Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....