಲದಂತೆ ಕಂಡಕಂಡವರ ಮೇಲೆ ಯಾವುದೇ ಪೂರ್ವಾಪರ ವಿಚಾರಿಸದೇ ಪೈಶಾಚಿಕ ದಾಳಿ ನಡೆಸುತ್ತಿರುವ ಪೊಲೀಸರು!

ಪೊಲೀಸರ ಇಂತಹ ವರಸೆಗೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲೇ ರೈತನೊಬ್ಬ ಜೀವ ಬಿಟ್ಟಿರುವ ಘಟನೆ ವರದಿಯಾಗಿದೆ. ಪೊಲೀಸರು ಆತನ ಸಾವಿಗೆ ತಾವು ಕಾರಣವಲ್ಲ; ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದರೂ, ವಾಸ್ತವವಾಗಿ ಶನಿವಾರ ರಾತ್ರಿ 10.30ರ ಸುಮಾರಿಗೆ ಜಮೀನಿಗೆ ನೀರು ಹಾಯಿಸಲು ಹೋಗಿ ವಾಪಸು ಬರುವಾಗ ಮನೆಯ ಸಮೀಪದ ಚೆಕ್ ಪೋಸ್ಟಿನಲ್ಲಿ ಪೊಲೀಸರು ತಮ್ಮ ತಂದೆಯನ್ನು ತಡೆದು ಒಂಟಿಯಾಗಿದ್ದ ಅವರ ಮೇಲೆ ದಾಳಿ ನಡೆಸಿದರು. ಲಾಠಿ ಏಟಿನಿಂದ ಅವರು ಸಾವು ಕಂಡಿದ್ದಾರೆ. ಎದೆಯ ಭಾಗದಲ್ಲಿ ಲಾಠಿ ಗುರುತುಗಳಿರುವುದೇ ಇದಕ್ಕೆ ನಿದರ್ಶನ ಎಂದು ಮೃತ ಲಕ್ಷ್ಮಣ ನಾಯ್ಕ(55)ನ ಪುತ್ರ ರಾಮಚಂದ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಣ್ಣದಕೊಪ್ಪದ ಲಕ್ಷ್ಮಣ ನಾಯ್ಕ ಅವರ ಶವದ ವೀಡಿಯೋ ದೃಶ್ಯಾವಳಿಗಳಲ್ಲಿ ಕೂಡ ಪೆಟ್ಟಿನ ಗುರುತುಗಳು ಕಾಣುತ್ತಿವೆ ಎಂಬುದು ಕೂಡ ಗಮನಾರ್ಹ. ಸ್ವತಃ ಲಕ್ಷ್ಮಣ ನಾಯ್ಕನ ಮನೆಮಂದಿ ಮತ್ತು ಗ್ರಾಮಸ್ಥರು ಕೂಡ ಇದು ಪೊಲೀಸರ ಲಾಠಿ ಏಟಿನಿಂದಲೇ ಆಗಿರುವ ಸಾವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿ, ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದು, ರಾಮಚಂದ್ರ ತನ್ನ ಲಜೇಜು ವಾಹನದಲ್ಲಿ ಎರಡು ಮೂರು ಬಾರಿ ಓಡಾಡಿದ್ದರಿಂದ ಪೊಲೀಸರು ತಡೆದು ಬುದ್ದಿವಾದ ಹೇಳಿದ್ದರು. ಅಷ್ಟರಲ್ಲಿ ಸಮೀಪದ ಮನೆಯಲ್ಲಿದ್ದ ಲಕ್ಷ್ಮಣ ಕೂಡ ಚೆಕ್ ಪೋಸ್ಟ್ ಬಳಿ ಬಂದಿದ್ದರು. ಬಳಿಕ ಪೊಲೀಸರು ಅಪ್ಪ- ಮಗ ಇಬ್ಬರನ್ನೂ ಮನೆಗೆ ಕಳಿಸಿದ್ದರು. ಆಗ ನಡೆದುಕೊಂಡು ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಕುಸಿದುಬಿದ್ದು ಲಕ್ಷ್ಮಣ ಸಾವು ಕಂಡಿದ್ದಾರೆ ಎಂದು ತಮ್ಮ ಸಿಬ್ಬಂದಿ ತಿಳಿಸಿದ್ದಾರೆ ಎಂದಿದ್ದಾರೆ. ಆದರೆ, ರಾಮಚಂದ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಲಾಗುವುದು. ಶವಪರೀಕ್ಷೆಯ ವರದಿ ಬಂದ ಬಳಿಕ ತನಿಖೆ ಆರಂಭವಾಗುವುದು ಎಂದಿದ್ದಾರೆ.

ಇದನ್ನು ಓದಿ: ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಆದರೆ, ಪೊಲೀಸರ ಹೇಳಿಕೆ ಪ್ರಕಾರವೇ ರಾಮಚಂದ್ರ ಒಂಟಿಯಾಗಿ ತನ್ನ ಲಗೇಜ್ ಆಟೋದಲ್ಲಿ ತನ್ನ ಹೊಲಕ್ಕೆ ಎರಡು ಮೂರು ಬಾರಿ ಓಡಾಡಿದ್ದರಲ್ಲಿ ಲಾಕ್ ಡೌನ್ ಉಲ್ಲಂಘನೆಯ ಪ್ರಶ್ನೆ ಎಲ್ಲಿದೆ? ಒಬ್ಬ ರೈತ ಬೇಸಿಗೆಯಲ್ಲಿ ಬೆಳೆಗೆ ನೀರು ಹಾಯಿಸಲು ವಿದ್ಯುತ್ ಅಭಾವದ ನಡುವೆ ಹತ್ತಾರು ಬಾರಿ ಹೊಲಕ್ಕೆ ಓಡಾಡಬೇಕಾಗುತ್ತದೆ. ಅದೂ ಆತ ಒಂಟಿಯಾಗಿ ಓಡಾಡುವುದರಿಂದ ಮತ್ತೊಬ್ಬರಿಗೆ ಸೋಂಕು ಹರಡಿಸುವ ಅಥವಾ ಸೋಂಕಿಗೆ ಸ್ವತಃ ಒಳಗಾಗುವ ಪ್ರಮೇಯ ಕೂಡ ಇರದು. ಹಾಗಿದ್ದರೂ ಪೊಲೀಸರು ಯಾಕೆ ಆತನನ್ನು ಚೆಕ್ ಪೋಸ್ಟ್ ನಲ್ಲಿ ತಡೆದು, ಮನೆಯಲ್ಲಿದ್ದ ಆತನ ತಂದೆ ರಸ್ತೆಗೆ ಬರುವಂತೆ ಮಾಡಿದರು ? ಎಂಬುದು ತನಿಖೆಯಾಗಬೇಕಾದ ಸಂಗತಿ. ಪೊಲೀಸರು ಹೊಡೆದಿಲ್ಲವೆಂಬ ಮಾತನ್ನು ಒಪ್ಪಿಕೊಂಡರೂ, ಅವರು ಆತನನ್ನು ತಡೆದಿದ್ದು ಯಾವ ಕಾರಣಕ್ಕೆ ಎಂಬುದು ಕೂಡ ಅನುಮಾಸ್ಪದವಾಗಿದೆ. ಲಾಕ್ ಡೌನ್ ಇರುವಾಗ ರೈತರು ಏಕಾಂಗಿಯಾಗಿ ತನ್ನ ಹೊಲಕ್ಕೆ ಹೋಗಬಾರದು ಎಂಬ ಕಾನೂನು ಇದೆಯೇ ಎಂಬ ಪ್ರಶ್ನೆ ಕೂಡ ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ.

ಈ ನಡುವೆ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಗಾವಿಯಲ್ಲಿ ನಡೆದಿದೆ. ಅಲ್ಲಿನ ಆರೋಗ್ಯ ಇಲಾಖೆಯ ನೌಕರರೊಬ್ಬರು ಕರೋನಾ ಕಾರ್ಯಾಚರಣೆಯ ಮೇಲೆ ಕರ್ತವ್ಯದಲ್ಲಿದ್ದವರನ್ನೇ ಪೊಲೀಸರು ಮನಸೋಇಚ್ಛೆ ಥಳಿಸಿ ಕೈಕಾಲು ಮುರಿದು ಆಸ್ಪತ್ರೆಗೆ ಸೇರುವಂತೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅವರ ವೀಡಿಯೋದಲ್ಲಿ, ‘ತಾವು ಜಿಲ್ಲಾಧಿಕಾರಿಗಳು ಕರೆದಿರುವ ವಿಶೇಷ ಸಭೆಗೆ ತೆರಳುತ್ತಿದ್ದೇನೆ. ಕರ್ತವ್ಯದ ಮೇಲೆ ಇರುವ ಆರೋಗ್ಯ ಇಲಾಖೆ ನೌಕರ ಎಂದು ಕಡತ ತೋರಿಸಿದರೂ ಪೊಲೀಸರು ಅಟ್ಟಾಡಿಸಿ ಹೊಡೆದರು. ತಮ್ಮ ಐಡಿ ಕಾರ್ಡು, ಕಡತ ಯಾವುದನ್ನು ತೋರಿಸಿದರೂ ಅದನ್ನು ಕೇಳುವ ವ್ಯವಧಾನವೇ ಇರಲಿಲ್ಲ. 25-30 ಬಾರಿ ಪೊಲೀಸರು ಗುಂಪಾಗಿ ಹೊಡೆದ ಪರಿಣಾಮ ಒಂದು ಕೈ ಮುರಿದಿದೆ. ಕಾಲು ಮತ್ತು ಬೆನ್ನಿಗೆ ತೀವ್ರ ಪೆಟ್ಟಾಗಿದೆ” ಎಂದು ಹೇಳಿದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಕೈಗೆ ಬ್ಯಾಂಡೇಜು ಹಾಕಿಸಿಕೊಂಡು ಅವರು ನೀಡಿರುವ ಹೇಳಿಕೆಯ ವೀಡಿಯೋ ಈಗ ವೈರಲ್ ಆಗಿದೆ.

ಇದನ್ನು ಓದಿ: ಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಪೊಲೀಸರಿಗೆ ಮುಖ್ಯವಾಗಿ; ಕರ್ಫ್ಯೂ ಮತ್ತು ಲಾಕ್ ಡೌನ್ ನಡುವೆ ಇರುವ ವ್ಯತ್ಯಾಸದ ಬಗ್ಗೆ ಹಿರಿಯ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೇ ಇರುವುದೇ ಪೊಲೀಸರ ಈ ಅಟ್ಟಹಾಸಕ್ಕೆ ಕಾರಣ ಎನ್ನಲಾಗುತ್ತಿದೆ. ವೃದ್ಧರು, ಮಕ್ಕಳು ಮರಿ, ಮಹಿಳೆಯರೆನ್ನದೆ ಪೊಲೀಸರು ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದಾರೆ. ಇಷ್ಟಾಗಿಯೂ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತುಟಿಬಿಚ್ಚಿಲ್ಲ. ಕಾನೂನು ಸುವ್ಯವಸ್ಥೆ ಕಾಯುವ ಕರ್ಫ್ಯೂ ಸಂದರ್ಭಕ್ಕೂ ಒಂದು ಸಾಂಕ್ರಾಮಿಕದ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೇರುವ ಲಾಕ್ ಡೌನ್ ಸಂದರ್ಭಕ್ಕೂ ಇರುವ ವ್ಯತ್ಯಾಸ ಸ್ವತಃ ಗೃಹ ಸಚಿವರಿಗೆ ಸ್ಪಷ್ಟವಿದ್ದಂತಿಲ್ಲ. ಹಾಗಾಗಿಯೇ ಇಷ್ಟೊಂದು ಅವಘಡಗಳಿಗೆ ಈ ಲಾಕ್ ಡೌನ್ ಸಾಕ್ಷಿಯಾಗುತ್ತಿದೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ಈ ನಡುವೆ, ಹಲವು ಸಾಮಾಜಿಕ ಸಂಘಟನೆಗಳು ಮತ್ತು ಹೋರಾಟಗಾರರು ಪೊಲೀಸರ ಕ್ರಮವನ್ನು ಖಂಡಿಸಿದ್ದು, “ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಮೊಂಡುತನದ ಜನರನ್ನು ಆ ಶಿಸ್ತಿಗೆ ಒಗ್ಗಿಸಲು ಪೊಲೀಸರು ಬೀದಿಗಿಳಿಯುವುದು ಕೂಡ ಅನಿವಾರ್ಯ. ಆದರೆ, ರಸ್ತೆಯಲ್ಲಿ ಸಂಚರಿಸುವ ವ್ಯಕ್ತಿ ಏಕೆ ಬಂದಿದ್ದಾನೆ ಎಂಬುದನ್ನು ತಿಳಿಯುವ ತಾಳ್ಮೆ ಪೊಲೀಸರಿಗೆ ಇರಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿಯೂ ಜನ ತೀರಾ ಅನಿವಾರ್ಯವಿಲ್ಲದೆ ತಮ್ಮ ಸುರಕ್ಷತೆಯನ್ನೂ ಪಣಕ್ಕಿಟ್ಟು ರಸ್ತೆಗೆ ಇಳಿಯಲಾರರು ಎಂಬುದು ಸಾಮಾನ್ಯ ಜ್ಞಾನ. ಪೊಲೀಸರು ಇದನ್ನು ಅರ್ಥಮಾಡಿಕೊಂಡು ಒಂದಿಷ್ಟು ಸಂಯಮದಿಂದ ವರ್ತಿಸದೇ ಹೋದರೆ, ಕರೋನಾ ಸಾವಿಗೆ ಮುನ್ನವೇ ಜನರ ಲಾಠಿ ಏಟಿಗೆ ಸಾಯುವ ಪರಿಸ್ಥಿತಿ ತಲೆದೋರಬಹುದು” ಎಂಬ ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ ವಕೀಲ ಕೆ ಪಿ ಶ್ರೀಪಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

“ಮುಖ್ಯವಾಗಿ ಶಿಕಾರಿಪುರ ತಾಲ್ಲೂಕಿನ ರೈತನ ಸಾವಿನ ಕುರಿತು ಪ್ರತ್ಯೇಕವಾಗಿ ನ್ಯಾಯಾಂಗ ತನಿಖೆಯಾಗಬೇಕು. ಏಕೆಂದರೆ, ಸಾವಿನ ವಿಷಯದಲ್ಲಿ ಜನರು ಮತ್ತು ಕುಟುಂಬವರ್ಗದವರು ಹೇಳುವ ಸಂಗತಿಗಳಿಗೂ, ಪೊಲೀಸರ ಸ್ಪಷ್ಟನೆಗೆ ಸಾಕಷ್ಟು ಗೊಂದಲವಿದೆ. ಜೊತೆಗೆ ರೈತನೊಬ್ಬ ತನ್ನ ಹೊಲಕ್ಕೆ ನೀರು ಬಿಡಲು ಹೋಗುತ್ತಿದ್ದಾಗ ಆತನನ್ನು ತಡೆದು ಆತಂಕ ಮೂಡಿಸುವ ಪ್ರಮೇಯವೇ ಇಲ್ಲ. ಹಾಗಿದ್ದರೂ ಚೆಕ್ ಪೋಸ್ಟ್ ಪೊಲೀಸರು ಯಾಕೆ ಹಾಗೆ ಮಾಡಿದರು? ಎಂಬ ಪ್ರಶ್ನೆಯೂ ಇದೆ. ಹಾಗಾಗಿ ಘಟನೆ ಕುರಿತು ನ್ಯಾಯಾಂಗ ತನಿಖೆಯಾಗಬೇಕು ಮತ್ತು ಒಂದು ವೇಳೆ ಪೊಲೀಸರ ತಪ್ಪಿದ್ದರೆ, ತಕ್ಕ ಶಿಕ್ಷೆಯಾಗಬೇಕು” ಎಂದೂ ಶ್ರೀಪಾಲ್ ಆಗ್ರಹಿಸಿದ್ದಾರೆ.

ಈ ನಡುವೆ, ಜನರು ಅಗತ್ಯ ವಸ್ತಗಳಿಗಾಗಿ ಹೊರಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ವಿವಿಧ ಜಿಲ್ಲಾಡಳಿತಗಳು ಪ್ರತಿ ಮನೆ ಬಾಗಿಲಿಗೆ ತರಕಾರಿ, ಹಾಲು, ಹಣ್ಣು ಮುಂತಾದ ವಸ್ತುಗಳನ್ನು ತಲುಪಿಸುವ ಕ್ರಮಕೈಗೊಳ್ಳುತ್ತಿವೆ. ಜೊತೆಗೆ ಔಷಧಿ, ಆಹಾರ ಪದಾರ್ಥ ಮುಂತಾದ ತುರ್ತು ಅಗತ್ಯಗಳನ್ನು ಕೂಡ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ವೃತ್ತಿನಿರತರ ಸ್ವಯಂಸೇವಕರನ್ನು ಬಳಸಿಕೊಂಡು ಪರಿಣಾಮಕಾರಿ ವ್ಯವಸ್ಥೆ ಜಾರಿಗೊಳಿಸಿದ್ದಲ್ಲಿ ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ. ಆ ದಿಸೆಯಲ್ಲಿ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳು ಹೆಚ್ಚು ಗಮನ ಹರಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...