HomeಚಳವಳಿBJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

BJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ.

- Advertisement -
- Advertisement -

ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಬಿಜೆಪಿ ವಿವಾದಾತ್ಮಕ, ಸಂಶಯಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಒಬ್ಬರು ಓರ್ವ ಹಿರಿಯ ರೈತ ಮುಖಂಡರ ಮೇಲೆ ಹಲ್ಲೆ ಮಾಡುತ್ತಿರುವ ಚಿತ್ರ ಸಕತ್ ವೈರಲ್ ಆಗಿತ್ತು.

ಹಲವು ಕಾಂಗ್ರೆಸ್ ಮುಖಂಡರು ಈ ಚಿತ್ರವನ್ನು ಬಳಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಬಿಜೆಪಿ ನಿಜಕ್ಕೂ ಅವರನ್ನೂ ಥಳಿಸಲಾಗಿದೇಯೇ ಎಂದು ಪ್ರಶ್ನೆ ಮಾಡಿತ್ತು.

ಸದ್ಯ ವೈರಲ್ ಚಿತ್ರದಲ್ಲಿರುವ ಹಿರಿಯ ರೈತರು ಎನ್‌ಡಿಟಿವಿ ಜೊತೆಗೆ ಮಾತನಾಡಿದ್ದು, ಹಲವು ಬಾರಿ ಲಾಠಿಯಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಅಮಿತ್ ಮಾಳವಿಯಾ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಎಂದು ಕರೆದಿದ್ದರು. ಪೊಲೀಸರು ರೈತರ ಮೇಲೆ ಹಲ್ಲೆಯಲ್ಲ, ಚೂರು ಕೂಡ ಮುಟ್ಟಿಲ್ಲ ಎಂದಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ಎನ್‌ಡಿಟಿವಿ ಚಿತ್ರದಲ್ಲಿರುವ 60 ವರ್ಷದ ಹಿರಿಯ ರೈತ ಸುಖದೇವ್ ಸಿಂಗ್ ಅವರನ್ನು ಪ್ರತಿಭಟನಾ ಸ್ಥಳದಲ್ಲಿ ಪತ್ತೆ ಮಾಡಿ, ಘಟನೆ ಬಗ್ಗೆ ಅವರಿಂದಲೇ ಮಾಹಿತಿ ಕೇಳಿದ್ದಾರೆ.

ಸುಖದೇವ್ ಸಿಂಗ್, ಪೊಲೀಸರ ಲಾಠಿಗಳಿಂದ ಅನೇಕ ಹೊಡೆತಗಳನ್ನು ತಿಂದಿದ್ದು, ಅವರ ದೇಹದಾದ್ಯಂತ ಮೂಗೇಟುಗಳು ಇರುವ ಬಗ್ಗೆ ತಿಳಿಸಿದ್ದಾರೆ. ದೆಹಲಿ ಮತ್ತು ಹರಿಯಾಣ ನಡುವಿನ ಸಿಂಧೂ ಗಡಿಯಲ್ಲಿ ರಾಜಧಾನಿಗೆ ಪ್ರವೇಶಿಸಲು ಯತ್ನಿಸುತ್ತಿರುವಾಗ ಶುಕ್ರವಾರ ಈ ಘಟನೆ ನಡೆದಿದೆ.

“ಅವರು ನಮ್ಮ ಮೇಲೆ ಜಲ ಫಿರಂಗಿಗಳು, ಅಶ್ರುವಾಯು ಬಳಸಿದರು ನಂತರ ಲಾಠಿಯಿಂದ ಹೊಡೆದರು. ನನ್ನ ದೇಹ, ಕಾಲುಗಳು, ಬೆನ್ನಿನಾದ್ಯಂತ ನನಗೆ ನೋವುಂಟಾಗಿದೆ” ಎಂದು ಸುಖದೇವ್ ಸಿಂಗ್ ಹೇಳಿದ್ದಾರೆ. ಜೊತೆಗೆ ಅವರ ಕೈ ಮೇಲೆ ಲಾಠಿ ಏಟಿನಿಂದ ಉಂಟಾಗಿರುವ ಗಾಯದ ಕಲೆಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನೂರಾರು ರೈತರೊಂದಿಗೆ ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಲ್ಲಿರುವ ಸುಖದೇವ್ ಸಿಂಗ್, ’ತಾವು ಯಾವುದೇ ಘೋಷಣೆಗಳನ್ನು ಕೂಗದಿದ್ದರೂ, ಪೊಲೀಸರ ಮೇಲೆ ಕಲ್ಲು ಎಸೆಯದಿದ್ದರೂ ನಮಗೆ ಏಕೆ ಹೊಡೆದರು ಎಂದು ಅರ್ಥವಾಗುತ್ತಿಲ್ಲ’ ಎಂದು ಹೇಳಿದರು. ವೈರಲ್ ಚಿತ್ರದಲ್ಲಿರುವ ಸುಖದೇವ್ ಸಿಂಗ್ ಪಂಜಾಬ್‌ನ ಕಪುರ್ಥಾಲಾದಿಂದ ಬಂದಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ವಾಪಸ್ ತೆಗೆದುಕೊಳ್ಳುವವರೆಗೆ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.

ಫ್ಯಾಕ್ಟ್-ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ನಂತರ ಸುದೀರ್ಘವಾದ ವೀಡಿಯೊವನ್ನು ಪೋಸ್ಟ್ ಮಾಡಿತ್ತು. ಇದರಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ಮಾಡುವ ದೃಶ್ಯಗಳು ಕಾಣಿಸುತ್ತಿದ್ದವು.

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ. ಇಲ್ಲಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೋಟೋವನ್ನು ತೆಗೆದುಕೊಂಡಿದ್ದಾರೆ.

erh385ds
PC: PTI

ರವಿ ಚೌಧರಿ ಅವರನ್ನು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ, “ನಾನು ವೈರಲ್ ಆದ ಚಿತ್ರವನ್ನು ಇನ್ನೊಂದು ಕಡೆಯಿಂದ ಕ್ಲಿಕ್ ಮಾಡಿದ್ದೇನೆ ಮತ್ತು ಆ ಸಮಯದಲ್ಲಿ ಸಾಕಷ್ಟು ಗದ್ದಲ ಉಂಟಾಗಿದ್ದರಿಂದ ಲಾಠಿ ರೈತರನ್ನು ಮುಟ್ಟಿದೆಯೆ ಅಥವಾ ಇಲ್ಲವೇ ಎಂದು ಖಚಿತವಾಗಿ ಹೇಳಲಾಗುವುದಿಲ್ಲ’ ಎಂದಿದ್ದಾರೆ.

 

View this post on Instagram

 

A post shared by Ravi Choudhary (@choudharyravi)

’ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದರು. ರೈತ ಪ್ರತಿಭಟನಾಕಾರರು ತಮ್ಮನ್ನು ಉಳಿಸಿಕೊಳ್ಳಲು ಬೇರೆ ದಿಕ್ಕಿನಲ್ಲಿ ಓಡುತ್ತಿದ್ದರು. ಈತನಲ್ಲದಿದ್ದರೂ ಈ ಮೊದಲೇ ಇನ್ನೊಬ್ಬ ಪೋಲೀಸ್ ಸಿಬ್ಬಂದಿ ರೈತರನ್ನು ಹೊಡೆದಿರಬಹುದು’ ಎಂದಿದ್ದಾರೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...