HomeಚಳವಳಿBJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

BJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ.

- Advertisement -
- Advertisement -

ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಬಿಜೆಪಿ ವಿವಾದಾತ್ಮಕ, ಸಂಶಯಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಒಬ್ಬರು ಓರ್ವ ಹಿರಿಯ ರೈತ ಮುಖಂಡರ ಮೇಲೆ ಹಲ್ಲೆ ಮಾಡುತ್ತಿರುವ ಚಿತ್ರ ಸಕತ್ ವೈರಲ್ ಆಗಿತ್ತು.

ಹಲವು ಕಾಂಗ್ರೆಸ್ ಮುಖಂಡರು ಈ ಚಿತ್ರವನ್ನು ಬಳಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಬಿಜೆಪಿ ನಿಜಕ್ಕೂ ಅವರನ್ನೂ ಥಳಿಸಲಾಗಿದೇಯೇ ಎಂದು ಪ್ರಶ್ನೆ ಮಾಡಿತ್ತು.

ಸದ್ಯ ವೈರಲ್ ಚಿತ್ರದಲ್ಲಿರುವ ಹಿರಿಯ ರೈತರು ಎನ್‌ಡಿಟಿವಿ ಜೊತೆಗೆ ಮಾತನಾಡಿದ್ದು, ಹಲವು ಬಾರಿ ಲಾಠಿಯಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಅಮಿತ್ ಮಾಳವಿಯಾ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಎಂದು ಕರೆದಿದ್ದರು. ಪೊಲೀಸರು ರೈತರ ಮೇಲೆ ಹಲ್ಲೆಯಲ್ಲ, ಚೂರು ಕೂಡ ಮುಟ್ಟಿಲ್ಲ ಎಂದಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ಎನ್‌ಡಿಟಿವಿ ಚಿತ್ರದಲ್ಲಿರುವ 60 ವರ್ಷದ ಹಿರಿಯ ರೈತ ಸುಖದೇವ್ ಸಿಂಗ್ ಅವರನ್ನು ಪ್ರತಿಭಟನಾ ಸ್ಥಳದಲ್ಲಿ ಪತ್ತೆ ಮಾಡಿ, ಘಟನೆ ಬಗ್ಗೆ ಅವರಿಂದಲೇ ಮಾಹಿತಿ ಕೇಳಿದ್ದಾರೆ.

ಸುಖದೇವ್ ಸಿಂಗ್, ಪೊಲೀಸರ ಲಾಠಿಗಳಿಂದ ಅನೇಕ ಹೊಡೆತಗಳನ್ನು ತಿಂದಿದ್ದು, ಅವರ ದೇಹದಾದ್ಯಂತ ಮೂಗೇಟುಗಳು ಇರುವ ಬಗ್ಗೆ ತಿಳಿಸಿದ್ದಾರೆ. ದೆಹಲಿ ಮತ್ತು ಹರಿಯಾಣ ನಡುವಿನ ಸಿಂಧೂ ಗಡಿಯಲ್ಲಿ ರಾಜಧಾನಿಗೆ ಪ್ರವೇಶಿಸಲು ಯತ್ನಿಸುತ್ತಿರುವಾಗ ಶುಕ್ರವಾರ ಈ ಘಟನೆ ನಡೆದಿದೆ.

“ಅವರು ನಮ್ಮ ಮೇಲೆ ಜಲ ಫಿರಂಗಿಗಳು, ಅಶ್ರುವಾಯು ಬಳಸಿದರು ನಂತರ ಲಾಠಿಯಿಂದ ಹೊಡೆದರು. ನನ್ನ ದೇಹ, ಕಾಲುಗಳು, ಬೆನ್ನಿನಾದ್ಯಂತ ನನಗೆ ನೋವುಂಟಾಗಿದೆ” ಎಂದು ಸುಖದೇವ್ ಸಿಂಗ್ ಹೇಳಿದ್ದಾರೆ. ಜೊತೆಗೆ ಅವರ ಕೈ ಮೇಲೆ ಲಾಠಿ ಏಟಿನಿಂದ ಉಂಟಾಗಿರುವ ಗಾಯದ ಕಲೆಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನೂರಾರು ರೈತರೊಂದಿಗೆ ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಲ್ಲಿರುವ ಸುಖದೇವ್ ಸಿಂಗ್, ’ತಾವು ಯಾವುದೇ ಘೋಷಣೆಗಳನ್ನು ಕೂಗದಿದ್ದರೂ, ಪೊಲೀಸರ ಮೇಲೆ ಕಲ್ಲು ಎಸೆಯದಿದ್ದರೂ ನಮಗೆ ಏಕೆ ಹೊಡೆದರು ಎಂದು ಅರ್ಥವಾಗುತ್ತಿಲ್ಲ’ ಎಂದು ಹೇಳಿದರು. ವೈರಲ್ ಚಿತ್ರದಲ್ಲಿರುವ ಸುಖದೇವ್ ಸಿಂಗ್ ಪಂಜಾಬ್‌ನ ಕಪುರ್ಥಾಲಾದಿಂದ ಬಂದಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ವಾಪಸ್ ತೆಗೆದುಕೊಳ್ಳುವವರೆಗೆ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.

ಫ್ಯಾಕ್ಟ್-ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ನಂತರ ಸುದೀರ್ಘವಾದ ವೀಡಿಯೊವನ್ನು ಪೋಸ್ಟ್ ಮಾಡಿತ್ತು. ಇದರಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ಮಾಡುವ ದೃಶ್ಯಗಳು ಕಾಣಿಸುತ್ತಿದ್ದವು.

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ. ಇಲ್ಲಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೋಟೋವನ್ನು ತೆಗೆದುಕೊಂಡಿದ್ದಾರೆ.

erh385ds
PC: PTI

ರವಿ ಚೌಧರಿ ಅವರನ್ನು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ, “ನಾನು ವೈರಲ್ ಆದ ಚಿತ್ರವನ್ನು ಇನ್ನೊಂದು ಕಡೆಯಿಂದ ಕ್ಲಿಕ್ ಮಾಡಿದ್ದೇನೆ ಮತ್ತು ಆ ಸಮಯದಲ್ಲಿ ಸಾಕಷ್ಟು ಗದ್ದಲ ಉಂಟಾಗಿದ್ದರಿಂದ ಲಾಠಿ ರೈತರನ್ನು ಮುಟ್ಟಿದೆಯೆ ಅಥವಾ ಇಲ್ಲವೇ ಎಂದು ಖಚಿತವಾಗಿ ಹೇಳಲಾಗುವುದಿಲ್ಲ’ ಎಂದಿದ್ದಾರೆ.

 

View this post on Instagram

 

A post shared by Ravi Choudhary (@choudharyravi)

’ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದರು. ರೈತ ಪ್ರತಿಭಟನಾಕಾರರು ತಮ್ಮನ್ನು ಉಳಿಸಿಕೊಳ್ಳಲು ಬೇರೆ ದಿಕ್ಕಿನಲ್ಲಿ ಓಡುತ್ತಿದ್ದರು. ಈತನಲ್ಲದಿದ್ದರೂ ಈ ಮೊದಲೇ ಇನ್ನೊಬ್ಬ ಪೋಲೀಸ್ ಸಿಬ್ಬಂದಿ ರೈತರನ್ನು ಹೊಡೆದಿರಬಹುದು’ ಎಂದಿದ್ದಾರೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...