Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ.

ಈ ಕುರಿತು ಹೇಳಿಕ ಬಿಡುಗಡೆ ಮಾಡಿರುವ ಎಸ್‌ಕೆಎಂ, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟು ಭಾರತೀಯ ಕೃಷಿಯನ್ನು ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾಡುವ ‘ಸಂಪೂರ್ಣ ಶರಣಾಗತಿ’ಯಾಗಿದೆ. ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಕೆಎಂ ನಾಯಕರು, ದೇಶದಾದ್ಯಂತ ಹಳ್ಳಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುವುದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಗಳನ್ನು ಸುಡಲಾಗುವುದು ಎಂದು ಹೇಳಿದ್ದಾರೆ. ಫೆಬ್ರವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಎಐಕೆಎಸ್ ನಾಯಕ ಕೃಷ್ಣ ಪ್ರಸಾದ್ ಮಾತನಾಡಿ, ಈ ಒಪ್ಪಂದವು ಕೃಷಿ ಕ್ಷೇತ್ರದ ಮೇಲೆ ಆಳವಾದ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಈ ಒಪ್ಪಂದದಿಂದಾಗಿ ವಿದೇಶಿ ಮಾರುಕಟ್ಟೆಯಿಂದ ಒಣಗಿದ ಡಿಸ್ಟಿಲರ್ಸ್ ಧಾನ್ಯಗಳು, ಪ್ರಾಣಿ ಆಹಾರಕ್ಕಾಗಿ ಬಳಸುವ ಕೆಂಪು ಜೋಳ ಮತ್ತು ಸೋಯಾಬೀನ್ ಎಣ್ಣೆಯಂತಹ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಮುಕ್ತವಾಗಿ ಪ್ರವೇಶ ಪಡೆಯಲಿವೆ. ಇದು ಸ್ಥಳೀಯ ರೈತರ ಮೇಲೆ ಒತ್ತಡ ಹೇರುವುದಲ್ಲದೆ, ಅಂತಿಮವಾಗಿ ದೇಶದ ಹೈನುಗಾರಿಕೆ ವಲಯದ ಮೇಲೂ ಗಂಭೀರವಾದ ಹೊಡೆತ ನೀಡಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಅವರ “ಸ್ಥಗಿತ” ಆರ್ಥಿಕತೆಗಳಿಗೆ ಲಾಭ ತರುವ ಉದ್ದೇಶವನ್ನು ಹೊಂದಿವೆಯೇ ಹೊರತು, ಭಾರತದ ಹಿತಾಸಕ್ತಿ ಅಲ್ಲ ಎಂದು ಕೃಷ್ಣ ಪ್ರಸಾದ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್ (ಪಂಜಾಬ್) ನ ನಾಯಕ ದರ್ಶನ್ ಪಾಲ್ ಮಾತನಾಡಿ, ತಮ್ಮ ಸಂಘಟನೆಯು ಟ್ರಂಪ್ ಮತ್ತು ಮೋದಿ ಅವರ ಪ್ರತಿಕೃತಿಗಳನ್ನು ದಹಿಸಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಈಗಾಗಲೇ ಕಡಿಮೆ ಆದಾಯ ಮತ್ತು ಸಾಲದಿಂದ ಬಳಲುತ್ತಿರುವ ರೈತರ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತನಾಡಿ, ಭಾರತ ಮತ್ತು ಅಮೆರಿಕ ನಡುವಿನ ಹೊಸ ವ್ಯಾಪಾರ ಒಪ್ಪಂದಗಳು ತಮ್ಮ ಜೀವನದ ಮೇಲೆ ಎಂತಹ ಪರಿಣಾಮ ಬೀರಬಹುದು ಎಂದು ಹಳ್ಳಿಗರು ಆತಂಕದಿಂದ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಒಪ್ಪಂದದಿಂದ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳು ಅಪಾಯಕ್ಕೆ ಸಿಲುಕಲಿವೆ ಹಾಗೂ ಅಮೆರಿಕದ ದೊಡ್ಡ ಕಂಪನಿಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಲಿವೆ ಎಂದು ಅವರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಒಗ್ಗೂಡಿ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

“ಕೃಷಿ ಮತ್ತು ಡೈರಿ ವಲಯಗಳು ಮುಕ್ತ ವ್ಯಾಪಾರ ಒಪ್ಪಂದಗಳಿಂದ ಹೊರಗಿವೆ. ಭಾರತ ಸರ್ಕಾರ ಕೃಷಿಯ ಹಿತಾಸಕ್ತಿಗಳ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಯನ್ನು ‘ಮಧ್ಯಂತರ ಚೌಕಟ್ಟು’ ತೀವ್ರವಾಗಿ ತಿರಸ್ಕರಿಸುತ್ತದೆ” ಎಂದು ಎಸ್‌ಕೆಎಂ ಹೇಳಿಕೆಯಲ್ಲಿ ತಿಳಿಸಿದೆ.

“ಕೈಗಾರಿಕೆ ವಾಣಿಜ್ಯ ಸಚಿವರು ಪ್ರಜ್ಞಾಪೂರ್ವಕವಾಗಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ರೈತರು ಮತ್ತು ಇಡೀ ಜನ ಸಮುದಾಯಕ್ಕೆ ದ್ರೋಹ ಮಾಡುತ್ತಿದ್ದಾರೆ. ಎಸ್‌ಕೆಎಂ ಸಚಿವರ ನಡೆಯನ್ನು ‘ದೇಶದ್ರೋಹ’ ಎಂದು ಪರಿಗಣಿಸುತ್ತದೆ ಮತ್ತು ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸುತ್ತದೆ” ಎಂದು ಎಸ್‌ಕೆಎಂ ಹೇಳಿದೆ.

“ಪ್ರಧಾನ ಮಂತ್ರಿಯವರು ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಬೃಹತ್ ಅಖಿಲ ಭಾರತ ಮಟ್ಟದ ಸಾಮೂಹಿಕ ಹೋರಾಟಗಳನ್ನು ಎದುರಿಸಲಿ ಸಿದ್ದರಾಗಲಿ” ಎಂದು ಎಸ್‌ಕೆಎಂ ಎಚ್ಚರಿಸಿದೆ.

ಫೆಬ್ರವರಿ 12ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲಾ ರಾಜಕೀಯ ಪಕ್ಷಗಳು, ರೈತ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು, ಕಾರ್ಮಿಕ ಸಂಘಗಳು ಹಾಗೂ ಎಲ್ಲಾ ಜನಸಾಮಾನ್ಯರ ಮತ್ತು ವರ್ಗ ಸಂಘಟನೆಗಳಿಗೆ ಎಸ್‌ಕೆಎಂ ಮನವಿ ಮಾಡಿದೆ. ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರಗಳು ಮತ್ತು ವ್ಯಾಪಾರ ಒಪ್ಪಂದಗಳು ರೈತ ಹಾಗೂ ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿರುವ ಎಸ್‌ಕೆಎಂ, ಈ ಹೋರಾಟವನ್ನು ಬಲಪಡಿಸಲು ಸಮಾಜದ ಎಲ್ಲಾ ವರ್ಗದವರು ಒಂದಾಗಬೇಕು ಎಂದು ಕರೆ ನೀಡಿದೆ. 

ಭಾರತ-ಯುಎಸ್ ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಶೀಘ್ರದಲ್ಲೇ ಸಭೆ ನಡೆಸಿ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಘೋಷಿಸುವುದಾಗಿ ಎಸ್‌ಕೆಎಂ (ರಾಜಕೀಯೇತರ) ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ರೈತರು ಅಂತಹ ಯಾವುದೇ ಒಪ್ಪಂದವನ್ನು ಸಹಿಸುವುದಿಲ್ಲ ಎಂದಿದೆ.

ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಭಾರತದ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳನ್ನು ಈ ಒಪ್ಪಂದದಿಂದ ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಟ್ವೀಟ್ ಮಾಡುತ್ತಿದ್ದಾರೆ. ಆದರೆ, ಭಾರತ ಮತ್ತು ಅಮೆರಿಕ ಬಿಡುಗಡೆ ಮಾಡಿರುವ ಅಧಿಕೃತ ಜಂಟಿ ಹೇಳಿಕೆಯು ಇದಕ್ಕೆ ವಿರುದ್ಧವಾದ ಅಂಶಗಳನ್ನು ಹೊಂದಿದೆ. ಅಮೆರಿಕದ ಕೃಷಿ ಮತ್ತು ಆಹಾರ ಉತ್ಪನ್ನಗಳ ಮೇಲೆ ಭಾರತ ಹೇರಿರುವ ಸುಂಕ ರಹಿತ ಅಡೆತಡೆಗಳನ್ನು’ಚರ್ಚಿಸಿ ಪರಿಹರಿಸಲು ಭಾರತ ಒಪ್ಪಿಕೊಂಡಿದೆ ಎಂದು ಆ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಈ ಎರಡು ನಿಲುವುಗಳು ಪರಸ್ಪರ ವಿರೋಧಾಭಾಸದಿಂದ ಕೂಡಿವೆ ಎಂದು ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಟೀಕಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...