Homeಚಳವಳಿಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಸರ್ಕಾರದ ಮುಖಂಡರು ಎಂಎಸ್‌ಪಿಯನ್ನು ಮುಂದುವರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಮಸೂದೆಯಲ್ಲಿ ಸೇರಿಸುವಲ್ಲಿ ಏನು ಸಮಸ್ಯೆ? ಎಂದು ಅಜಯ್ ಚೌತಲಾ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮೂವರು ಕೇಂದ್ರ ಸಚಿವರೊಂದಿಗಿನ ಇಂದಿನ ರೈತ ಮುಖಂಡರ ಸಭೆಯಲ್ಲಿ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ.

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣ ಹಿಂಪಡೆಯಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು ಎಂಬ ರೈತರ ಹಕ್ಕೊತ್ತಾಯಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಬದಲಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ಮಂಡಿಗಳ ಬಗೆಗಿನ ಕಳವಳವನ್ನು ಹೋಗಲಾಡಿಸಲು ಪ್ರಯತ್ನಿಸುವುದಾಗಿ ಕೇಂದ್ರದ ಪರ ಸಚಿವರು ಹೇಳಿದ್ದಾರೆ. ಇದನ್ನು ತಿರಸ್ಕರಿಸಿರುವ ರೈತರು ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್ ಮತ್ತು ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಅವರು 35 ಸದಸ್ಯರ ರೈತರ ತಂಡದೊಂದಿಗೆ ಇಂದು ಮಧ್ಯಾಹ್ನ 3 ಗಂಟೆಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯುತ್ತಿದೆ.

ದೆಹಲಿ ಚಲೋದ ಏಳು ಸದಸ್ಯರ ರೈತರ ಸಮಿತಿಯ ಭಾಗವಾಗಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಇಂದಿನ ಮಾತುಕತೆಗೆ ಹಾಜರಾಗುವ ಬಗ್ಗೆ ಕೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರು ಸರ್ಕಾರದ ಮಾತುಕತೆಯಿಂದ ಹಿಂದೆ ಸರಿದಿದ್ದರು. ರಾಜಕೀಯ ಕಾರ್ಯಕರ್ತರು ಇರಬಾರದು ಎಂದು ಕೇಂದ್ರ ಹೇಳುತ್ತಿದೆ. ನನ್ನಿಂದ ಅಡ್ಡಿಯಾಗುವುದ ಬೇಡ, ಮಾತುಕತೆ ಮುಂದುವರಿಯಬೇಕು ಎಂದು ಯಾದವ್ ಹೇಳಿದ್ದಾರೆ.

ಇದು ಕೇಂದ್ರ ಸರ್ಕಾರದೊಂದಿಗೆ ರೈತರ ಮೂರನೇ ಮಾತುಕತೆಯಾಗಿದೆ. ಕಳೆದೆರೆಡು ಮಾತುಕತೆಗಳು ವಿಫಲಗೊಂಡಿದ್ದವು. ಇಂದಿನ ಸಭೆ ಮುಂದುವರೆಯುತ್ತಿದ್ದರು ಇದು ಸಹ ವಿಫಲವಾಗುವ ಸಂಭವವಿದೆ.

ಸರ್ಕಾರದ ಮುಖಂಡರು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಮುಂದುವರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಮಸೂದೆಯಲ್ಲಿ ಸೇರಿಸುವಲ್ಲಿ ಏನು ಸಮಸ್ಯೆ? ಎಂದು ಜನನಾಯಕ್ ಜನತಾ ಪಕ್ಷದ(ಜೆಜೆಪಿ) ಸಂಸ್ಥಾಪಕ ಅಜಯ್ ಚೌತಲಾ ಪ್ರಶ್ನಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಗುರುವಾರದೊಳಗೆ ಸರ್ಕಾರ ಒಪ್ಪದಿದ್ದರೆ ಮಹಾರಾಷ್ಟ್ರದಿಂದ ದೆಹಲಿಗೆ ಮೆರವಣಿಗೆ ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ರೈತ ಗುಂಪುಗಳು ಕೇಂದ್ರಕ್ಕೆ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...