Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ.

ಈ ಕುರಿತು ಹೇಳಿಕ ಬಿಡುಗಡೆ ಮಾಡಿರುವ ಎಸ್‌ಕೆಎಂ, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟು ಭಾರತೀಯ ಕೃಷಿಯನ್ನು ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾಡುವ ‘ಸಂಪೂರ್ಣ ಶರಣಾಗತಿ’ಯಾಗಿದೆ. ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಕೆಎಂ ನಾಯಕರು, ದೇಶದಾದ್ಯಂತ ಹಳ್ಳಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುವುದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಗಳನ್ನು ಸುಡಲಾಗುವುದು ಎಂದು ಹೇಳಿದ್ದಾರೆ. ಫೆಬ್ರವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಎಐಕೆಎಸ್ ನಾಯಕ ಕೃಷ್ಣ ಪ್ರಸಾದ್ ಮಾತನಾಡಿ, ಈ ಒಪ್ಪಂದವು ಕೃಷಿ ಕ್ಷೇತ್ರದ ಮೇಲೆ ಆಳವಾದ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಈ ಒಪ್ಪಂದದಿಂದಾಗಿ ವಿದೇಶಿ ಮಾರುಕಟ್ಟೆಯಿಂದ ಒಣಗಿದ ಡಿಸ್ಟಿಲರ್ಸ್ ಧಾನ್ಯಗಳು, ಪ್ರಾಣಿ ಆಹಾರಕ್ಕಾಗಿ ಬಳಸುವ ಕೆಂಪು ಜೋಳ ಮತ್ತು ಸೋಯಾಬೀನ್ ಎಣ್ಣೆಯಂತಹ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಮುಕ್ತವಾಗಿ ಪ್ರವೇಶ ಪಡೆಯಲಿವೆ. ಇದು ಸ್ಥಳೀಯ ರೈತರ ಮೇಲೆ ಒತ್ತಡ ಹೇರುವುದಲ್ಲದೆ, ಅಂತಿಮವಾಗಿ ದೇಶದ ಹೈನುಗಾರಿಕೆ ವಲಯದ ಮೇಲೂ ಗಂಭೀರವಾದ ಹೊಡೆತ ನೀಡಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಅವರ “ಸ್ಥಗಿತ” ಆರ್ಥಿಕತೆಗಳಿಗೆ ಲಾಭ ತರುವ ಉದ್ದೇಶವನ್ನು ಹೊಂದಿವೆಯೇ ಹೊರತು, ಭಾರತದ ಹಿತಾಸಕ್ತಿ ಅಲ್ಲ ಎಂದು ಕೃಷ್ಣ ಪ್ರಸಾದ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್ (ಪಂಜಾಬ್) ನ ನಾಯಕ ದರ್ಶನ್ ಪಾಲ್ ಮಾತನಾಡಿ, ತಮ್ಮ ಸಂಘಟನೆಯು ಟ್ರಂಪ್ ಮತ್ತು ಮೋದಿ ಅವರ ಪ್ರತಿಕೃತಿಗಳನ್ನು ದಹಿಸಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಈಗಾಗಲೇ ಕಡಿಮೆ ಆದಾಯ ಮತ್ತು ಸಾಲದಿಂದ ಬಳಲುತ್ತಿರುವ ರೈತರ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತನಾಡಿ, ಭಾರತ ಮತ್ತು ಅಮೆರಿಕ ನಡುವಿನ ಹೊಸ ವ್ಯಾಪಾರ ಒಪ್ಪಂದಗಳು ತಮ್ಮ ಜೀವನದ ಮೇಲೆ ಎಂತಹ ಪರಿಣಾಮ ಬೀರಬಹುದು ಎಂದು ಹಳ್ಳಿಗರು ಆತಂಕದಿಂದ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಒಪ್ಪಂದದಿಂದ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳು ಅಪಾಯಕ್ಕೆ ಸಿಲುಕಲಿವೆ ಹಾಗೂ ಅಮೆರಿಕದ ದೊಡ್ಡ ಕಂಪನಿಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಲಿವೆ ಎಂದು ಅವರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಒಗ್ಗೂಡಿ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

“ಕೃಷಿ ಮತ್ತು ಡೈರಿ ವಲಯಗಳು ಮುಕ್ತ ವ್ಯಾಪಾರ ಒಪ್ಪಂದಗಳಿಂದ ಹೊರಗಿವೆ. ಭಾರತ ಸರ್ಕಾರ ಕೃಷಿಯ ಹಿತಾಸಕ್ತಿಗಳ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಯನ್ನು ‘ಮಧ್ಯಂತರ ಚೌಕಟ್ಟು’ ತೀವ್ರವಾಗಿ ತಿರಸ್ಕರಿಸುತ್ತದೆ” ಎಂದು ಎಸ್‌ಕೆಎಂ ಹೇಳಿಕೆಯಲ್ಲಿ ತಿಳಿಸಿದೆ.

“ಕೈಗಾರಿಕೆ ವಾಣಿಜ್ಯ ಸಚಿವರು ಪ್ರಜ್ಞಾಪೂರ್ವಕವಾಗಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ರೈತರು ಮತ್ತು ಇಡೀ ಜನ ಸಮುದಾಯಕ್ಕೆ ದ್ರೋಹ ಮಾಡುತ್ತಿದ್ದಾರೆ. ಎಸ್‌ಕೆಎಂ ಸಚಿವರ ನಡೆಯನ್ನು ‘ದೇಶದ್ರೋಹ’ ಎಂದು ಪರಿಗಣಿಸುತ್ತದೆ ಮತ್ತು ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸುತ್ತದೆ” ಎಂದು ಎಸ್‌ಕೆಎಂ ಹೇಳಿದೆ.

“ಪ್ರಧಾನ ಮಂತ್ರಿಯವರು ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಬೃಹತ್ ಅಖಿಲ ಭಾರತ ಮಟ್ಟದ ಸಾಮೂಹಿಕ ಹೋರಾಟಗಳನ್ನು ಎದುರಿಸಲಿ ಸಿದ್ದರಾಗಲಿ” ಎಂದು ಎಸ್‌ಕೆಎಂ ಎಚ್ಚರಿಸಿದೆ.

ಫೆಬ್ರವರಿ 12ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲಾ ರಾಜಕೀಯ ಪಕ್ಷಗಳು, ರೈತ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು, ಕಾರ್ಮಿಕ ಸಂಘಗಳು ಹಾಗೂ ಎಲ್ಲಾ ಜನಸಾಮಾನ್ಯರ ಮತ್ತು ವರ್ಗ ಸಂಘಟನೆಗಳಿಗೆ ಎಸ್‌ಕೆಎಂ ಮನವಿ ಮಾಡಿದೆ. ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರಗಳು ಮತ್ತು ವ್ಯಾಪಾರ ಒಪ್ಪಂದಗಳು ರೈತ ಹಾಗೂ ಕಾರ್ಮಿಕ ವಿರೋಧಿಯಾಗಿವೆ ಎಂದು ಆರೋಪಿಸಿರುವ ಎಸ್‌ಕೆಎಂ, ಈ ಹೋರಾಟವನ್ನು ಬಲಪಡಿಸಲು ಸಮಾಜದ ಎಲ್ಲಾ ವರ್ಗದವರು ಒಂದಾಗಬೇಕು ಎಂದು ಕರೆ ನೀಡಿದೆ. 

ಭಾರತ-ಯುಎಸ್ ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಶೀಘ್ರದಲ್ಲೇ ಸಭೆ ನಡೆಸಿ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಘೋಷಿಸುವುದಾಗಿ ಎಸ್‌ಕೆಎಂ (ರಾಜಕೀಯೇತರ) ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ರೈತರು ಅಂತಹ ಯಾವುದೇ ಒಪ್ಪಂದವನ್ನು ಸಹಿಸುವುದಿಲ್ಲ ಎಂದಿದೆ.

ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಭಾರತದ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳನ್ನು ಈ ಒಪ್ಪಂದದಿಂದ ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಟ್ವೀಟ್ ಮಾಡುತ್ತಿದ್ದಾರೆ. ಆದರೆ, ಭಾರತ ಮತ್ತು ಅಮೆರಿಕ ಬಿಡುಗಡೆ ಮಾಡಿರುವ ಅಧಿಕೃತ ಜಂಟಿ ಹೇಳಿಕೆಯು ಇದಕ್ಕೆ ವಿರುದ್ಧವಾದ ಅಂಶಗಳನ್ನು ಹೊಂದಿದೆ. ಅಮೆರಿಕದ ಕೃಷಿ ಮತ್ತು ಆಹಾರ ಉತ್ಪನ್ನಗಳ ಮೇಲೆ ಭಾರತ ಹೇರಿರುವ ಸುಂಕ ರಹಿತ ಅಡೆತಡೆಗಳನ್ನು’ಚರ್ಚಿಸಿ ಪರಿಹರಿಸಲು ಭಾರತ ಒಪ್ಪಿಕೊಂಡಿದೆ ಎಂದು ಆ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಈ ಎರಡು ನಿಲುವುಗಳು ಪರಸ್ಪರ ವಿರೋಧಾಭಾಸದಿಂದ ಕೂಡಿವೆ ಎಂದು ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಟೀಕಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...