Homeಚಳವಳಿರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

ರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 26 ರಂದು ರೈತರ ಗಣರಾಜ್ಯೋತ್ಸವ ಟ್ರಾಕ್ಟರ್‌ ಪರೇಡ್ ಸಮಯದಲ್ಲಿ ನಡೆದ ಅಹಿತಕರ ಘಟನೆ ಪ್ರಕರಣದಲ್ಲಿ ದೆಹಲಿ ಪೊಲೀಸರು 122 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ 80 ವರ್ಷದ ಗುರುಮುಖ್ ಸಿಂಗ್ ಅವರನ್ನೂ ಬಂಧಿಸಲಾಗಿದೆ.

ಗುರುಮುಖ್ ಸಿಂಗ್ ಬಂಧಿತರಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದು, ಮಾಜಿ ಸೈನಿಕರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ. ಗುರುಮುಖ್ ಅವರನ್ನು ಜನವರಿ 29 ರಂದು ಮುಖರ್ಜಿ ನಗರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಜಿ ಸೈನಿಕರಾಗಿರುವ 80 ವರ್ಷದ ಗುರುಮುಖ್ ಸಿಂಗ್ ಮೂರು ದಶಕಗಳ ಹಿಂದೆ ಸೈನ್ಯದಿಂದ ನಿವೃತ್ತರಾಗಿದ್ದರು. ಫತೇಘಡ್ ಸಾಹಿಬ್ ಜಿಲ್ಲೆಯ ಶಮಾಸ್‌ಪುರ ಗ್ರಾಮದ ಸಣ್ಣ ಕೃಷಿಕರಾಗಿರುವ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಗೋಧಿ ಮತ್ತು ಭತ್ತವನ್ನು ಬೆಳೆಯುತ್ತಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

“ಅವರು ಮೊದಲ ದಿನದಿಂದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿದ್ದರು ಹಾಗೂ ಅವುಗಳನ್ನು ರದ್ದು ಪಡಿಸಬೇಕೆಂದು ಅವರು ಬಯಸಿದ್ದರು. ಅದಕ್ಕಾಗಿ ಅವರು ದೆಹಲಿಯ ಸಿಂಘು ಗಡಿಯಲ್ಲಿ ಮೊದಲಿನಿಂದಲೂ ಹೋರಾಟ ನಿರತರಾಗಿದ್ದಾರೆ. ಅವರು ಮೂರು ದಶಕಗಳ ಹಿಂದೆ ಸೈನ್ಯದಿಂದ ಸುಬೇದಾರ್ ಆಗಿ ನಿವೃತ್ತರಾಗಿದ್ದು, ಶಿಸ್ತುಬದ್ಧ ಜೀವನವನ್ನು ನಡೆಸುತ್ತಾರೆ” ಎಂದು ಗ್ರಾಮದ ಸರ್ಪಂಚ್ ಹರ್ಪಿಂದರ್ ಸಿಂಗ್ ಹೇಳಿಕೆಯನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಗಣರಾಜ್ಯೋತ್ಸವ
ರೈತ ಹೋರಾಟದ ಸಾಂದರ್ಭಿಕ ಚಿತ್ರ (PC: DH)

ಗುರುಮುಖ್ ಅವರ ಹಿರಿಯ ಮಗ ಜಸ್ಬೀರ್ ಸಿಂಗ್ ಇಟಲಿಯಲ್ಲಿ ವಾಸಿಸುತ್ತಿದ್ದು, ಅವರ ಕಿರಿಯ ಮಗ ಕುಲ್ಬೀರ್ ಸಿಂಗ್, ಗುರುಮುಖ್ ಅವರ ಹಳ್ಳಿಯಿಂದ 12 ಕಿ.ಮೀ ದೂರದಲ್ಲಿ ವಾಸಿಸುತ್ತಿದ್ದಾರೆ. ಗುರುಮುಖ್ ತಮ್ಮ ಪತ್ನಿ, ತಮ್ಮ ಹಿರಿಯ ಮಗನ ಪತ್ನಿ ಹಾಗೂ ಅವರ ಮಗನೊಂದಿಗೆ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

“ಅವರ ವಯಸ್ಸನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅವರನ್ನು ಬಂಧಿಸಲಾಗಿದೆ ಎಂಬುವುದು ನಮಗೆ ಆಶ್ಚರ್ಯವಾಗಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಬಂಧಿತ ಗುರುಮುಖ್ ಅವರನ್ನು ಬೆಂಬಲಿಸಿ ಗ್ರಾಮಸ್ಥರು ದೆಹಲಿಗೆ ತೆರಳಲಿದ್ದು, “ಅಲ್ಲಿ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ, ಅವರು ಶೀಘ್ರದಲ್ಲೇ ಮನೆಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗುರುಮುಖ್ ಅವರನ್ನು ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ, ಬಂಧನಕ್ಕೊಳಗಾದ ಅವರಿಗೆ ಕಾನೂನು ನೆರವು ನೀಡಲು ಈಗಾಗಲೆ ವಕೀಲರನ್ನು ನೇಮಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ, ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ರೈತ ಸಂಘವಾದ ಎಸ್ಎಡಿ (ಮನ್) ಬಂಧಿತ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...