HomeಚಳವಳಿBJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

BJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ.

- Advertisement -
- Advertisement -

ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಬಿಜೆಪಿ ವಿವಾದಾತ್ಮಕ, ಸಂಶಯಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಒಬ್ಬರು ಓರ್ವ ಹಿರಿಯ ರೈತ ಮುಖಂಡರ ಮೇಲೆ ಹಲ್ಲೆ ಮಾಡುತ್ತಿರುವ ಚಿತ್ರ ಸಕತ್ ವೈರಲ್ ಆಗಿತ್ತು.

ಹಲವು ಕಾಂಗ್ರೆಸ್ ಮುಖಂಡರು ಈ ಚಿತ್ರವನ್ನು ಬಳಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಬಿಜೆಪಿ ನಿಜಕ್ಕೂ ಅವರನ್ನೂ ಥಳಿಸಲಾಗಿದೇಯೇ ಎಂದು ಪ್ರಶ್ನೆ ಮಾಡಿತ್ತು.

ಸದ್ಯ ವೈರಲ್ ಚಿತ್ರದಲ್ಲಿರುವ ಹಿರಿಯ ರೈತರು ಎನ್‌ಡಿಟಿವಿ ಜೊತೆಗೆ ಮಾತನಾಡಿದ್ದು, ಹಲವು ಬಾರಿ ಲಾಠಿಯಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಅಮಿತ್ ಮಾಳವಿಯಾ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಎಂದು ಕರೆದಿದ್ದರು. ಪೊಲೀಸರು ರೈತರ ಮೇಲೆ ಹಲ್ಲೆಯಲ್ಲ, ಚೂರು ಕೂಡ ಮುಟ್ಟಿಲ್ಲ ಎಂದಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ಎನ್‌ಡಿಟಿವಿ ಚಿತ್ರದಲ್ಲಿರುವ 60 ವರ್ಷದ ಹಿರಿಯ ರೈತ ಸುಖದೇವ್ ಸಿಂಗ್ ಅವರನ್ನು ಪ್ರತಿಭಟನಾ ಸ್ಥಳದಲ್ಲಿ ಪತ್ತೆ ಮಾಡಿ, ಘಟನೆ ಬಗ್ಗೆ ಅವರಿಂದಲೇ ಮಾಹಿತಿ ಕೇಳಿದ್ದಾರೆ.

ಸುಖದೇವ್ ಸಿಂಗ್, ಪೊಲೀಸರ ಲಾಠಿಗಳಿಂದ ಅನೇಕ ಹೊಡೆತಗಳನ್ನು ತಿಂದಿದ್ದು, ಅವರ ದೇಹದಾದ್ಯಂತ ಮೂಗೇಟುಗಳು ಇರುವ ಬಗ್ಗೆ ತಿಳಿಸಿದ್ದಾರೆ. ದೆಹಲಿ ಮತ್ತು ಹರಿಯಾಣ ನಡುವಿನ ಸಿಂಧೂ ಗಡಿಯಲ್ಲಿ ರಾಜಧಾನಿಗೆ ಪ್ರವೇಶಿಸಲು ಯತ್ನಿಸುತ್ತಿರುವಾಗ ಶುಕ್ರವಾರ ಈ ಘಟನೆ ನಡೆದಿದೆ.

“ಅವರು ನಮ್ಮ ಮೇಲೆ ಜಲ ಫಿರಂಗಿಗಳು, ಅಶ್ರುವಾಯು ಬಳಸಿದರು ನಂತರ ಲಾಠಿಯಿಂದ ಹೊಡೆದರು. ನನ್ನ ದೇಹ, ಕಾಲುಗಳು, ಬೆನ್ನಿನಾದ್ಯಂತ ನನಗೆ ನೋವುಂಟಾಗಿದೆ” ಎಂದು ಸುಖದೇವ್ ಸಿಂಗ್ ಹೇಳಿದ್ದಾರೆ. ಜೊತೆಗೆ ಅವರ ಕೈ ಮೇಲೆ ಲಾಠಿ ಏಟಿನಿಂದ ಉಂಟಾಗಿರುವ ಗಾಯದ ಕಲೆಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನೂರಾರು ರೈತರೊಂದಿಗೆ ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಲ್ಲಿರುವ ಸುಖದೇವ್ ಸಿಂಗ್, ’ತಾವು ಯಾವುದೇ ಘೋಷಣೆಗಳನ್ನು ಕೂಗದಿದ್ದರೂ, ಪೊಲೀಸರ ಮೇಲೆ ಕಲ್ಲು ಎಸೆಯದಿದ್ದರೂ ನಮಗೆ ಏಕೆ ಹೊಡೆದರು ಎಂದು ಅರ್ಥವಾಗುತ್ತಿಲ್ಲ’ ಎಂದು ಹೇಳಿದರು. ವೈರಲ್ ಚಿತ್ರದಲ್ಲಿರುವ ಸುಖದೇವ್ ಸಿಂಗ್ ಪಂಜಾಬ್‌ನ ಕಪುರ್ಥಾಲಾದಿಂದ ಬಂದಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ವಾಪಸ್ ತೆಗೆದುಕೊಳ್ಳುವವರೆಗೆ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.

ಫ್ಯಾಕ್ಟ್-ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ನಂತರ ಸುದೀರ್ಘವಾದ ವೀಡಿಯೊವನ್ನು ಪೋಸ್ಟ್ ಮಾಡಿತ್ತು. ಇದರಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ಮಾಡುವ ದೃಶ್ಯಗಳು ಕಾಣಿಸುತ್ತಿದ್ದವು.

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ. ಇಲ್ಲಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೋಟೋವನ್ನು ತೆಗೆದುಕೊಂಡಿದ್ದಾರೆ.

erh385ds
PC: PTI

ರವಿ ಚೌಧರಿ ಅವರನ್ನು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ, “ನಾನು ವೈರಲ್ ಆದ ಚಿತ್ರವನ್ನು ಇನ್ನೊಂದು ಕಡೆಯಿಂದ ಕ್ಲಿಕ್ ಮಾಡಿದ್ದೇನೆ ಮತ್ತು ಆ ಸಮಯದಲ್ಲಿ ಸಾಕಷ್ಟು ಗದ್ದಲ ಉಂಟಾಗಿದ್ದರಿಂದ ಲಾಠಿ ರೈತರನ್ನು ಮುಟ್ಟಿದೆಯೆ ಅಥವಾ ಇಲ್ಲವೇ ಎಂದು ಖಚಿತವಾಗಿ ಹೇಳಲಾಗುವುದಿಲ್ಲ’ ಎಂದಿದ್ದಾರೆ.

 

View this post on Instagram

 

A post shared by Ravi Choudhary (@choudharyravi)

’ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದರು. ರೈತ ಪ್ರತಿಭಟನಾಕಾರರು ತಮ್ಮನ್ನು ಉಳಿಸಿಕೊಳ್ಳಲು ಬೇರೆ ದಿಕ್ಕಿನಲ್ಲಿ ಓಡುತ್ತಿದ್ದರು. ಈತನಲ್ಲದಿದ್ದರೂ ಈ ಮೊದಲೇ ಇನ್ನೊಬ್ಬ ಪೋಲೀಸ್ ಸಿಬ್ಬಂದಿ ರೈತರನ್ನು ಹೊಡೆದಿರಬಹುದು’ ಎಂದಿದ್ದಾರೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...