Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...