Homeಮುಖಪುಟಕುಸ್ತಿಪಟುಗಳಿಗೆ ನ್ಯಾಯ ಕೇಳಲು ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ: ರೈತ ಮುಖಂಡ ರಾಕೇಶ್ ಟಿಕಾಯತ್

ಕುಸ್ತಿಪಟುಗಳಿಗೆ ನ್ಯಾಯ ಕೇಳಲು ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ: ರೈತ ಮುಖಂಡ ರಾಕೇಶ್ ಟಿಕಾಯತ್

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ಪ್ರತಿನಿಧಿಗಳ ನಿಯೋಗ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಕ್ರೀಡಾಪಟುಗಳು ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ತಿಂಗಳಿಗೂ ಹೆಚ್ಚು ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲಿದೆ.

ಭಾರತೀಯ ಜನತಾ ಪಕ್ಷದ ಸಂಸದರೂ ಆಗಿರುವ ಸಿಂಗ್ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಾಕರಿಸಿದ್ದಾರೆ. ಆದರೆ ಕುಸ್ತಿಪಟುಗಳು ಅವರ ವಿರುದ್ಧ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ರಾಜಧಾನಿ ಲಖನೌದಿಂದ 500 ಕಿ.ಮೀ. ದೂರವಿರುವ ಮುಜಫರನಗರ ಜಿಲ್ಲೆಯ ಸೋರಮ್ ಗ್ರಾಮದಲ್ಲಿ ನಡೆದ ‘ಮಹಾಪಂಚಾಯತ್’ ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ಮಾಂಗೆರಾಮ್ ತ್ಯಾಗಿ, ‘ಮಹಿಳಾ ಕುಸ್ತಿಪಟುಗಳು ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ಎಲ್ಲ ರೀತಿಯ ಹೋರಾಟ ನಡೆಸುತ್ತೇವೆ’ ಎಂದರು.

‘ಜಾತಿ ಆಧಾರದ ಮೇಲೆ ಕುಸ್ತಿಪಟುಗಳನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಕಿಡಿಕಾರಿದ ತ್ಯಾಗಿ, ‘ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ಯಾರಾದರೂ ಅವರ ಜಾತಿಯ ಬಗ್ಗೆ ಕೇಳಿದ್ದರೆ’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

”ಹರಿಯಾಣದ ಕುರುಕ್ಷೇತ್ರದಲ್ಲಿ ಶುಕ್ರವಾರ ಖಾಪ್ ಮುಖಂಡರ ಮತ್ತೊಂದು ಸಭೆ ನಡೆಸಿ ಕುಸ್ತಿಪಟುಗಳ ಹೋರಾಟ ಕುರಿತು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುವುದು” ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್‌ ಹೇಳಿದರು.

‘ಮಹಾ ಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಅವರು ”ಎಲ್ಲ ಖಾಪ್‌ಗಳ ಪ್ರತಿನಿಧಿಗಳ ನಿಯೋಗ ಒಯ್ದು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಕುಸ್ತಿಪಟುಗಳ ಬೇಡಿಕೆಗಳಿಗೆ ಸಂಬಂಧಿಸಿ ಮನವಿ ಸಲ್ಲಿಸಲಾಗುವುದು. ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಆಗಲೂ ಕ್ರಮ ಕೈಗೊಳ್ಳದಿದ್ದರೆ ನಮ್ಮ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸಲಾಗುವುದು” ಎಂದು ಹೇಳಿದರು.

ಕುಸ್ತಿಪಟುಗಳನ್ನು ಬೆಂಬಲಿಸಲು ಖಾಪ್‌ಗಳ ಪ್ರತಿನಿಧಿಗಳು, ರಾಷ್ಟ್ರಪತಿಗಳನ್ನು ಮತ್ತು ಸರ್ಕಾರವನ್ನು ಭೇಟಿ ಮಾಡುತ್ತಾರೆ ಮತ್ತು ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದರು.

”ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ, ನಾವು ಮುಂದಿನ ಹೆಜ್ಜೆ ಇಡುತ್ತೇವೆ. ಆದರೆ ಈ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಆ ಹಣ್ಣು ಮಕ್ಕಳಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ” ಎಂದರು.

ಕುಸ್ತಿಪಟುಗಳ ಕುಂದುಕೊರತೆಗಳನ್ನು ಪರಿಹರಿಸಲು ಶುಕ್ರವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಖಾಪ್‌ಗಳು ಮತ್ತೊಂದು ಸಭೆ ನಡೆಸಲಿದ್ದಾರೆ ಎಂದು ರಾಕೇಶ್ ಟಿಕಿಯಾಟ್ ಗುರುವಾರ ಹೇಳಿದ್ದಾರೆ.

”ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ (ಪೋಕ್ಸೊ) ಪ್ರಕರಣಗಳನ್ನು ದಾಖಲಿಸಿದರೂ ಆರೋಪಿಗೆ ಮಾತನಾಡಲು ಸ್ವಾತಂತ್ರ್ಯ ನೀಡಲಾಗಿದೆ, ಆದರೆ ಸರ್ಕಾರ ಈ ಬಗ್ಗೆ ಮೌನವಾಗಿದೆ” ಎಂದು ಅವರು ಹೇಳಿದರು.

ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪೈಕಿ ಹಲವರು ಜಾಟ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಈ ಸಮುದಾಯದವರ ಜನಸಂಖ್ಯೆ ಹೆಚ್ಚಿದ್ದು, 12ರಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶದ ಮೇಲೆ ಜಾಟ್‌ಗಳ ಮತ ಪ್ರಭಾವ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ನಡೆದ ‘ಮಹಾಪಂಚಾಯತ್’ಗೆ ಮಹತ್ವ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...