Homeಮುಖಪುಟರೈತ ಹೋರಾಟ: ನಾಳೆಯ 'ಚಕ್ಕಾ ಜಾಮ್' ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಭಾಗವಾಗಿ ನಾಳೆ ಶನಿವಾರ ಫೆ. 6 ರಂದು ಚಕ್ಕಾ ಜಾಮ್-ರಸ್ತೆ ತಡೆ ಪ್ರತಿಭಟನೆಗೆ ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಸ್ವರೂಪ ಹೇಗಿರಲಿವೆ? ವಿವರಗಳು ಇಲ್ಲಿವೆ.

ಚಕ್ಕಾ ಜಾಮ್ ಏತಕ್ಕಾಗಿ?

40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ದೇಶವ್ಯಾಪಿ ರಸ್ತೆ ತಡೆಗೆ ಕರೆ ನೀಡಿದೆ. ಕೇಂದ್ರ ಬಜೆಟ್‌ನಲ್ಲಿ ರೈತರನ್ನು ನಿರ್ಲಕ್ಷಿಸಿದ್ದು ಮತ್ತು ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಯಾವ ಭಾಗಗಳಲ್ಲಿ ಪರಿಣಾಮ?

ದೆಹಲಿಯನ್ನು ಹೊರತುಪಡಿಸಿ, ಆದರೆ ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ಬರುವ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿಭಾಗಗಳಲ್ಲಿ ರಸ್ತೆ ತಡೆ ನಡೆಯಲಿದೆ. ಉಳಿದಂತೆ ದಕ್ಷಿಣ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, “ನಾವು ದೆಹಲಿಯಲ್ಲಿ ಏನನ್ನೂ ಮಾಡಲು ಹೋಗುವುದಿಲ್ಲ, ಅಲ್ಲಿನ ರಾಜ ಸ್ವಯಂ ಗೃಹಬಂಧಿಯಗಿದ್ದಾನೆ. ಈಗ ಅಲ್ಲಿ ನಾವು ದಿಗ್ಬಂಧನ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.

ಎಷ್ಟು ಸಮಯದವರೆಗೆ?

ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ’ಚಕ್ಕಾ ಜಾಮ್’ ನಡೆಯಲಿದೆ. ಬಂದು ನಿಲ್ಲುವ ವಾಹನಗಳಿಗೆ ನೀರು ಮತ್ತು ಆಹಾರವನ್ನು ನೀಡಲಾಗುವುದು ಎಂದು ಟಿಕಾಯತ್ ಹೇಳಿದ್ದಾರೆ. ಈ ಜನರಿಗೆ ಸರ್ಕಾರವು ರೈತರೊಂದಿಗೆ ಹೇಗೆ ವರ್ತಿಸುತ್ತಿದೆ ಎಂಬುದರ ಕುರಿತು ತಿಳಿಸಲಾಗುವುದು ಎಂದಿದ್ದಾರೆ.

ಈ ಪ್ರತಿಭಟನೆಯನ್ನು ರೈತರ ನೇತೃತ್ವದ ’ಸೈದ್ಧಾಂತಿಕ ಕ್ರಾಂತಿ’ ಎಂದು ಅವರು ಬಣ್ಣಿಸಿದ್ದಾರೆ. ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿನ ರೈತ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ, ಈ ಪ್ರತಿಭಟನೆಗೆ ಫೋನ್‌ಗಳು ಅಥವಾ ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಇದು ಸರ್ಕಾರದ ಕ್ರಮಗಳ ವಿರುದ್ಧದ ಪ್ರತಿಭಟನೆ ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ಭದ್ರತಾ ವ್ಯವಸ್ಥೆ:

ರಾಷ್ಟ್ರವ್ಯಾಪಿ ’ಚಕ್ಕಾ ಜಾಮ್’ ದೃಷ್ಟಿಯಿಂದ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಗಾಜಿಪುರ ಗಡಿಯಲ್ಲಿ ವಾಹನಗಳ ಸಂಚಾರವನ್ನು ತಡೆಯಲು ಪೊಲೀಸರು ಬಹು-ಪದರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ಜನರು ಕಾಲ್ನಡಿಗೆಯಲ್ಲಿ ಬರುವುದನ್ನು ತಪ್ಪಿಸಲು ಮುಳ್ಳುತಂತಿ-ಮೊಳೆಗಳನ್ನು ಸಹ ಹಾಕಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ಹರಿಯಾಣ ಪೊಲೀಸರು ಭದ್ರತಾ ಕ್ರಮಗಳನ್ನು ಚುರುಕುಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಮುಖ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಹೇಳಲಾಗಿದ್ದು, ಸಮರ್ಪಕ ಸಿಬ್ಬಂದಿಯನ್ನು ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿಭಟನೆಗಳ ಬಗ್ಗೆ:

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಪ್ರಮಾಣದ ರೈತರು ಸೇರಿದಂತೆ ದೇಶದ ಇತರ ಭಾಗಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿದ ರಾಜ್ಯ ಸರ್ಕಾರ- ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...