Homeಚಳವಳಿರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ - ನೀವು ತಿಳಿದಿರಬೇಕಾದ 10 ಅಂಶಗಳು

ರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ – ನೀವು ತಿಳಿದಿರಬೇಕಾದ 10 ಅಂಶಗಳು

ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ, ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ತಾನು ಒಂದಿಂಚೂ ಹಿಂದೆ ಸರಿಯುತಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ. ಅದರ ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

ಇದುವರೆಗೂ ರೈತರೊಂದಿಗೆ ಎಂಟು ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿದೆ. ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಂಟನೇ ಮಾತುಕತೆ ವಿಫಲಗೊಂಡ ಪರಿಣಾಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದು, ಜನವರಿ 26 ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಒಂಬತ್ತನೆ ಸುತ್ತಿನ ಮಾತುಕತೆಗೆ ಶುಕ್ರವಾರ(ಇಂದು) ರೈತರನ್ನು ಆಹ್ವಾನಿಸಿದೆ. ಈ ಬಗ್ಗೆ ತಿಳಿದುಕೊಳ್ಳಬೇಕಾದ 10 ಪ್ರಮುಖ ಅಂಶಗಳು ಇಲ್ಲಿವೆ:

1. ಒಂಬತ್ತನೇ ಸುತ್ತಿನ ಮಾತುಕತೆಗೆ ಸಂಬಂಧಿಸಿದಂತೆ, ರೈತರು ಹೊಸ ಕಾನೂನುಗಳನ್ನು ರದ್ದುಗೊಳಿಸುವ ವಿಧಾನಗಳ ಮೇಲೆ ಮಾತ್ರ ಚರ್ಚೆಗಳನ್ನು ಕೇಂದ್ರೀಕರಿಸುವುದಾಗಿ ಹೇಳಿದ್ದಾರೆ.

2. ಆದರೆ, ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುತ್ತದೆ ಎಂದು ರೈತರು ಹೇಳುತ್ತಿರುವ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ಇದುವರೆಗೂ ನಿರಾಕರಿಸುತ್ತಲೇ ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

3. ಇಂದಿನ ಸಭೆಯಲ್ಲೂ ಸರ್ಕಾರವು ಕಾನೂನನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರುವುದಿಲ್ಲ ಎನ್ನಲಾಗಿದ್ದು, ಅದರ ಬದಲಾಗಿ ಕಾನೂನುಗಳಲ್ಲಿ ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದರೆ ತಿಳಿಸಬೇಕು ಎಂದು ಒತ್ತಾಯಿಸಲಿದೆ ಎನ್ನಲಾಗಿದೆ.

4. ಮೂರು ಕೃಷಿ ಕಾನೂನುಗಳನ್ನು ಪರಿಶೀಲಿಸಲು ಜನವರಿ 12 ರಂದು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿರುವ ಸಮಿತಿಯು ನಡೆಸುವ ಸಮಾಲೋಚನೆಯಲ್ಲಿ ಭಾಗವಹಿಸದಿರಲು ಪ್ರತಿಭಟನಾ ನಿರತ ಕೃಷಿ ಸಂಘಗಳು ನಿರ್ಧರಿಸಿವೆ.

5. ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ಕೃಷಿ ಕಾನೂನನ್ನು ಅಮಾನತ್ತು ಮಾಡಿದೆ. ಇದನ್ನು ರೈತರು ಸ್ವಾಗತಿಸಿದ್ದರಾದರೂ, ತಮ್ಮ ಬೇಡಿಕೆ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿದೆ ಎಂದು ಅವರು ಮತ್ತೇ ಘೋಷಿಸಿದ್ದಾರೆ.

6. ಕಾನೂನಿನ ಬಗ್ಗೆ ಚರ್ಚಿಸಲು ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯ ಸದಸ್ಯರು ಈಗಾಗಲೇ ಕಾನೂನನ್ನು ಸಾರ್ವಜನಿಕವಾಗಿ ಶ್ಲಾಘಿಸಿರುವುದರಿಂದ, ನ್ಯಾಯಾಲಯ ನೇಮಿಸಿದ ಸಮಿತಿಯು “ಸರ್ಕಾರದ ಪರ” ಎಂದು ಕೃಷಿ ಸಂಘಗಳು ಆರೋಪಿಸಿವೆ.

7. ವಿವಾದಾತ್ಮಕ ಕಾನೂನುಗಳು ಕೃಷಿ ವ್ಯಾಪಾರದಲ್ಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ, 1955 ರ ಅಗತ್ಯ ಸರಕುಗಳ ಕಾಯ್ದೆಯಡಿ ದಾಸ್ತಾನು ಸಂಗ್ರಹಿಸುವಿಕೆಯ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ ಮತ್ತು ಲಿಖಿತ ಒಪ್ಪಂದಗಳ ಆಧಾರದ ಮೇಲೆ ಗುತ್ತಿಗೆ ಕೃಷಿ ಪ್ರಾರಂಭವಾಗುತ್ತದೆ.

8. ಈ ಹೊಸ ಕಾನೂನುಗಳು ದೊಡ್ಡ ಕಂಪನಿಗಳಿಗೆ ಲಾಭಕರವಾಗಲಿದೆ. ಸಣ್ಣ ಹಿಡುವಳಿದಾರರು ನಾಶವಾಗುತ್ತಾರೆ ಎಂದು ರೈತರು ಹೇಳುತ್ತಾರೆ.

9. ಕೃಷಿ ಸಂಘಗಳು ತಮಗೆ ಕಾನೂನು ಪರಿಹಾರ ಬೇಕಿಲ್ಲ, ತಾವು ಸರ್ಕಾರದೊಂದಿಗೆ ಮಾತ್ರ ಮಾತನಾಡುತ್ತೇವೆ ಎಂದು ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪದಿಂದ ತಪ್ಪಿಸಿಕೊಂಡಿದ್ದಾರೆ.

10. ಎಂಟನೇ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ತಾವು ಕಿಸಾನ್-ಜವಾನ್ ರ್‍ಯಾಲಿಯನ್ನು ನಡೆಸಿಯೆ ತೀರುತ್ತೇವೆ ಎಂದು ರೈತರು ಘೋಷಿಸಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!ಟ್ರ್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...