Homeಮುಖಪುಟರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ.

- Advertisement -
- Advertisement -

“ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ಜನ್ಮದಿನದ ಪ್ರಯುಕ್ತ (ಫೆಬ್ರವರಿ 13) ಅವರ ಆಶಯದಂತೆ ರೈತರ ಹಕ್ಕುಗಳನ್ನು ಎತ್ತಿಹಿಡಿದು, ಪ್ರಗತಿಪರ, ನ್ಯಾಯಸಮ್ಮತ ಮತ್ತು ನ್ಯಾಯಯುತ ಸಮಾಜದ ನಿರ್ಮಾಣಕ್ಕಾಗಿ ಈ ಹೋರಾಟವನ್ನು ಇನ್ನಷ್ಟು ಮುಂದೆ ಸಾಗಿಸುವ ಕೆಲಸವನ್ನು ಮಾಡುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಪುನರುಚ್ಚರಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ನಡೆಸುತ್ತಿರುವ ಪ್ರತಿಭಟನೆ 80ನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ SKM, “ದೇಶದೆಲ್ಲೆಡೆ ಪ್ರಬಲವಾಗಿ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳು ರೈತರ ಹೋರಾಟಕ್ಕೆ ಭಾರೀ ಪ್ರಮಾಣದ ಬೆಂಬಲವನ್ನು ನೀಡುತ್ತಿವೆ. ಇಂದು ಬಿಲಾರಿ ಮತ್ತು ಬಹದ್ದೂರ್‌ಗಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

“ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ. ಹೀಗೆ ಯೋಚಿಸುವ ಸರ್ಕಾರಗಳು ಮತ್ತು ಕಾರ್ಪೊರೇಟ್‌ಗಳಿಗೆ ಇದು ಅವಮಾನ” ಎಂದು ಮಹಾಪಂಚಾಯತ್‌ನಲ್ಲಿ SKM ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

“ಈವರೆಗೆ 228 ಪ್ರತಿಭಟನಾಕಾರರು ತಮ್ಮ ಪ್ರಾಣ ತ್ಯಾಗ ಮಾಡಿ ಈ ಆಂದೋಲನದಲ್ಲಿ ಹುತಾತ್ಮರಾಗಿದ್ದಾರೆ. ಈ ಹುತಾತ್ಮರ ಕುಟುಂಬಗಳಿಗೆ ಬೆಂಬಲವನ್ನು ನೀಡುವ ಯಾವುದೇ ಯೋಜನೆಯೂ ಇಲ್ಲ ಎಂದು ಸರ್ಕಾರವು ಸಂಸತ್ತಿನಲ್ಲಿ ಒಪ್ಪಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಹುತಾತ್ಮರಾದ ಜೀವಗಳಿಗೆ ಸರ್ಕಾರವನ್ನೇ ದೂಷಿಸಬೇಕಾಗಿದೆ. ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಒಪ್ಪುವುದಕ್ಕೆ ಇನ್ನೂ ಎಷ್ಟು ಜೀವಗಳನ್ನು ತ್ಯಾಗ ಮಾಡಬೇಕು. ನಾವು ಸರ್ಕಾರದ ಅಸೂಕ್ಷ್ಮತೆಯನ್ನು ಖಂಡಿಸುತ್ತೇವೆ” ಎಂದು SKM ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

“ಬಲಗೊಳ್ಳುತ್ತಿರುವ ಚಳವಳಿಯನ್ನು ಕಂಡು ಸರ್ಕಾರ ಹೆದರುತ್ತಿದೆ. ಹಾಗಾಗಿ ನಾಗರೀಕರ ಮತ್ತು ಪ್ರಜಾಪ್ರಭುತ್ವದ ಧ್ವನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಚಳವಳಿಯ ತೀವ್ರತೆಗೆ ಬೆಂಬಲವಾಗಿ ನಿಂತಿರುವ ಮಾಧ್ಯಮಗಳ ಮೇಲೆ ಸರ್ಕಾರ ನಿರಂತರವಾಗಿ ದಾಳಿ ಮಾಡುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ನ್ಯೂಸ್‌ ಕ್ಲಿಕ್ ಮೇಲೆ ನಡೆದ ದಾಳಿಯಾಗಿದೆ. ಇದನ್ನು SKM ಖಂಡಿಸುತ್ತದೆ” ಎಂದು ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ಬಿಜೆಪಿ ಸರ್ಕಾರದ ಹುಸಿ ರಾಷ್ಟ್ರೀಯತೆಯನ್ನು ಬಹಿರಂಗಪಡಿಸಲು ಮತ್ತು ಮಾಧ್ಯಮ ಮಿತ್ರರಿಬ್ಬರ ವಾಟ್ಸಾಪ್‌ ಚಾಟ್‌ನಿಂದ ಸೋರಿಕೆಯಾದ ರಕ್ಷಣಾ ರಹಸ್ಯಗಳ ಹಿನ್ನೆಲೆಯಲ್ಲಿ ಹಾಗೂ ಗಡಿಗಳಲ್ಲಿ ನಿಂತು ನಮ್ಮೆಲ್ಲರನ್ನೂ ರಕ್ಷಿಸುತ್ತಿರುವ ನಮ್ಮ ಸೈನಿಕರನ್ನು ನಾವು ನಿಜವಾಗಿಯೂ ಗೌರವಿಸುತ್ತೇವೆ ಎಂಬುದನ್ನು ತೋರಿಸಲು ಫೆಬ್ರವರಿ 14 ರಂದು ವಿಶಿಷ್ಟ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ. ಟಾರ್ಚ್ ಲೈಟ್ ಮತ್ತು ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ದೇಶದಾದ್ಯಂತ ಪ್ರತಿ ನಗರ ಮತ್ತು ಹಳ್ಳಿಗಳಲ್ಲಿಯೂ ಆಯೋಜಿಸಲಾಗುವುದು. ಈ ಮೂಲಕ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಗೌರವ ಸಲ್ಲಿಸಲಾಗುವುದು. ರೈತರ ಚಳವಳಿಯ ಧ್ಯೇಯವಾಕ್ಯವಾದ ಜೈ ಜವಾನ್-ಜೈಕಿಸಾನ್ ಘೋಷಣೆಯನ್ನು ಪುನರುಚ್ಚರಿಸಲಾಗುವುದು” ಎಂದು SKM ತೀರ್ಮಾನಿಸಿದೆ.


ಇದನ್ನೂ ಓದಿ: ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...