HomeಚಳವಳಿBJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

BJP ಐಟಿ ಸೆಲ್‌ ಹೇಳಿದ ಸುಳ್ಳು ಬಯಲು: ವೈರಲ್ ಆದ ಚಿತ್ರದ‌ ಸತ್ಯ ಹೇಳಿದ ರೈತ!

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ.

- Advertisement -
- Advertisement -

ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಬಿಜೆಪಿ ವಿವಾದಾತ್ಮಕ, ಸಂಶಯಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಒಬ್ಬರು ಓರ್ವ ಹಿರಿಯ ರೈತ ಮುಖಂಡರ ಮೇಲೆ ಹಲ್ಲೆ ಮಾಡುತ್ತಿರುವ ಚಿತ್ರ ಸಕತ್ ವೈರಲ್ ಆಗಿತ್ತು.

ಹಲವು ಕಾಂಗ್ರೆಸ್ ಮುಖಂಡರು ಈ ಚಿತ್ರವನ್ನು ಬಳಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಬಿಜೆಪಿ ನಿಜಕ್ಕೂ ಅವರನ್ನೂ ಥಳಿಸಲಾಗಿದೇಯೇ ಎಂದು ಪ್ರಶ್ನೆ ಮಾಡಿತ್ತು.

ಸದ್ಯ ವೈರಲ್ ಚಿತ್ರದಲ್ಲಿರುವ ಹಿರಿಯ ರೈತರು ಎನ್‌ಡಿಟಿವಿ ಜೊತೆಗೆ ಮಾತನಾಡಿದ್ದು, ಹಲವು ಬಾರಿ ಲಾಠಿಯಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಅಮಿತ್ ಮಾಳವಿಯಾ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಎಂದು ಕರೆದಿದ್ದರು. ಪೊಲೀಸರು ರೈತರ ಮೇಲೆ ಹಲ್ಲೆಯಲ್ಲ, ಚೂರು ಕೂಡ ಮುಟ್ಟಿಲ್ಲ ಎಂದಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ಎನ್‌ಡಿಟಿವಿ ಚಿತ್ರದಲ್ಲಿರುವ 60 ವರ್ಷದ ಹಿರಿಯ ರೈತ ಸುಖದೇವ್ ಸಿಂಗ್ ಅವರನ್ನು ಪ್ರತಿಭಟನಾ ಸ್ಥಳದಲ್ಲಿ ಪತ್ತೆ ಮಾಡಿ, ಘಟನೆ ಬಗ್ಗೆ ಅವರಿಂದಲೇ ಮಾಹಿತಿ ಕೇಳಿದ್ದಾರೆ.

ಸುಖದೇವ್ ಸಿಂಗ್, ಪೊಲೀಸರ ಲಾಠಿಗಳಿಂದ ಅನೇಕ ಹೊಡೆತಗಳನ್ನು ತಿಂದಿದ್ದು, ಅವರ ದೇಹದಾದ್ಯಂತ ಮೂಗೇಟುಗಳು ಇರುವ ಬಗ್ಗೆ ತಿಳಿಸಿದ್ದಾರೆ. ದೆಹಲಿ ಮತ್ತು ಹರಿಯಾಣ ನಡುವಿನ ಸಿಂಧೂ ಗಡಿಯಲ್ಲಿ ರಾಜಧಾನಿಗೆ ಪ್ರವೇಶಿಸಲು ಯತ್ನಿಸುತ್ತಿರುವಾಗ ಶುಕ್ರವಾರ ಈ ಘಟನೆ ನಡೆದಿದೆ.

“ಅವರು ನಮ್ಮ ಮೇಲೆ ಜಲ ಫಿರಂಗಿಗಳು, ಅಶ್ರುವಾಯು ಬಳಸಿದರು ನಂತರ ಲಾಠಿಯಿಂದ ಹೊಡೆದರು. ನನ್ನ ದೇಹ, ಕಾಲುಗಳು, ಬೆನ್ನಿನಾದ್ಯಂತ ನನಗೆ ನೋವುಂಟಾಗಿದೆ” ಎಂದು ಸುಖದೇವ್ ಸಿಂಗ್ ಹೇಳಿದ್ದಾರೆ. ಜೊತೆಗೆ ಅವರ ಕೈ ಮೇಲೆ ಲಾಠಿ ಏಟಿನಿಂದ ಉಂಟಾಗಿರುವ ಗಾಯದ ಕಲೆಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನೂರಾರು ರೈತರೊಂದಿಗೆ ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಲ್ಲಿರುವ ಸುಖದೇವ್ ಸಿಂಗ್, ’ತಾವು ಯಾವುದೇ ಘೋಷಣೆಗಳನ್ನು ಕೂಗದಿದ್ದರೂ, ಪೊಲೀಸರ ಮೇಲೆ ಕಲ್ಲು ಎಸೆಯದಿದ್ದರೂ ನಮಗೆ ಏಕೆ ಹೊಡೆದರು ಎಂದು ಅರ್ಥವಾಗುತ್ತಿಲ್ಲ’ ಎಂದು ಹೇಳಿದರು. ವೈರಲ್ ಚಿತ್ರದಲ್ಲಿರುವ ಸುಖದೇವ್ ಸಿಂಗ್ ಪಂಜಾಬ್‌ನ ಕಪುರ್ಥಾಲಾದಿಂದ ಬಂದಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ವಾಪಸ್ ತೆಗೆದುಕೊಳ್ಳುವವರೆಗೆ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.

ಫ್ಯಾಕ್ಟ್-ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ನಂತರ ಸುದೀರ್ಘವಾದ ವೀಡಿಯೊವನ್ನು ಪೋಸ್ಟ್ ಮಾಡಿತ್ತು. ಇದರಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ಮಾಡುವ ದೃಶ್ಯಗಳು ಕಾಣಿಸುತ್ತಿದ್ದವು.

ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಚಿತ್ರಗಳಲ್ಲೂ ಹಿರಿಯ ರೈತರ ಮೇಲೆ ಪೊಲೀಸರು ಹಲ್ಲೆ ಮಾಡುತ್ತಿರುವ ಚಿತ್ರವಿದೆ. ಇಲ್ಲಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೋಟೋವನ್ನು ತೆಗೆದುಕೊಂಡಿದ್ದಾರೆ.

erh385ds
PC: PTI

ರವಿ ಚೌಧರಿ ಅವರನ್ನು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ, “ನಾನು ವೈರಲ್ ಆದ ಚಿತ್ರವನ್ನು ಇನ್ನೊಂದು ಕಡೆಯಿಂದ ಕ್ಲಿಕ್ ಮಾಡಿದ್ದೇನೆ ಮತ್ತು ಆ ಸಮಯದಲ್ಲಿ ಸಾಕಷ್ಟು ಗದ್ದಲ ಉಂಟಾಗಿದ್ದರಿಂದ ಲಾಠಿ ರೈತರನ್ನು ಮುಟ್ಟಿದೆಯೆ ಅಥವಾ ಇಲ್ಲವೇ ಎಂದು ಖಚಿತವಾಗಿ ಹೇಳಲಾಗುವುದಿಲ್ಲ’ ಎಂದಿದ್ದಾರೆ.

 

View this post on Instagram

 

A post shared by Ravi Choudhary (@choudharyravi)

’ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದರು. ರೈತ ಪ್ರತಿಭಟನಾಕಾರರು ತಮ್ಮನ್ನು ಉಳಿಸಿಕೊಳ್ಳಲು ಬೇರೆ ದಿಕ್ಕಿನಲ್ಲಿ ಓಡುತ್ತಿದ್ದರು. ಈತನಲ್ಲದಿದ್ದರೂ ಈ ಮೊದಲೇ ಇನ್ನೊಬ್ಬ ಪೋಲೀಸ್ ಸಿಬ್ಬಂದಿ ರೈತರನ್ನು ಹೊಡೆದಿರಬಹುದು’ ಎಂದಿದ್ದಾರೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...