Homeಮುಖಪುಟರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ.

- Advertisement -
- Advertisement -

“ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ಜನ್ಮದಿನದ ಪ್ರಯುಕ್ತ (ಫೆಬ್ರವರಿ 13) ಅವರ ಆಶಯದಂತೆ ರೈತರ ಹಕ್ಕುಗಳನ್ನು ಎತ್ತಿಹಿಡಿದು, ಪ್ರಗತಿಪರ, ನ್ಯಾಯಸಮ್ಮತ ಮತ್ತು ನ್ಯಾಯಯುತ ಸಮಾಜದ ನಿರ್ಮಾಣಕ್ಕಾಗಿ ಈ ಹೋರಾಟವನ್ನು ಇನ್ನಷ್ಟು ಮುಂದೆ ಸಾಗಿಸುವ ಕೆಲಸವನ್ನು ಮಾಡುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಪುನರುಚ್ಚರಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ನಡೆಸುತ್ತಿರುವ ಪ್ರತಿಭಟನೆ 80ನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ SKM, “ದೇಶದೆಲ್ಲೆಡೆ ಪ್ರಬಲವಾಗಿ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳು ರೈತರ ಹೋರಾಟಕ್ಕೆ ಭಾರೀ ಪ್ರಮಾಣದ ಬೆಂಬಲವನ್ನು ನೀಡುತ್ತಿವೆ. ಇಂದು ಬಿಲಾರಿ ಮತ್ತು ಬಹದ್ದೂರ್‌ಗಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

“ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ. ಹೀಗೆ ಯೋಚಿಸುವ ಸರ್ಕಾರಗಳು ಮತ್ತು ಕಾರ್ಪೊರೇಟ್‌ಗಳಿಗೆ ಇದು ಅವಮಾನ” ಎಂದು ಮಹಾಪಂಚಾಯತ್‌ನಲ್ಲಿ SKM ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

“ಈವರೆಗೆ 228 ಪ್ರತಿಭಟನಾಕಾರರು ತಮ್ಮ ಪ್ರಾಣ ತ್ಯಾಗ ಮಾಡಿ ಈ ಆಂದೋಲನದಲ್ಲಿ ಹುತಾತ್ಮರಾಗಿದ್ದಾರೆ. ಈ ಹುತಾತ್ಮರ ಕುಟುಂಬಗಳಿಗೆ ಬೆಂಬಲವನ್ನು ನೀಡುವ ಯಾವುದೇ ಯೋಜನೆಯೂ ಇಲ್ಲ ಎಂದು ಸರ್ಕಾರವು ಸಂಸತ್ತಿನಲ್ಲಿ ಒಪ್ಪಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಹುತಾತ್ಮರಾದ ಜೀವಗಳಿಗೆ ಸರ್ಕಾರವನ್ನೇ ದೂಷಿಸಬೇಕಾಗಿದೆ. ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಒಪ್ಪುವುದಕ್ಕೆ ಇನ್ನೂ ಎಷ್ಟು ಜೀವಗಳನ್ನು ತ್ಯಾಗ ಮಾಡಬೇಕು. ನಾವು ಸರ್ಕಾರದ ಅಸೂಕ್ಷ್ಮತೆಯನ್ನು ಖಂಡಿಸುತ್ತೇವೆ” ಎಂದು SKM ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

“ಬಲಗೊಳ್ಳುತ್ತಿರುವ ಚಳವಳಿಯನ್ನು ಕಂಡು ಸರ್ಕಾರ ಹೆದರುತ್ತಿದೆ. ಹಾಗಾಗಿ ನಾಗರೀಕರ ಮತ್ತು ಪ್ರಜಾಪ್ರಭುತ್ವದ ಧ್ವನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಚಳವಳಿಯ ತೀವ್ರತೆಗೆ ಬೆಂಬಲವಾಗಿ ನಿಂತಿರುವ ಮಾಧ್ಯಮಗಳ ಮೇಲೆ ಸರ್ಕಾರ ನಿರಂತರವಾಗಿ ದಾಳಿ ಮಾಡುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ನ್ಯೂಸ್‌ ಕ್ಲಿಕ್ ಮೇಲೆ ನಡೆದ ದಾಳಿಯಾಗಿದೆ. ಇದನ್ನು SKM ಖಂಡಿಸುತ್ತದೆ” ಎಂದು ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ಬಿಜೆಪಿ ಸರ್ಕಾರದ ಹುಸಿ ರಾಷ್ಟ್ರೀಯತೆಯನ್ನು ಬಹಿರಂಗಪಡಿಸಲು ಮತ್ತು ಮಾಧ್ಯಮ ಮಿತ್ರರಿಬ್ಬರ ವಾಟ್ಸಾಪ್‌ ಚಾಟ್‌ನಿಂದ ಸೋರಿಕೆಯಾದ ರಕ್ಷಣಾ ರಹಸ್ಯಗಳ ಹಿನ್ನೆಲೆಯಲ್ಲಿ ಹಾಗೂ ಗಡಿಗಳಲ್ಲಿ ನಿಂತು ನಮ್ಮೆಲ್ಲರನ್ನೂ ರಕ್ಷಿಸುತ್ತಿರುವ ನಮ್ಮ ಸೈನಿಕರನ್ನು ನಾವು ನಿಜವಾಗಿಯೂ ಗೌರವಿಸುತ್ತೇವೆ ಎಂಬುದನ್ನು ತೋರಿಸಲು ಫೆಬ್ರವರಿ 14 ರಂದು ವಿಶಿಷ್ಟ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ. ಟಾರ್ಚ್ ಲೈಟ್ ಮತ್ತು ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ದೇಶದಾದ್ಯಂತ ಪ್ರತಿ ನಗರ ಮತ್ತು ಹಳ್ಳಿಗಳಲ್ಲಿಯೂ ಆಯೋಜಿಸಲಾಗುವುದು. ಈ ಮೂಲಕ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಗೌರವ ಸಲ್ಲಿಸಲಾಗುವುದು. ರೈತರ ಚಳವಳಿಯ ಧ್ಯೇಯವಾಕ್ಯವಾದ ಜೈ ಜವಾನ್-ಜೈಕಿಸಾನ್ ಘೋಷಣೆಯನ್ನು ಪುನರುಚ್ಚರಿಸಲಾಗುವುದು” ಎಂದು SKM ತೀರ್ಮಾನಿಸಿದೆ.


ಇದನ್ನೂ ಓದಿ: ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...