Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...