Homeಚಳವಳಿರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸ್!

ರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸ್!

- Advertisement -
- Advertisement -

ದೆಹಲಿಗೆ ತೆರಳುತ್ತಿದ್ದ ಹಿರಿಯ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಬುಧವಾರ ಅಲಿಗಢದಲ್ಲಿ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ತನ್ನನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಕೇಶ್ ಟಿಕಾಯತ್, “ನಮ್ಮನ್ನು ಅವರು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆ ಎಂಬುದು ನಮಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ. ರೈತ ನಾಯಕ ರಾಕೇಶ್

“ಇಂದು ಸಂಜೆಯವರೆಗೆ ಸರ್ಕಾರದ ಪ್ರತಿಕ್ರಿಯೆಗೆ ನಾವು ಕಾಯುತ್ತೇವೆ. ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ, ಪರಿಹಾರ ಕಂಡುಕೊಳ್ಳದಿದ್ದರೆ ನಾವು ಲಕ್ನೋನಿಂದ ಟ್ರಾಕ್ಟರ್ ರ‍್ಯಾಲಿ ನಡೆಸಲಿದ್ದೇವೆ” ಎಂದು ಅವರು ಬಂಧನದ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತರು ಮೆರವಣಿಗೆ ನಡೆಸುತ್ತಿದ್ದಾಗ ದಲಿತ ಪ್ರೇರಣಾ ಸ್ಥಳದ ಬಳಿ ಪೊಲೀಸರು ತಡೆದಿದ್ದರಿಂದ ಧರಣಿ ಮಾಡಿದ್ದಾರೆ.

ಮಂಗಳವಾರ ಪ್ರತಿಭಟನಾ ನಿರತ 160 ರೈತರನ್ನು ಬಂಧಿಸಲಾಗಿತ್ತು. ನೋಯ್ಡಾದ ‘ದಲಿತ ಪ್ರೇರಣಾ ಸ್ಥಳ’ದಲ್ಲಿ ಧರಣಿ ನಡೆಸುತ್ತಿದ್ದ ಭಾರತೀಯ ಕಿಸಾನ್ ಪರಿಷತ್ತಿನ ಅಧ್ಯಕ್ಷ ಸುಖಬೀರ್ ಯಾದವ್ ‘ಖಲೀಫಾ’ ಸೇರಿದಂತೆ 160 ಕ್ಕೂ ಹೆಚ್ಚು ಪ್ರತಿಭಟನಾ ನಿರತ ರೈತರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ರೈತ ನಾಯಕ ರಾಕೇಶ್

 

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ಸೋಮವಾರ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಗೌತಮ್ ಬುದ್ಧ ನಗರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಒಂದು ವಾರದೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಬೆದರಿಕೆ ಹಾಕಿದರು.

ಪೊಲೀಸರ ಕ್ರಮವನ್ನು ಖಂಡಿಸಿದ ಎಸ್‌ಕೆಎಂ ಶಾಂತಿಯುತ ಪ್ರತಿಭಟನೆ ವೇಳೆ ಸಂವಿಧಾನದ ಹಕ್ಕುಗಳ ಉಲ್ಲಂಘನೆಯಾಗಿದೆ ಮತ್ತು ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದೆ. ರೈತರು ನೀಡಿರುವ ಸಾಮೂಹಿಕ ಹೇಳಿಕೆಯಲ್ಲಿ, ಪೊಲೀಸರು “ನೂರಕ್ಕೂ ಹೆಚ್ಚು ಮಹಿಳೆಯರು ಸೇರಿದಂತೆ ನೂರಾರು ರೈತರನ್ನು” ಬಂಧಿಸಿದ್ದಾರೆ ಮತ್ತು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ಹೊರಹಾಕಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 170 ರ ಅಡಿಯಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ 160 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಶಿವ ಹರಿ ಮೀನಾ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...