Homeಚಳವಳಿರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ - ನೀವು ತಿಳಿದಿರಬೇಕಾದ 10 ಅಂಶಗಳು

ರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ – ನೀವು ತಿಳಿದಿರಬೇಕಾದ 10 ಅಂಶಗಳು

ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ, ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ತಾನು ಒಂದಿಂಚೂ ಹಿಂದೆ ಸರಿಯುತಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ. ಅದರ ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

ಇದುವರೆಗೂ ರೈತರೊಂದಿಗೆ ಎಂಟು ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿದೆ. ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಂಟನೇ ಮಾತುಕತೆ ವಿಫಲಗೊಂಡ ಪರಿಣಾಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದು, ಜನವರಿ 26 ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಒಂಬತ್ತನೆ ಸುತ್ತಿನ ಮಾತುಕತೆಗೆ ಶುಕ್ರವಾರ(ಇಂದು) ರೈತರನ್ನು ಆಹ್ವಾನಿಸಿದೆ. ಈ ಬಗ್ಗೆ ತಿಳಿದುಕೊಳ್ಳಬೇಕಾದ 10 ಪ್ರಮುಖ ಅಂಶಗಳು ಇಲ್ಲಿವೆ:

1. ಒಂಬತ್ತನೇ ಸುತ್ತಿನ ಮಾತುಕತೆಗೆ ಸಂಬಂಧಿಸಿದಂತೆ, ರೈತರು ಹೊಸ ಕಾನೂನುಗಳನ್ನು ರದ್ದುಗೊಳಿಸುವ ವಿಧಾನಗಳ ಮೇಲೆ ಮಾತ್ರ ಚರ್ಚೆಗಳನ್ನು ಕೇಂದ್ರೀಕರಿಸುವುದಾಗಿ ಹೇಳಿದ್ದಾರೆ.

2. ಆದರೆ, ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುತ್ತದೆ ಎಂದು ರೈತರು ಹೇಳುತ್ತಿರುವ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ಇದುವರೆಗೂ ನಿರಾಕರಿಸುತ್ತಲೇ ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

3. ಇಂದಿನ ಸಭೆಯಲ್ಲೂ ಸರ್ಕಾರವು ಕಾನೂನನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರುವುದಿಲ್ಲ ಎನ್ನಲಾಗಿದ್ದು, ಅದರ ಬದಲಾಗಿ ಕಾನೂನುಗಳಲ್ಲಿ ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದರೆ ತಿಳಿಸಬೇಕು ಎಂದು ಒತ್ತಾಯಿಸಲಿದೆ ಎನ್ನಲಾಗಿದೆ.

4. ಮೂರು ಕೃಷಿ ಕಾನೂನುಗಳನ್ನು ಪರಿಶೀಲಿಸಲು ಜನವರಿ 12 ರಂದು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿರುವ ಸಮಿತಿಯು ನಡೆಸುವ ಸಮಾಲೋಚನೆಯಲ್ಲಿ ಭಾಗವಹಿಸದಿರಲು ಪ್ರತಿಭಟನಾ ನಿರತ ಕೃಷಿ ಸಂಘಗಳು ನಿರ್ಧರಿಸಿವೆ.

5. ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ಕೃಷಿ ಕಾನೂನನ್ನು ಅಮಾನತ್ತು ಮಾಡಿದೆ. ಇದನ್ನು ರೈತರು ಸ್ವಾಗತಿಸಿದ್ದರಾದರೂ, ತಮ್ಮ ಬೇಡಿಕೆ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿದೆ ಎಂದು ಅವರು ಮತ್ತೇ ಘೋಷಿಸಿದ್ದಾರೆ.

6. ಕಾನೂನಿನ ಬಗ್ಗೆ ಚರ್ಚಿಸಲು ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯ ಸದಸ್ಯರು ಈಗಾಗಲೇ ಕಾನೂನನ್ನು ಸಾರ್ವಜನಿಕವಾಗಿ ಶ್ಲಾಘಿಸಿರುವುದರಿಂದ, ನ್ಯಾಯಾಲಯ ನೇಮಿಸಿದ ಸಮಿತಿಯು “ಸರ್ಕಾರದ ಪರ” ಎಂದು ಕೃಷಿ ಸಂಘಗಳು ಆರೋಪಿಸಿವೆ.

7. ವಿವಾದಾತ್ಮಕ ಕಾನೂನುಗಳು ಕೃಷಿ ವ್ಯಾಪಾರದಲ್ಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ, 1955 ರ ಅಗತ್ಯ ಸರಕುಗಳ ಕಾಯ್ದೆಯಡಿ ದಾಸ್ತಾನು ಸಂಗ್ರಹಿಸುವಿಕೆಯ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ ಮತ್ತು ಲಿಖಿತ ಒಪ್ಪಂದಗಳ ಆಧಾರದ ಮೇಲೆ ಗುತ್ತಿಗೆ ಕೃಷಿ ಪ್ರಾರಂಭವಾಗುತ್ತದೆ.

8. ಈ ಹೊಸ ಕಾನೂನುಗಳು ದೊಡ್ಡ ಕಂಪನಿಗಳಿಗೆ ಲಾಭಕರವಾಗಲಿದೆ. ಸಣ್ಣ ಹಿಡುವಳಿದಾರರು ನಾಶವಾಗುತ್ತಾರೆ ಎಂದು ರೈತರು ಹೇಳುತ್ತಾರೆ.

9. ಕೃಷಿ ಸಂಘಗಳು ತಮಗೆ ಕಾನೂನು ಪರಿಹಾರ ಬೇಕಿಲ್ಲ, ತಾವು ಸರ್ಕಾರದೊಂದಿಗೆ ಮಾತ್ರ ಮಾತನಾಡುತ್ತೇವೆ ಎಂದು ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪದಿಂದ ತಪ್ಪಿಸಿಕೊಂಡಿದ್ದಾರೆ.

10. ಎಂಟನೇ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ತಾವು ಕಿಸಾನ್-ಜವಾನ್ ರ್‍ಯಾಲಿಯನ್ನು ನಡೆಸಿಯೆ ತೀರುತ್ತೇವೆ ಎಂದು ರೈತರು ಘೋಷಿಸಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!ಟ್ರ್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...