Homeಮುಖಪುಟಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 26-27 ರಂದು ದೆಹಲಿ ಚಲೋ ನಡೆಸುವುದಾಗಿ ರೈತರು ಘೋಷಿಸಿದ್ದರು. ಆದರೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೆಹಲಿ ಪೊಲೀಸ್ ಅವರನ್ನು ದೆಹಲಿ ಗಡಿಗಳಲ್ಲಿಯೇ ತಡೆದಿತ್ತು. ಹೋರಾಟನಿರತ ರೈತರ ಮೇಲೆ ಲಾಠೀ ಚಾರ್ಜ್ ಮಾಡಿ, ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿತ್ತು. ಇದರಿಂದ ಕ್ರೋಧಗೊಂಡ ರೈತರು ಸರ್ಕಾರ ಈ ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದೆ. ರಸ್ತೆ ತಡೆ, ಭಾರತ್ ಬಂದ್ ನಡೆಸಿರುವ ರೈತರು ಹೋರಾಟ ತೀವ್ರಗೊಳಿಸಲು ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

  1. ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುತ್ತಿರುವ 33 ಪ್ರಮುಖ ರೈತ ಸಂಘಟನೆಗಳ ಮುಖಂಡರು ಇಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ತಾವು ಹೊರಾಟ ನಡೆಸುತ್ತಿರುವ ಗಡಿಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
  2. ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಅಲ್ಲದೇ ತಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.
  3. ಈ 3 ಕೃಷಿ ಕಾಯ್ದೆಗಳು ಬೇಡ. ಬದಲಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾಯ್ದೆ ಬೇಕು ಎಂದು ಕೇಳುತ್ತಿದ್ದೇವೆ. ಆದರೆ ಕೇಂದ್ರ ಈ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದೆ. ಡಿಸೆಂಬರ್ 8 ರಂದು ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ‘ಎಲ್ಲಾ 23 ಬೆಳೆಗಳನ್ನು ಎಂಎಸ್‌ಪಿ ನೀಡಿ ಕೊಂಡುಕೊಳ್ಳಲು ಸಾಧ್ಯವಿಲ್ಲ, ಇದರಿಂದ ಕೇಂದ್ರಕ್ಕೆ 17 ಲಕ್ಷ ಕೋಟಿ ಹೊರೆಯಾಗುತ್ತದೆ’ ಎಂದು ಹೇಳಿದ್ದಾರೆ ಎಂದು ಹರಿಯಾಣದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  4. ಈಗಿರುವ ಬೆಲೆಗೆ ಬೆಳೆಗಳನ್ನು ಕೊಂಡುಕೊಂಡು ಅದನ್ನು ಎಂಎಸ್‌ಪಿ ಎಂದು ಕರೆಯಲು ಕೇಂದ್ರ ಸರ್ಕಾರ ಹೊರಟಿದೆ. ಅಲ್ಲದೇ ಎಲ್ಲಾ ರಾಜ್ಯಗಳಿಂದ ಎಂಎಸ್‌ಪಿ ನೀಡಿ ಬೆಳೆಗಳನ್ನು ಕೊಂಡುಕೊಳ್ಳಲು ಕೇಂದ್ರ ಹಿಂದೇಟು ಹಾಕುತ್ತಿದೆ. ಇದು ನಮಗೆ ಒಪ್ಪಿಗೆಯಿಲ್ಲ. ಹಾಗಾಗಿ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  5. ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ. ಡಿಸೆಂಬರ್ 9 ರಂದು 6ನೇ ಸುತ್ತಿನ ಮಾತುಕತೆ ನಡೆಯಬೇಕಿತ್ತು. ಆದರೆ ರೈತ ಮುಖಂಡರು ಅದನ್ನು ಬಾಯ್ಕಾಟ್ ಮಾಡಿದ್ದಾರೆ.
  6. ದೆಹಲಿಯ ರೈತರ ಹೋರಾಟ ಬೆಂಬಲಿಸಲು ರಾಜಸ್ಥಾನದಿಂದ ಸಾವಿರಾರು ರೈತರು ದೆಹಲಿಯತ್ತ ಹೊರಟಿದ್ದಾರೆ. ನೂರಾರು ಟ್ರಕ್‌ಗಳಲ್ಲಿ ಹೋರಾಟ ರೈತರನ್ನು ಹರಿಯಾಣದ ಹಲವೆಡೆ ತಡೆಯಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
  7. ರೈತರ ಹೋರಾಟದಿಂದ ಔಷಧಿ ಪೂರೈಕೆಗೆ ವ್ಯತ್ಯಯ ಉಂಟಾಗಿದೆ. ಹಾಗಾಗಿ ಹೆದ್ದಾರಿ ಬಂದ್ ಮಾಡಿರುವುದನ್ನು ನಿಲ್ಲಿಸಿ ರೈತರನ್ನು ಅಲ್ಲಿಂದ ತೆರವುಗೊಳಿಸಬೇಕೆಂದು ಸಲ್ಲಿಕೆಯಾಗಿರುವ ಪಿಐಎಲ್‌ ಅನ್ನು ಡಿಸೆಂಬರ್ 16 ರಂದು ಆಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
  8. ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಯ ಲಾಭವನ್ನು “ಟುಕ್ಡೆ-ಟುಕ್ಡೆ ಗ್ಯಾಂಗ್” ಪಡೆಯಲು ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್ ಹೇಳಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
  9. ದೇಶಕ್ಕೆ ಅನ್ನ ನೀಡುವ ರೈತರನ್ನು ದೇಶದ್ರೋಹಿಗಳು, ಭಯೋತ್ಪಾದಕರು ಎಂದು ಕರೆಯುವುದು ನಮ್ಮ ಸಂಸ್ಕೃತಿಯಲ್ಲ. ದೇಶವನ್ನು ತುಘಲಕ್ ರೀತಿಯಲ್ಲಿ ಆಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ.
  10. ರೈತರ ದಿಟ್ಟ ಹೋರಾಟಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ರೈತರ ಹೋರಾಟ ಬೆಂಬಲಿಸಿ ನಿನ್ನೆ ಪಂಜಾಬ್‌ನ ಕಾರಾಗೃಹಗಳ ಡಿಐಜಿ ಲಖ್ವಿಂದರ್ ಜಖರ್ ರಾಜೀನಾಮೆ ನೀಡಿದ್ದಾರೆ. “ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು” ಎಂದಿದ್ದಾರೆ. ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಾಮ್ ಸಹ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...