Homeಮುಖಪುಟಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಮೋದಿ ಸರ್ಕಾರ ಇರುವವರೆಗೂ ಮುಂದುವರಿಸಲು ಸಿದ್ಧ ಎಂದು ನರೇಂದ್ರ ಟಿಕಾಯತ್ ಹೇಳಿದ್ದಾರೆ.

“ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಇಬ್ಬರು ಹಿರಿಯ ಸೋದರರಾದ ಹಾಗೂ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ನರೇಶ್ ಮತ್ತು ರಾಕೇಶ್ ಟಿಕಾಯತ್ ಅವರಂತೆಯೇ ರೈತರ ಸಮಸ್ಯೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ:…

ಮುಜಫ್ಫರನಗರದ ಸಿಸೌಲಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ 45 ವರ್ಷದ ನರೇಂದ್ರ, “ತಮ್ಮ ಕುಟುಂಬದ ಯಾವುದೇ ಒಬ್ಬ ಸದಸ್ಯ ಕೂಡ ಯವುದೇ ತಪ್ಪು ಮಾಡಿದ್ದಾರೆಂದು ಸಾಬೀತಾದಲ್ಲಿ ಇಡೀ ಟಿಕಾಯತ್ ಕುಟುಂಬ ಪ್ರತಿಭಟನಾ ಸ್ಥಳವನ್ನು ತ್ಯಜಿಸುತ್ತದೆ” ಎಂದು ಹೇಳಿದ ಅವರು ತಮ್ಮ ಕುಟುಂಬ ಪ್ರತಿಭಟನೆಯಿಂದ ಹಣ ಮತ್ತು ಆಸ್ತಿ ಸಂಪಾದಿಸಿದೆ ಎಂಬ ಕೆಲ ಆರೋಪಗಳನ್ನು ನಿರಾಕರಿಸಿದ್ದಾರೆ.

“ನಾನು ಮನೆಯಲ್ಲಿದ್ದರೂ ಸಹ ನನ್ನ ಕಣ್ಣೆಲ್ಲಾ ಪ್ರತಿಭಟನಾ ಸ್ಥಳದಲ್ಲಿದೆ. ಆಗಾಗ ಅಲ್ಲಿಗೆ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ತಮ್ಮ ಎಲ್ಲಾ ಬೇಡಿಕೆಗಳು ಸಂಪೂರ್ಣವಾಗಿ ಈಡೇರಿದ ನಂತರ ರೈತರು ಪ್ರತಿಭಟನಾ ಸ್ಥಳದಿಂದ ತೆರಳುತ್ತಾರೆ. ಯಾವುದೇ ಭರವಸೆ ಅಥವಾ ಭಾಗಶಃ ಬೇಡಿಕೆ ಪೂರೈಕೆಗೆ ಅವರು ಬಗ್ಗುವುದಿಲ್ಲ ಎಂದು ರೈತರ ನಿಲುವನ್ನು ಪುನರುಚ್ಚರಿಸಿದರು.

“ಕೃಷಿ ಉತ್ಪನ್ನಗಳನ್ನು ಎಂಎಸ್‍ಪಿಗೆ ಖರೀದಿಸಲಾಗುವುದೆಂದು ಹೇಳುತ್ತಿರುವ ಸರ್ಕಾರ ಲಿಖಿತ ಭರವಸೆಯನ್ನು ಏಕೆ ನೀಡುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ರಾಕೇಶ್ ಟಿಕಾಯತ್, ನರೇಶ್ ಟಿಕಾಯತ್ ಅವರು ರೈತ ಹೋರಾಟದ ಮುಂಚೂಣಿ ನಾಯಕರ ಸಾಲಿನಲ್ಲಿದ್ದಾರೆ. ಈಗ ಇವರ ಮತ್ತೋರ್ವ ಸಹೋದರರಾದ ನರೇಂದ್ರ ಟಿಕಾಯತ್ ಕೂಡ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...