Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...