Homeಚಳವಳಿಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!

ಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (SKM ರಾಜಕೀಯೇತರ) ಘೋಷಿಸಿದ್ದ ಶಂಭು ಪೊಲೀಸ್ ಠಾಣೆಯ ಹೊರಗೆ ಮಂಗಳವಾರ ಯೋಜಿಸಿದ ಪ್ರತಿಭಟನೆಯ ಮುನ್ನಾದಿನ ಪಂಜಾಬ್ ಪೊಲೀಸರು, ಜಗಜಿತ್ ಸಿಂಗ್ ದಲ್ಲೆವಾಲ್ ಸೇರಿದಂತೆ ಹಿರಿಯ ರೈತ ಮುಖಂಡರು ಮತ್ತು ಹೋರಾಟಗಾರರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು TNIE ವರದಿ ಮಾಡಿದೆ. ಮಾರ್ಚ್ 19 ರಂದು ಶಂಭು ಮತ್ತು ಖಾನೌರಿ ಗಡಿಗಳಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ರೈತರು ಗಾಯಗೊಂಡಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಸಿದ್ದರಾದ

ಸೋಮವಾರ ಮುಂಜಾನೆ ಪೊಲೀಸ್ ತಂಡವೊಂದು ಫರೀದ್‌ಕೋಟ್‌ನಲ್ಲಿರುವ ದಲ್ಲೆವಾಲ್ ಅವರ ಗ್ರಾಮವನ್ನು ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕನಿಷ್ಠ ಮೂರರಿಂದ ನಾಲ್ಕು ದಿನಗಳ ಕಾಲ ಮನೆಯೊಳಗೆ ಇರಲು ಅವರು ಕೇಳಿಕೊಂಡಿದ್ದಾರೆ. ಇದರ ನಂತರ, ಪೊಲೀಸ್ ಕ್ರಮವನ್ನು ಟೀಕಿಸಿ ತನ್ನ ಬಂಧನದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಖನೌರಿ ಮತ್ತು ಶಂಭುವಿನಿಂದ ಪೊಲೀಸರು ರೈತರನ್ನು ಬಲವಂತವಾಗಿ ಹೊರಹಾಕಿದಾಗ, ಅವರು ಪೊಲೀಸರಿಂದ ತೊಂದರೆಗೆ ಒಳಗಾಗಿದ್ದಾರೆ ಮತ್ತು ಟ್ರ್ಯಾಕ್ಟರ್‌ಗಳು ಸೇರಿದಂತೆ ಅವರ ಹಲವಾರು ವಸ್ತುಗಳು ಕಾಣೆಯಾಗಿವೆ ಎಂದು ದಲ್ಲೆವಾಲ್ ಆರೋಪಿಸಿದ್ದಾರೆ. ಇದರ ನಂತರ ಸರ್ಕಾರ ಪರಿಹಾರವನ್ನು ಭರವಸೆ ನೀಡಿತು.

ಕಾಣೆಯಾದ ವಸ್ತುಗಳನ್ನು ಅಂತಿಮವಾಗಿ “ಎಎಪಿ ನಾಯಕರು ಮತ್ತು ಪೊಲೀಸ್ ಸಿಬ್ಬಂದಿಯ ಆಪ್ತ ಸಹಚರರ ಬಳಿ ಪತ್ತೆಹಚ್ಚಲಾಗಿದೆ” ಎಂದು ಅವರು ಹೇಳಿದ್ದಾರೆ. “ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಪೊಲೀಸರು ರೈತರ ಕಾಣೆಯಾದ ವಸ್ತುಗಳನ್ನು ಪತ್ತೆಹಚ್ಚಿದವರ ವಿರುದ್ಧವೆ ಪ್ರಕರಣ ದಾಖಲಿಸಲು ಪ್ರಾರಂಭಿಸಿದರು” ಎಂದು ಅವರು ಹೇಳಿದ್ದಾರೆ. ಅದಕ್ಕಾಗಿಯೇ “ನಾವು ಮೇ 6 ರಂದು ಪೊಲೀಸರ ವರ್ತನೆಯ ವಿರುದ್ಧ ಆಂದೋಲನವನ್ನು ಯೋಜಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರವು ನಮ್ಮ ಆಂದೋಲನವನ್ನು ಹಳಿತಪ್ಪಿಸಲು ಪ್ರಯತ್ನಿಸಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ದೋಬಾ) ಅಧ್ಯಕ್ಷ ಮಂಜಿತ್ ಸಿಂಗ್ ರೈ ಮತ್ತು ಇತರ ಪದಾಧಿಕಾರಿಗಳಾದ ದವೀಂದರ್ ಸಿಂಗ್ ಸಂಧ್ವಾನ್ ಮತ್ತು ಸತ್ನಮ್ ಸಿಂಗ್ ಸಾಹ್ನಿ ಅವರನ್ನು ಸಹ ಗೃಹಬಂಧನದಲ್ಲಿ ಇರಿಸಲಾಯಿತು ಎಂದು ವರದಿಯಾಗಿದೆ. ಬಲದೇವ್ ಸಿಂಗ್ ಸಿರ್ಸಾ ಅವರಂತಹ ನಾಯಕರೂ ಸಹ ಗೃಹಬಂಧನದಲ್ಲಿದ್ದಾರೆ ಎಂದು ಅದು ಹೇಳಿದೆ.

ರೈತ ಮುಖಂಡರ ಬಂಧನಗಳ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಸ್ತೆಗಳು ಅಥವಾ ರೈಲುಮಾರ್ಗಗಳನ್ನು ನಿರ್ಬಂಧಿಸುವುದು ಅಥವಾ ಸಾರ್ವಜನಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದು ಮತ್ತು ದೈನಂದಿನ ಜೀವನವನ್ನು ಅಸ್ತವ್ಯಸ್ತಗೊಳಿಸುವುದನ್ನು ಒಳಗೊಂಡಂತೆ ಯಾವುದೇ ಘೋಷಣೆಗಳು, ಪ್ರತಿಭಟನೆಗಳು ಅಥವಾ ಮುಷ್ಕರಗಳನ್ನು ಸಾರ್ವಜನಿಕರ ವಿರುದ್ಧದ ಕೃತ್ಯಗಳೆಂದು ಪರಿಗಣಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಎಲ್ಲಾ ಸಂಘಟನೆಗಳು, ಒಕ್ಕೂಟಗಳು ಮತ್ತು ಗುಂಪುಗಳು ಇದನ್ನು ಪರಗಣಿಸುವಂತೆ ಸೂಚಿಸಲಾಗಿದೆ. ವಿರೋಧ ವ್ಯಕ್ತಪಡಿಸಲು ಇತರ ಮಾರ್ಗಗಳಿವೆ, ಆದರೆ ಜನರಿಗೆ ತೊಂದರೆ ಮಾಡುವುದು ಸರಿಯಲ್ಲ. ಜನರಿಗೆ ತೊಂದರೆ ಮಾಡಿದರೆ ಕಠಿಣ ಕಾನೂನು ಕ್ರಮಕ್ಕೆ ಸಿದ್ಧರಾಗಿರಿ. ಪಂಜಾಬ್‌ನ ಶ್ರಮಶೀಲ ಜನರ ಹಿತದೃಷ್ಟಿಯಿಂದ ಇದನ್ನು ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗೆ ಸಿದ್ದರಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...