Homeಚಳವಳಿಕಳೆದ 6 ದಿನಗಳಿಂದ ರೈತ ನಾಯಕ ದಲ್ಲೆವಾಲ್‌ಗೆ ವೈದ್ಯಕೀಯ ನೆರವು ಸಾಧ್ಯವಾಗುತ್ತಿಲ್ಲ: ರೈತ ಸಂಘಟನೆಗಳು

ಕಳೆದ 6 ದಿನಗಳಿಂದ ರೈತ ನಾಯಕ ದಲ್ಲೆವಾಲ್‌ಗೆ ವೈದ್ಯಕೀಯ ನೆರವು ಸಾಧ್ಯವಾಗುತ್ತಿಲ್ಲ: ರೈತ ಸಂಘಟನೆಗಳು

- Advertisement -
- Advertisement -

ಇಂಟ್ರಾವೆನಸ್ ಡ್ರಿಪ್‌ಗಾಗಿ ರಕ್ತನಾಳಗಳನ್ನು ಪತ್ತೆ ಮಾಡಲು ವೈದ್ಯರಿಗೆ ಸಾಧ್ಯವಾಗದ ಕಾರಣ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗೆ ಕಳೆದ ಆರು ದಿನಗಳಿಂದ ವೈದ್ಯಕೀಯ ನೆರವು ನೀಡಲಾಗಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಭಾನುವಾರ ತಿಳಿಸಿದೆ. ಕಳೆದ 6 ದಿನಗಳಿಂದ

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ನವೆಂಬರ್ 26 ರಿಂದ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ಹಲವು ಬೇಡಿಕೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ವ್ಯಾಪಕ ಅಭಿಯಾನದ ಭಾಗವಾಗಿ ಈ ಮುಷ್ಕರ ನಡೆಯುತ್ತಿದೆ. ಕನಿಷ್ಠ ಬೆಂಬಲ ಬೆಲೆ ಎಂದರೆ ಸರ್ಕಾರವು ರೈತರಿಂದ ಬೆಳೆಗಳನ್ನು ಖರೀದಿಸುವ ದರವಾಗಿದೆ. ಕಳೆದ 6 ದಿನಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 14 ರಂದು ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸುವುದಾಗಿ ಜನವರಿ 18 ರಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗಾಗಿ 70 ವರ್ಷದ ದಲ್ಲೆವಾಲ್ ಅವರು ವೈದ್ಯಕೀಯ ನೆರವು ಪಡೆಯಲು ಒಪ್ಪಿಕೊಂಡಿದ್ದರು. ಆದಾಗ್ಯೂ, ಕನಿಷ್ಠ ಬೆಂಬಲ ಬೆಲೆಯ ಕುರಿತು ಕಾನೂನುಬದ್ಧ ಖಾತರಿ ನೀಡುವವರೆಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಪಂಜಾಬ್ ಸರ್ಕಾರವು ದಲ್ಲೆವಾಲ್ ಅವರ ಆರೋಗ್ಯದ ಹೊಣೆಯನ್ನು ಹೊರಬೇಕೆಂದು ಒತ್ತಾಯಿಸಿದ ನಂತರ ಇದು ನಡೆದಿತ್ತು.

ಕನಿಷ್ಠ ಬೆಂಬಲ ಬೆಲೆಗಳಿಗೆ ಕಾನೂನು ಖಾತರಿ ನೀಡುವುದರ ಜೊತೆಗೆ, ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, 2013 ರ ಭೂಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ಫೆಬ್ರವರಿ 2024 ರಿಂದ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿರುವ ರೈತ ಸಂಘಟನೆಗಳು, ಕೇಂದ್ರ ಸರ್ಕಾರವು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಯಾವುದೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದೆ. ಅಂದಿನಿಂದ, ಅವರು ದೆಹಲಿ ಬಳಿಯ ಶಂಭು ಮತ್ತು ಖಾನೌರಿ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ನೇತೃತ್ವದ ಅಡಿಯಲ್ಲಿ ಬೀಡುಬಿಟ್ಟಿದ್ದಾರೆ.

ಪ್ರತಿಭಟನೆಗೆ ಒಂದು ವರ್ಷ ತುಂಬಿದ ನೆನಪಿಗಾಗಿ, ರೈತ ಗುಂಪುಗಳು ಫೆಬ್ರವರಿ 11 ರಂದು ರಾಜಸ್ಥಾನದ ರತನ್‌ಪುರ, ಫೆಬ್ರವರಿ 12 ರಂದು ಖಾನೌರಿ ರಾಜ್ಯ ಗಡಿಯಲ್ಲಿ ಮತ್ತು ಫೆಬ್ರವರಿ 13 ರಂದು ಶಂಭು ಗಡಿಯಲ್ಲಿ ಏಕತಾ ಸಭೆಗಳನ್ನು ಆಯೋಜಿಸುವುದಾಗಿ ಪ್ರಸ್ತಾಪಿಸಿವೆ.

ಇದನ್ನೂಓದಿ:  ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...