Homeಚಳವಳಿರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

ರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 26 ರಂದು ರೈತರ ಗಣರಾಜ್ಯೋತ್ಸವ ಟ್ರಾಕ್ಟರ್‌ ಪರೇಡ್ ಸಮಯದಲ್ಲಿ ನಡೆದ ಅಹಿತಕರ ಘಟನೆ ಪ್ರಕರಣದಲ್ಲಿ ದೆಹಲಿ ಪೊಲೀಸರು 122 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ 80 ವರ್ಷದ ಗುರುಮುಖ್ ಸಿಂಗ್ ಅವರನ್ನೂ ಬಂಧಿಸಲಾಗಿದೆ.

ಗುರುಮುಖ್ ಸಿಂಗ್ ಬಂಧಿತರಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದು, ಮಾಜಿ ಸೈನಿಕರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ. ಗುರುಮುಖ್ ಅವರನ್ನು ಜನವರಿ 29 ರಂದು ಮುಖರ್ಜಿ ನಗರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಜಿ ಸೈನಿಕರಾಗಿರುವ 80 ವರ್ಷದ ಗುರುಮುಖ್ ಸಿಂಗ್ ಮೂರು ದಶಕಗಳ ಹಿಂದೆ ಸೈನ್ಯದಿಂದ ನಿವೃತ್ತರಾಗಿದ್ದರು. ಫತೇಘಡ್ ಸಾಹಿಬ್ ಜಿಲ್ಲೆಯ ಶಮಾಸ್‌ಪುರ ಗ್ರಾಮದ ಸಣ್ಣ ಕೃಷಿಕರಾಗಿರುವ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಗೋಧಿ ಮತ್ತು ಭತ್ತವನ್ನು ಬೆಳೆಯುತ್ತಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

“ಅವರು ಮೊದಲ ದಿನದಿಂದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿದ್ದರು ಹಾಗೂ ಅವುಗಳನ್ನು ರದ್ದು ಪಡಿಸಬೇಕೆಂದು ಅವರು ಬಯಸಿದ್ದರು. ಅದಕ್ಕಾಗಿ ಅವರು ದೆಹಲಿಯ ಸಿಂಘು ಗಡಿಯಲ್ಲಿ ಮೊದಲಿನಿಂದಲೂ ಹೋರಾಟ ನಿರತರಾಗಿದ್ದಾರೆ. ಅವರು ಮೂರು ದಶಕಗಳ ಹಿಂದೆ ಸೈನ್ಯದಿಂದ ಸುಬೇದಾರ್ ಆಗಿ ನಿವೃತ್ತರಾಗಿದ್ದು, ಶಿಸ್ತುಬದ್ಧ ಜೀವನವನ್ನು ನಡೆಸುತ್ತಾರೆ” ಎಂದು ಗ್ರಾಮದ ಸರ್ಪಂಚ್ ಹರ್ಪಿಂದರ್ ಸಿಂಗ್ ಹೇಳಿಕೆಯನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಗಣರಾಜ್ಯೋತ್ಸವ
ರೈತ ಹೋರಾಟದ ಸಾಂದರ್ಭಿಕ ಚಿತ್ರ (PC: DH)

ಗುರುಮುಖ್ ಅವರ ಹಿರಿಯ ಮಗ ಜಸ್ಬೀರ್ ಸಿಂಗ್ ಇಟಲಿಯಲ್ಲಿ ವಾಸಿಸುತ್ತಿದ್ದು, ಅವರ ಕಿರಿಯ ಮಗ ಕುಲ್ಬೀರ್ ಸಿಂಗ್, ಗುರುಮುಖ್ ಅವರ ಹಳ್ಳಿಯಿಂದ 12 ಕಿ.ಮೀ ದೂರದಲ್ಲಿ ವಾಸಿಸುತ್ತಿದ್ದಾರೆ. ಗುರುಮುಖ್ ತಮ್ಮ ಪತ್ನಿ, ತಮ್ಮ ಹಿರಿಯ ಮಗನ ಪತ್ನಿ ಹಾಗೂ ಅವರ ಮಗನೊಂದಿಗೆ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

“ಅವರ ವಯಸ್ಸನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅವರನ್ನು ಬಂಧಿಸಲಾಗಿದೆ ಎಂಬುವುದು ನಮಗೆ ಆಶ್ಚರ್ಯವಾಗಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಬಂಧಿತ ಗುರುಮುಖ್ ಅವರನ್ನು ಬೆಂಬಲಿಸಿ ಗ್ರಾಮಸ್ಥರು ದೆಹಲಿಗೆ ತೆರಳಲಿದ್ದು, “ಅಲ್ಲಿ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ, ಅವರು ಶೀಘ್ರದಲ್ಲೇ ಮನೆಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗುರುಮುಖ್ ಅವರನ್ನು ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ, ಬಂಧನಕ್ಕೊಳಗಾದ ಅವರಿಗೆ ಕಾನೂನು ನೆರವು ನೀಡಲು ಈಗಾಗಲೆ ವಕೀಲರನ್ನು ನೇಮಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ, ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ರೈತ ಸಂಘವಾದ ಎಸ್ಎಡಿ (ಮನ್) ಬಂಧಿತ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...