Homeಮುಖಪುಟಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 26-27 ರಂದು ದೆಹಲಿ ಚಲೋ ನಡೆಸುವುದಾಗಿ ರೈತರು ಘೋಷಿಸಿದ್ದರು. ಆದರೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೆಹಲಿ ಪೊಲೀಸ್ ಅವರನ್ನು ದೆಹಲಿ ಗಡಿಗಳಲ್ಲಿಯೇ ತಡೆದಿತ್ತು. ಹೋರಾಟನಿರತ ರೈತರ ಮೇಲೆ ಲಾಠೀ ಚಾರ್ಜ್ ಮಾಡಿ, ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿತ್ತು. ಇದರಿಂದ ಕ್ರೋಧಗೊಂಡ ರೈತರು ಸರ್ಕಾರ ಈ ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದೆ. ರಸ್ತೆ ತಡೆ, ಭಾರತ್ ಬಂದ್ ನಡೆಸಿರುವ ರೈತರು ಹೋರಾಟ ತೀವ್ರಗೊಳಿಸಲು ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

  1. ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುತ್ತಿರುವ 33 ಪ್ರಮುಖ ರೈತ ಸಂಘಟನೆಗಳ ಮುಖಂಡರು ಇಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ತಾವು ಹೊರಾಟ ನಡೆಸುತ್ತಿರುವ ಗಡಿಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
  2. ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಅಲ್ಲದೇ ತಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.
  3. ಈ 3 ಕೃಷಿ ಕಾಯ್ದೆಗಳು ಬೇಡ. ಬದಲಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾಯ್ದೆ ಬೇಕು ಎಂದು ಕೇಳುತ್ತಿದ್ದೇವೆ. ಆದರೆ ಕೇಂದ್ರ ಈ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದೆ. ಡಿಸೆಂಬರ್ 8 ರಂದು ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ‘ಎಲ್ಲಾ 23 ಬೆಳೆಗಳನ್ನು ಎಂಎಸ್‌ಪಿ ನೀಡಿ ಕೊಂಡುಕೊಳ್ಳಲು ಸಾಧ್ಯವಿಲ್ಲ, ಇದರಿಂದ ಕೇಂದ್ರಕ್ಕೆ 17 ಲಕ್ಷ ಕೋಟಿ ಹೊರೆಯಾಗುತ್ತದೆ’ ಎಂದು ಹೇಳಿದ್ದಾರೆ ಎಂದು ಹರಿಯಾಣದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  4. ಈಗಿರುವ ಬೆಲೆಗೆ ಬೆಳೆಗಳನ್ನು ಕೊಂಡುಕೊಂಡು ಅದನ್ನು ಎಂಎಸ್‌ಪಿ ಎಂದು ಕರೆಯಲು ಕೇಂದ್ರ ಸರ್ಕಾರ ಹೊರಟಿದೆ. ಅಲ್ಲದೇ ಎಲ್ಲಾ ರಾಜ್ಯಗಳಿಂದ ಎಂಎಸ್‌ಪಿ ನೀಡಿ ಬೆಳೆಗಳನ್ನು ಕೊಂಡುಕೊಳ್ಳಲು ಕೇಂದ್ರ ಹಿಂದೇಟು ಹಾಕುತ್ತಿದೆ. ಇದು ನಮಗೆ ಒಪ್ಪಿಗೆಯಿಲ್ಲ. ಹಾಗಾಗಿ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಗುರ್ನಮ್ ಸಿಂಗ್ ಚಾದುನಿ ಹೇಳಿದ್ದಾರೆ.
  5. ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಇದುವರೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ 5 ಸುತ್ತಿನ ಮಾತುಕತೆ ನಡೆದಿದೆ. ಆದರೆ ಅವೆಲ್ಲವೂ ವಿಫಲವಾಗಿವೆ. ಡಿಸೆಂಬರ್ 9 ರಂದು 6ನೇ ಸುತ್ತಿನ ಮಾತುಕತೆ ನಡೆಯಬೇಕಿತ್ತು. ಆದರೆ ರೈತ ಮುಖಂಡರು ಅದನ್ನು ಬಾಯ್ಕಾಟ್ ಮಾಡಿದ್ದಾರೆ.
  6. ದೆಹಲಿಯ ರೈತರ ಹೋರಾಟ ಬೆಂಬಲಿಸಲು ರಾಜಸ್ಥಾನದಿಂದ ಸಾವಿರಾರು ರೈತರು ದೆಹಲಿಯತ್ತ ಹೊರಟಿದ್ದಾರೆ. ನೂರಾರು ಟ್ರಕ್‌ಗಳಲ್ಲಿ ಹೋರಾಟ ರೈತರನ್ನು ಹರಿಯಾಣದ ಹಲವೆಡೆ ತಡೆಯಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
  7. ರೈತರ ಹೋರಾಟದಿಂದ ಔಷಧಿ ಪೂರೈಕೆಗೆ ವ್ಯತ್ಯಯ ಉಂಟಾಗಿದೆ. ಹಾಗಾಗಿ ಹೆದ್ದಾರಿ ಬಂದ್ ಮಾಡಿರುವುದನ್ನು ನಿಲ್ಲಿಸಿ ರೈತರನ್ನು ಅಲ್ಲಿಂದ ತೆರವುಗೊಳಿಸಬೇಕೆಂದು ಸಲ್ಲಿಕೆಯಾಗಿರುವ ಪಿಐಎಲ್‌ ಅನ್ನು ಡಿಸೆಂಬರ್ 16 ರಂದು ಆಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
  8. ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಯ ಲಾಭವನ್ನು “ಟುಕ್ಡೆ-ಟುಕ್ಡೆ ಗ್ಯಾಂಗ್” ಪಡೆಯಲು ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್ ಹೇಳಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
  9. ದೇಶಕ್ಕೆ ಅನ್ನ ನೀಡುವ ರೈತರನ್ನು ದೇಶದ್ರೋಹಿಗಳು, ಭಯೋತ್ಪಾದಕರು ಎಂದು ಕರೆಯುವುದು ನಮ್ಮ ಸಂಸ್ಕೃತಿಯಲ್ಲ. ದೇಶವನ್ನು ತುಘಲಕ್ ರೀತಿಯಲ್ಲಿ ಆಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ.
  10. ರೈತರ ದಿಟ್ಟ ಹೋರಾಟಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ರೈತರ ಹೋರಾಟ ಬೆಂಬಲಿಸಿ ನಿನ್ನೆ ಪಂಜಾಬ್‌ನ ಕಾರಾಗೃಹಗಳ ಡಿಐಜಿ ಲಖ್ವಿಂದರ್ ಜಖರ್ ರಾಜೀನಾಮೆ ನೀಡಿದ್ದಾರೆ. “ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು” ಎಂದಿದ್ದಾರೆ. ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಾಮ್ ಸಹ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...