Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....