Homeಕರ್ನಾಟಕರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

"ಸಿಖ್‌ ರೈತರು ವರ್ಸಸ್‌ ಹಿಂದೂಗಳು ಎಂದು ಬಿಂಬಿಸಲು ಯತ್ನಿಸಿದ ಯುಪಿ ಸರ್ಕಾರದ ಪ್ರಯತ್ನ ವಿಫಲ"

- Advertisement -
- Advertisement -

ಅಕ್ಟೋಬರ್‌‌ 3ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸಂಯುಕ್ತಾ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ‘ರೈತ ಹುತಾತ್ಮ ದಿನ ಆಚರಣೆ’ಗೆ ಅನ್ನದಾತರ ಮಕ್ಕಳು ಬೆಂಗಳೂರಿನಲ್ಲೂ ಸ್ಪಂದಿಸಿದರು.

ನಗರದ ಮೌರ್ಯ ವೃತ್ತದಲ್ಲಿ ಸೇರಿದ ರೈತ ಮಕ್ಕಳು, ಮೇಣದ ಬತ್ತಿ ಹಿಡಿದು ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ರೈತ ನಾಯಕಿ ಕವಿತಾ ಕುರುಗಂಟಿ  ಮಾತನಾಡಿ, “ಬಿಜೆಪಿ ಹಿಂಸಾಚಾರವನ್ನು ಸೃಷ್ಟಿಸಿ ರೈತರ ಹೋರಾಟವನ್ನು ಮುಗಿಸಲು ಯತ್ನಿಸುತ್ತಿದೆ. ಕೋಮು ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಬಿಜೆಪಿಯವರು ಸಿಖ್‌ ರೈತರು ಹಾಗೂ ಹಿಂದೂಗಳು ಎಂದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

“ಬಿಜೆಪಿಯವರ ಈ ರೀತಿಯ ಒಡೆದು ಆಳುವ ನೀತಿ, ಅವರಿಗೆ ಗೆಲುವು ತಂದುಕೊಡುವುದಿಲ್ಲ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಎಚ್ಚರಿಸಿದೆ. ರೈತರ ಹೋರಾಟವನ್ನು ಬಿಜೆಪಿ ಹೇಗೆ ನೋಡುತ್ತಿದೆ ಎಂಬುದರ ಕುರಿತು ರೈತರು ಜಾಗೃತರಾಗಿದ್ದೇವೆ. ಲಖಿಂಪುರ್‌ ಖೇರಿಯಲ್ಲಿ ಹತ್ಯೆಯಾದ ರೈತರಿಗೆ ನ್ಯಾಯ ದೊರಕಬೇಕಿದೆ. ಅದಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ. ಸಚಿವ ಅಜಯ್‌ ಮಿಶ್ರಾ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಪಡೆಯಬೇಕು. ಕ್ರಿಮಿನಲ್‌ ಆರೋಪ ಹೊತ್ತಿರುವ ಅಜಯ್‌ ಮಿಶ್ರಾ ಅವರು ಇನ್ನೂ ಸಚಿವರಾಗಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಅಜಯ್‌ ಮಿಶ್ರಾ ಅವರ ಮಗ ಆಶೀಶ್‌ ಮಿಶ್ರಾ ಅವರನ್ನು ಇತರ ಆರೋಪಿಗಳ ರೀತಿಯಲ್ಲೇ ನೋಡಬೇಕು. ಆತನಿಗೆ ವಿಐಪಿ ಸ್ಥಾನಮಾನ ನೀಡಬಾರದು. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, “ಇದೊಂದು ಪೂರ್ವ ನಿಯೋಜಿತ ಸಂಚು. ಈ ಹಿಂದೆಯೇ ರೈತರಿಗೆ ಸಚಿವರು ಧಮ್ಕಿಯನ್ನು ಹಾಕಿದ್ದರು. ಆ ಬೆದರಿಕೆ ಪ್ರಕಾರ ರೈತರನ್ನು ಅವರು ಹತ್ಯೆ ಮಾಡಿದ್ದಾರೆ. ಅವರೇ ನಿಜವಾದ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು. ಅವರು ಸಚಿವ ಸ್ಥಾನದಲ್ಲಿ ಕ್ಷಣ ಕಾಲ ಇರಬಾರದು” ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಮೌನವಹಿಸಿವೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ವಿರೋಧ ಪಕ್ಷಗಳು ಕಾರ್ಪೋರೇಟ್‌ಗಳ ಗುಲಾಮರಾಗಿವೆಯೋ ಇಲ್ಲವೋ ಎಂಬ ಸ್ಪಷ್ಟತೆಯನ್ನು ನೀಡಬೇಕು. ನರೇಂದ್ರ ಮೋದಿ ಜಾರಿಗೆ ತಂದ ನೋಟು ರದ್ಧತಿ, ಜಿಎಸ್‌ಟಿ, ಈಗಿನ ಖಾಸಗೀಕರಣವೆಲ್ಲ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಹಳೆಯ ಅಜೆಂಡಾವಾಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇವುಗಳನ್ನು ರದ್ದು ಮಾಡುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕ. ಸತ್ತಿರುವ ರೈತರನ್ನು ಕಂಡರೆ ನಮಗೆ ಕಣ್ಣೀರು ಬರುತ್ತದೆ, ದುಃಖವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದರೆ ಸಾಲಲ್ಲ. ಹೀಗಾಗಿ ಕಾಂಗ್ರೆಸ್‌ನ ಸ್ಪಷ್ಟ ಸಂದೇಶ ಬೇಕು. ವಿರೋಧ ಪಕ್ಷಗಳು ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು” ಎಂದರು.

ಇಷ್ಟೆಲ್ಲ ಆಗುತ್ತಿದ್ದರೂ ಬಿಜೆಪಿಯೇ ಗೆದ್ದು ಬರುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಮುಂದಿನ ಚುನಾವಣೆಗಳನ್ನು ದೇಶದಲ್ಲಿ ನೋಡಬೇಕಾಗುತ್ತದೆ. ಇವರಿಗೆ (ಬಿಜೆಪಿಯವರಿಗೆ) ದುರಂಕಾರವಿದೆ. ಹಣ, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿಯುತ್ತಿದ್ದ ಇವರ ಕುರಿತು ರೈತರಲ್ಲಿ ಚರ್ಚೆ ನಡೆಯತ್ತಿದೆ. ರೈತರು ಎಚ್ಚೆತ್ತುಕೊಂಡಿದ್ದಾರೆ” ಎಂದು ಹೇಳಿದರು.

ಚಿಂತಕ ಜಿ.ಎನ್‌.ನಾಗರಾಜ್‌ ಮಾತನಾಡಿ, “ಈ ಘಟನೆಯನ್ನು ಸಿಖ್‌ ರೈತರು ಹಾಗೂ ಹಿಂದೂಗಳ ನಡುವಿನ ಗಲಭೆಯಂತೆ ಬಿಂಬಿಸಲು ಬಿಜೆಪಿಯವರು ಯತ್ನಿಸಿದರು. ಕೂಡಲೇ ಎಚ್ಚೆತ್ತಕೊಂಡ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು,  ರೈತರು ವರ್ಸಸ್‌ ಉತ್ತರ ಪ್ರದೇಶ ಸರ್ಕಾರ ಎಂಬ ವಿಚಾರ ಮುಖ್ಯಭೂಮಿಕೆಯಲ್ಲಿ ಜೀವಂತವಾಗಿ ಇರುವಂತೆ ನೋಡಿಕೊಂಡಿದ್ದಾರೆ” ಎಂದರು.

ನೂರಾರು ಅನ್ನದಾತರ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...