Homeಚಳವಳಿರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ - ನೀವು ತಿಳಿದಿರಬೇಕಾದ 10 ಅಂಶಗಳು

ರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ – ನೀವು ತಿಳಿದಿರಬೇಕಾದ 10 ಅಂಶಗಳು

ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ, ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ತಾನು ಒಂದಿಂಚೂ ಹಿಂದೆ ಸರಿಯುತಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ. ಅದರ ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

ಇದುವರೆಗೂ ರೈತರೊಂದಿಗೆ ಎಂಟು ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿದೆ. ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಂಟನೇ ಮಾತುಕತೆ ವಿಫಲಗೊಂಡ ಪರಿಣಾಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದು, ಜನವರಿ 26 ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಒಂಬತ್ತನೆ ಸುತ್ತಿನ ಮಾತುಕತೆಗೆ ಶುಕ್ರವಾರ(ಇಂದು) ರೈತರನ್ನು ಆಹ್ವಾನಿಸಿದೆ. ಈ ಬಗ್ಗೆ ತಿಳಿದುಕೊಳ್ಳಬೇಕಾದ 10 ಪ್ರಮುಖ ಅಂಶಗಳು ಇಲ್ಲಿವೆ:

1. ಒಂಬತ್ತನೇ ಸುತ್ತಿನ ಮಾತುಕತೆಗೆ ಸಂಬಂಧಿಸಿದಂತೆ, ರೈತರು ಹೊಸ ಕಾನೂನುಗಳನ್ನು ರದ್ದುಗೊಳಿಸುವ ವಿಧಾನಗಳ ಮೇಲೆ ಮಾತ್ರ ಚರ್ಚೆಗಳನ್ನು ಕೇಂದ್ರೀಕರಿಸುವುದಾಗಿ ಹೇಳಿದ್ದಾರೆ.

2. ಆದರೆ, ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುತ್ತದೆ ಎಂದು ರೈತರು ಹೇಳುತ್ತಿರುವ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ಇದುವರೆಗೂ ನಿರಾಕರಿಸುತ್ತಲೇ ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

3. ಇಂದಿನ ಸಭೆಯಲ್ಲೂ ಸರ್ಕಾರವು ಕಾನೂನನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರುವುದಿಲ್ಲ ಎನ್ನಲಾಗಿದ್ದು, ಅದರ ಬದಲಾಗಿ ಕಾನೂನುಗಳಲ್ಲಿ ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದರೆ ತಿಳಿಸಬೇಕು ಎಂದು ಒತ್ತಾಯಿಸಲಿದೆ ಎನ್ನಲಾಗಿದೆ.

4. ಮೂರು ಕೃಷಿ ಕಾನೂನುಗಳನ್ನು ಪರಿಶೀಲಿಸಲು ಜನವರಿ 12 ರಂದು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿರುವ ಸಮಿತಿಯು ನಡೆಸುವ ಸಮಾಲೋಚನೆಯಲ್ಲಿ ಭಾಗವಹಿಸದಿರಲು ಪ್ರತಿಭಟನಾ ನಿರತ ಕೃಷಿ ಸಂಘಗಳು ನಿರ್ಧರಿಸಿವೆ.

5. ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ಕೃಷಿ ಕಾನೂನನ್ನು ಅಮಾನತ್ತು ಮಾಡಿದೆ. ಇದನ್ನು ರೈತರು ಸ್ವಾಗತಿಸಿದ್ದರಾದರೂ, ತಮ್ಮ ಬೇಡಿಕೆ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿದೆ ಎಂದು ಅವರು ಮತ್ತೇ ಘೋಷಿಸಿದ್ದಾರೆ.

6. ಕಾನೂನಿನ ಬಗ್ಗೆ ಚರ್ಚಿಸಲು ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯ ಸದಸ್ಯರು ಈಗಾಗಲೇ ಕಾನೂನನ್ನು ಸಾರ್ವಜನಿಕವಾಗಿ ಶ್ಲಾಘಿಸಿರುವುದರಿಂದ, ನ್ಯಾಯಾಲಯ ನೇಮಿಸಿದ ಸಮಿತಿಯು “ಸರ್ಕಾರದ ಪರ” ಎಂದು ಕೃಷಿ ಸಂಘಗಳು ಆರೋಪಿಸಿವೆ.

7. ವಿವಾದಾತ್ಮಕ ಕಾನೂನುಗಳು ಕೃಷಿ ವ್ಯಾಪಾರದಲ್ಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ, 1955 ರ ಅಗತ್ಯ ಸರಕುಗಳ ಕಾಯ್ದೆಯಡಿ ದಾಸ್ತಾನು ಸಂಗ್ರಹಿಸುವಿಕೆಯ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ ಮತ್ತು ಲಿಖಿತ ಒಪ್ಪಂದಗಳ ಆಧಾರದ ಮೇಲೆ ಗುತ್ತಿಗೆ ಕೃಷಿ ಪ್ರಾರಂಭವಾಗುತ್ತದೆ.

8. ಈ ಹೊಸ ಕಾನೂನುಗಳು ದೊಡ್ಡ ಕಂಪನಿಗಳಿಗೆ ಲಾಭಕರವಾಗಲಿದೆ. ಸಣ್ಣ ಹಿಡುವಳಿದಾರರು ನಾಶವಾಗುತ್ತಾರೆ ಎಂದು ರೈತರು ಹೇಳುತ್ತಾರೆ.

9. ಕೃಷಿ ಸಂಘಗಳು ತಮಗೆ ಕಾನೂನು ಪರಿಹಾರ ಬೇಕಿಲ್ಲ, ತಾವು ಸರ್ಕಾರದೊಂದಿಗೆ ಮಾತ್ರ ಮಾತನಾಡುತ್ತೇವೆ ಎಂದು ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪದಿಂದ ತಪ್ಪಿಸಿಕೊಂಡಿದ್ದಾರೆ.

10. ಎಂಟನೇ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ತಾವು ಕಿಸಾನ್-ಜವಾನ್ ರ್‍ಯಾಲಿಯನ್ನು ನಡೆಸಿಯೆ ತೀರುತ್ತೇವೆ ಎಂದು ರೈತರು ಘೋಷಿಸಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!ಟ್ರ್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...