Homeಮುಖಪುಟರೈತ ಮುಖಂಡ ದಲ್ಲೆವಾಲ್‌ಗೆ ಹೃದಯಾಘಾತದ ಭೀತಿ; ಬಹು ಅಂಗಾಂಗ ವೈಫಲ್ಯದ ಎಚ್ಚರಿಕೆ ನೀಡಿದ ವೈದ್ಯರು

ರೈತ ಮುಖಂಡ ದಲ್ಲೆವಾಲ್‌ಗೆ ಹೃದಯಾಘಾತದ ಭೀತಿ; ಬಹು ಅಂಗಾಂಗ ವೈಫಲ್ಯದ ಎಚ್ಚರಿಕೆ ನೀಡಿದ ವೈದ್ಯರು

- Advertisement -
- Advertisement -

ಖಾನೌರಿ ಗಡಿ ಪ್ರತಿಭಟನಾ ಸ್ಥಳದಲ್ಲಿ ಕಳೆದ 28 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ನಿಗಾವಹಿಸುತ್ತಿರುವ ವೈದ್ಯರು, ಆರೋಗ್ಯ ಹದಗೆಟ್ಟಿರುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಂಭಾವ್ಯ ಹೃದಯ ಸ್ತಂಭನ ಮತ್ತು ಬಹು ಅಂಗಗಳ ವೈಫಲ್ಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

“ಉಪವಾಸವು ದಲ್ಲೆವಾಲ್ ಅವರ ನರಮಂಡಲವು ತೀವ್ರ ಪರಿಣಾಮ ಬೀರುತ್ತದೆ, ಅವರ ರಕ್ತದೊತ್ತಡ ಏರುಪೇರಾಗುತ್ತಿದೆ. ಅವರು ತೀವ್ರವಾದ ಪ್ರೋಟೀನ್ ಮತ್ತು ದ್ರವದ ಕೊರತೆಯನ್ನು ಹೊಂದಿದ್ದಾರೆ” ಎಂದು ತಜ್ಞ ವೈದ್ಯರು ಭಾನುವಾರ ಹೇಳಿದ್ದಾರೆ.

“ಅವರ ಯಕೃತ್ತು ಮತ್ತು ಇತರ ಅಂಗಗಳ ಕಾರ್ಯನಿರ್ವಹಣೆ ಕಳಪೆಯಾಗಿದೆ. ಯಾವುದೇ ಕ್ಷಣದಲ್ಲಿ ಅವರು ಹೃದಯಾಘಾತವನ್ನು ಎದುರಿಸಬಹುದು” ಎಂದು ಅವರು ಎಚ್ಚರಿಸಿದ್ದಾರೆ.

ದಲ್ಲೇವಾಲ್ ತಮ್ಮ ಉಪವಾಸ ಸತ್ಯಾಗ್ರಹದ ಮೂಲಕ, ಹೊಸ ಕಾನೂನಿನ ಮೂಲಕ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿದ್ದಾರೆ. ಅವರನ್ನು ಬೆಂಬಲಿಸಲು ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಗಡಿಯಲ್ಲಿ ಜಮಾಯಿಸಿದ್ದಾರೆ.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಎಸ್‌ಕೆಎಂ-ರಾಜಕೀಯೇತರ ಬ್ಯಾನರ್‌ನಡಿಯಲ್ಲಿ ಫೆಬ್ರವರಿ 13 ರಂದು ಪ್ರಾರಂಭವಾದ ಪ್ರತಿಭಟನೆಯಲ್ಲಿ ದಲ್ಲೆವಾಲ್ ಅವರ ಆರೋಗ್ಯವು ಹದಗೆಟ್ಟಿದ್ದರಿಂದ ಭಾಗವಹಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ದಲ್ಲೆವಾಲ್ ಅವರ ಸ್ಥಿತಿ ಸಾಮಾನ್ಯ ಎಂದು ಹೇಳುವ ಇತ್ತೀಚಿನ ಸುಪ್ರೀಂ ಕೋರ್ಟ್ ವರದಿಯನ್ನು ರೈತರು ತಳ್ಳಿಹಾಕಿದ್ದಾರೆ. ರೈತ ಮುಖಂಡ ಅಭಿಮನ್ಯು ಕೋಹರ್, “ಸುಪ್ರೀಂಕೋರ್ಟ್ ವರದಿಯು ಸತ್ಯವನ್ನು ಪ್ರತಿಬಿಂಬಿಸುವುದಿಲ್ಲ. ಪರೀಕ್ಷೆಗಳು ದಲ್ಲೆವಾಲ್ ಅವರ ದೇಹದಲ್ಲಿನ ಕೀಟೋನ್ ಮಟ್ಟಗಳು 6.90 ಎಂದು ತೋರಿಸುತ್ತವೆ, ಇದು ಸಾಮಾನ್ಯಕ್ಕಿಂತ 25% ಹೆಚ್ಚಾಗಿದೆ. ಈ ಸಂಶೋಧನೆಗಳನ್ನು ನಿರ್ಲಕ್ಷಿಸಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉದ್ವಿಗ್ನತೆಯನ್ನು ಹೆಚ್ಚಿಸಿದ ರೈತ ಮುಖಂಡ ಸುರ್ಜಿತ್ ಸಿಂಗ್ ಫೂಲ್, “ಆಡಳಿತವು ದಲ್ಲೆವಾಲ್ ಅವರನ್ನು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ತೆರವುಗೊಳಿಸಿದರೆ, ಎರಡೂ ಕಡೆ ರಕ್ತಪಾತವಾಗುತ್ತದೆ. ಇದು ಆಡಳಿತದ ಜವಾಬ್ದಾರಿಯಾಗಿದೆ” ಎಂದು ಎಚ್ಚರಿಸಿದರು.

ಪಂಜಾಬ್‌ನ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ನೇತೃತ್ವದ ಸಂಸದೀಯ ಸಮಿತಿ ವರದಿ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ಬಿಜೆಪಿ ಪ್ರತಿನಿಧಿಗಳು ಸೇರಿದಂತೆ 30 ಸದಸ್ಯರು ಬೆಂಬಲಿಸಿದ ವರದಿಯು ಎಂಎಸ್‌ಪಿ ಆಯೋಗದ ಅಗತ್ಯವನ್ನು ಎತ್ತಿ ತೋರಿಸಿದೆ. ಕಡಿಮೆ ರೈತರ ಆದಾಯ ಮತ್ತು ಕೃಷಿ ಬಜೆಟ್‌ಗಳ ಅಸಮರ್ಪಕ ಬಳಕೆಯಂತಹ ಸಮಸ್ಯೆಗಳನ್ನು ಸಮಿತಿ ಪ್ರಸ್ತಾಪಿಸಿದೆ.

ಪಂಜಾಬ್ ನಡೆಯುತ್ತಿರುವ ಶಹೀದಿ ದಿನಗಳಿಂದಾಗಿ ಡಿಸೆಂಬರ್ 24 ರಂದು ರಾಷ್ಟ್ರವ್ಯಾಪಿ ಕ್ಯಾಂಡಲ್ ಮಾರ್ಚ್ ಮತ್ತು ಡಿಸೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಸೇರಿದಂತೆ ಮುಂದಿನ ಕ್ರಮವನ್ನು ರೈತರು ಘೋಷಿಸಿದ್ದಾರೆ.

ಈ ಮಧ್ಯೆ, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಒಗ್ಗಟ್ಟು ವ್ಯಕ್ತಪಡಿಸಲು ದಲ್ಲೆವಾಲ್‌ ಅವರನ್ನು ಭೇಟಿಯಾಗಿದ್ದಾರೆ. ಅಗತ್ಯವಿದ್ದರೆ ರಾಹುಲ್ ಗಾಂಧಿ ಕೂಡ ಭೇಟಿ ನೀಡಬಹುದು ಎಂದು ಪಂಜಾಬ್ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಆದರೂ, ಬಿಜೆಪಿ ಸಂಸದ ರವನೀತ್ ಸಿಂಗ್ ಬಿಟ್ಟು ಅವರು ಈ ಭೇಟಿಗಳನ್ನು ಟೀಕಿಸಿದ್ದಾರೆ.

ಜನವರಿ 2, 2025 ರಂದು ಸುಪ್ರೀಂ ಕೋರ್ಟ್ ಈ ವಿಷಯವನ್ನು ವಿಚಾರಣೆಗೆ ಒಳಪಡಿಸುವುದರೊಂದಿಗೆ ಪರಿಸ್ಥಿತಿಯು ಅಸ್ಥಿರವಾಗಿಯೇ ಉಳಿದಿದೆ. ಉದ್ವಿಗ್ನತೆಯನ್ನು ಹೆಚ್ಚಿಸುವ ಭಯದಿಂದಾಗಿ ಪಂಜಾಬ್‌ನ ಅಧಿಕಾರಿಗಳು ದಲ್ಲೆವಾಲ್ ಅನ್ನು ಸ್ಥಳಾಂತರಿಸುವುದನ್ನು ಮುಂದೂಡಿದ್ದಾರೆ.

ಇದನ್ನೂ ಓದಿ; ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆ; ರೈಲಿಗೆ ಸಿಲುಕಿ ಪ್ರಾಣಬಿಟ್ಟ ಅಂಚೆ ಇಲಾಖೆ  ದಲಿತ ಉದ್ಯೋಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...