Homeಚಳವಳಿರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

ರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 26 ರಂದು ರೈತರ ಗಣರಾಜ್ಯೋತ್ಸವ ಟ್ರಾಕ್ಟರ್‌ ಪರೇಡ್ ಸಮಯದಲ್ಲಿ ನಡೆದ ಅಹಿತಕರ ಘಟನೆ ಪ್ರಕರಣದಲ್ಲಿ ದೆಹಲಿ ಪೊಲೀಸರು 122 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ 80 ವರ್ಷದ ಗುರುಮುಖ್ ಸಿಂಗ್ ಅವರನ್ನೂ ಬಂಧಿಸಲಾಗಿದೆ.

ಗುರುಮುಖ್ ಸಿಂಗ್ ಬಂಧಿತರಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದು, ಮಾಜಿ ಸೈನಿಕರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ. ಗುರುಮುಖ್ ಅವರನ್ನು ಜನವರಿ 29 ರಂದು ಮುಖರ್ಜಿ ನಗರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಜಿ ಸೈನಿಕರಾಗಿರುವ 80 ವರ್ಷದ ಗುರುಮುಖ್ ಸಿಂಗ್ ಮೂರು ದಶಕಗಳ ಹಿಂದೆ ಸೈನ್ಯದಿಂದ ನಿವೃತ್ತರಾಗಿದ್ದರು. ಫತೇಘಡ್ ಸಾಹಿಬ್ ಜಿಲ್ಲೆಯ ಶಮಾಸ್‌ಪುರ ಗ್ರಾಮದ ಸಣ್ಣ ಕೃಷಿಕರಾಗಿರುವ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಗೋಧಿ ಮತ್ತು ಭತ್ತವನ್ನು ಬೆಳೆಯುತ್ತಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

“ಅವರು ಮೊದಲ ದಿನದಿಂದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿದ್ದರು ಹಾಗೂ ಅವುಗಳನ್ನು ರದ್ದು ಪಡಿಸಬೇಕೆಂದು ಅವರು ಬಯಸಿದ್ದರು. ಅದಕ್ಕಾಗಿ ಅವರು ದೆಹಲಿಯ ಸಿಂಘು ಗಡಿಯಲ್ಲಿ ಮೊದಲಿನಿಂದಲೂ ಹೋರಾಟ ನಿರತರಾಗಿದ್ದಾರೆ. ಅವರು ಮೂರು ದಶಕಗಳ ಹಿಂದೆ ಸೈನ್ಯದಿಂದ ಸುಬೇದಾರ್ ಆಗಿ ನಿವೃತ್ತರಾಗಿದ್ದು, ಶಿಸ್ತುಬದ್ಧ ಜೀವನವನ್ನು ನಡೆಸುತ್ತಾರೆ” ಎಂದು ಗ್ರಾಮದ ಸರ್ಪಂಚ್ ಹರ್ಪಿಂದರ್ ಸಿಂಗ್ ಹೇಳಿಕೆಯನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಗಣರಾಜ್ಯೋತ್ಸವ
ರೈತ ಹೋರಾಟದ ಸಾಂದರ್ಭಿಕ ಚಿತ್ರ (PC: DH)

ಗುರುಮುಖ್ ಅವರ ಹಿರಿಯ ಮಗ ಜಸ್ಬೀರ್ ಸಿಂಗ್ ಇಟಲಿಯಲ್ಲಿ ವಾಸಿಸುತ್ತಿದ್ದು, ಅವರ ಕಿರಿಯ ಮಗ ಕುಲ್ಬೀರ್ ಸಿಂಗ್, ಗುರುಮುಖ್ ಅವರ ಹಳ್ಳಿಯಿಂದ 12 ಕಿ.ಮೀ ದೂರದಲ್ಲಿ ವಾಸಿಸುತ್ತಿದ್ದಾರೆ. ಗುರುಮುಖ್ ತಮ್ಮ ಪತ್ನಿ, ತಮ್ಮ ಹಿರಿಯ ಮಗನ ಪತ್ನಿ ಹಾಗೂ ಅವರ ಮಗನೊಂದಿಗೆ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

“ಅವರ ವಯಸ್ಸನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅವರನ್ನು ಬಂಧಿಸಲಾಗಿದೆ ಎಂಬುವುದು ನಮಗೆ ಆಶ್ಚರ್ಯವಾಗಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಬಂಧಿತ ಗುರುಮುಖ್ ಅವರನ್ನು ಬೆಂಬಲಿಸಿ ಗ್ರಾಮಸ್ಥರು ದೆಹಲಿಗೆ ತೆರಳಲಿದ್ದು, “ಅಲ್ಲಿ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ, ಅವರು ಶೀಘ್ರದಲ್ಲೇ ಮನೆಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗುರುಮುಖ್ ಅವರನ್ನು ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ, ಬಂಧನಕ್ಕೊಳಗಾದ ಅವರಿಗೆ ಕಾನೂನು ನೆರವು ನೀಡಲು ಈಗಾಗಲೆ ವಕೀಲರನ್ನು ನೇಮಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ, ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ರೈತ ಸಂಘವಾದ ಎಸ್ಎಡಿ (ಮನ್) ಬಂಧಿತ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....