Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...