Homeಕರ್ನಾಟಕರೈತರ ಆಕ್ರೋಶ ಸ್ಫೋಟ - ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತ ವಿರೋಧಿ ಧೋರಣೆ ವಿರುದ್ಧ ಸಿಡಿದೆದ್ದ ಕರ್ನಾಟಕ... ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಕ್ತವಾಗಿರುವ ಆಕ್ರೋಶ ನೋಡಿರಿ...

- Advertisement -
- Advertisement -

ರೈತರು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕನ್ನಡ ನಾಡು ಸ್ಪಂದಿಸಿದೆ. ವಿವಿಧ ಸಂಘಟನೆಗಳು ರಸ್ತೆತಡೆ, ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಕೊಪ್ಪಳದಲ್ಲಿ ಪ್ರತಿಭಟನೆ

***

ಸಂಯುಕ್ತ ಕಿಸಾನ್ ಮೋರ್ಚಾ-ಶಿವಮೊಗ್ಗದಲ್ಲಿ ಬೈಕ್ ರ್‍ಯಾಲಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು, ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಬೈಕ್ ರ್‍ಯಾಲಿ ಹೊರಟು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.
***
ರಸ್ತೆಗೆ ಅಡ್ಡ ಮಲಗಿ ಪ್ರತಿಭಟನೆ
https://twitter.com/naanugauri/status/1442351259906830336
ಮೈಸೂರಿನಲ್ಲಿ ಭಾರತ್ ಬಂದ್ ಅಂಗವಾಗಿ ಬಸ್ ಸಂಚಾರ ಮಾಡದಂತೆ ತಡೆದ ಪ್ರತಿಭಟನಾಕಾರರು..

***

ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ!

ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ಮಾಡಲಾಯಿತು. ಭಾರತ್ ಬಂದ್ ಅಂಗವಾಗಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

***

ಚಿಕ್ಕಬಳ್ಳಾಪುರ ವರದಿ

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ ಅಂಗವಾಗಿ ಅಂಗಡಿ ಮುಂಗಟ್ಟುಗಳನ್ನು ರೈತರು ಮುಚ್ಚಿಸಿದರು.

***

ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಭಾರತ್ ಬಂದ್ ಬೆಂಬಲಿಸಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಲಾಯಿತು. ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳು ಪಾಲ್ಗೊಂಡಿದ್ದವು.

***

ಅಂಗಡಿಗಳನ್ನು ಮುಚ್ಚಿಸಿದ ಹೋರಾಟಗಾರರು

https://twitter.com/naanugauri/status/1442350363491794948

ಹಾಸನದಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಿ ಬಂದ್ ಆಚರಿಸಲಾಯಿತು.
***

ಅಂಬಾನಿ- ಅದಾನಿ ಸ್ಟಾಲ್‌!

ಕೋಲಾರದಲ್ಲಿ ಅಂಬಾನಿ – ಅದಾನಿ ಸ್ಟಾಲ್ ತೆಗೆದು ರೈತರು ಪ್ರತಿಭಟಿಸಿದರು. ಮುಂಜಾನೆ 6 ಗಂಟೆಯಲ್ಲೇ ಪ್ರತಿಭಟನೆ ಆರಂಭವಾಗಿತ್ತು.

***

ಪೊಲೀಸರೊಂದಿಗೆ ಜಟಾಪಟಿ

https://twitter.com/naanugauri/status/1442355063666536450

ಯಾದಗಿರಿಯಲ್ಲಿ ಬಸ್ ತಡೆದು ರೈತರು ಪ್ರತಿಭಟಿಸಿದರು. ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

***

ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ಕಲಬುರಗಿ ವರದಿ

ಕಲಬುರಗಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಭಾರತ್ ಬಂದ್ ಆಚರಣೆ

***

ತುಮಕೂರಿನಲ್ಲಿ ಬೃಹತ್‌ ಮೆರವಣಿಗೆ

ತುಮಕೂರಿನಲ್ಲಿ ಬೃಹತ್ ಮೆರವಣಿಗೆ, ಪ್ರತಿಭಟನೆ ನಡೆಯಿತು. ಭಾರತ್ ಬಂದ್ ಯಶಸ್ವಿಯಾಯಿತು.

ಬಾಗಲಕೋಟೆ ವರದಿ

ಬಾಗಲಕೋಟೆಯಲ್ಲಿ ಬಸ್ ತಡೆದು ಪ್ರತಭಟನೆ, ಭಾರತ್ ಬಂದ್ ಬೆಂಬಲಿಸಿದ ರೈತರು

***

ಪ್ರತಿಭಟನಾಕಾರರ ಮೇಲೆ ಹಲ್ಲೆ

ದಾವಣಗೆರೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತ್ ಬಂದ್ ನಡೆಸದಂತೆ ವಿರೋಧ ವ್ಯಕ್ತಪಡಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

****

ಮೈಸೂರು ವರದಿ

ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

***

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಕರ್ನಾಟಕ ಕಾರ್ಮಿಕ ಪಕ್ಷದ ಪಧಾದಿಕಾರಿಗಳಿಂದ ಭಾರತ್ ಬಂದ್ ಆಚರಣೆ – ಪ್ರತಿಭಟನೆ

***

ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರತ್ ಬಂದ್.. ವಶಕ್ಕೆ ಪಡೆದ ಪೊಲೀಸರು

***

ಬೆಂಗಳೂರಲ್ಲಿ ಜನಸಾಗರ

ಬೆಂಗಳೂರಿನ ಟೌನ್‌ಹಾಲ್‌ ತುಂಬಾ ಜನಸಾಗರ.. ಭಾರತ್ ಬಂದ್‌ಗೆ ಬೆಂಬಲದ ಮಹಾಪೂರ..

***

 ಅರಬೆತ್ತಲೆ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತರು.

***

ಮಳೆಯಲ್ಲಿಯೇ ಪ್ರತಿಭಟನೆ

ಮಡಿಕೇರಿಯಲ್ಲಿ ಮಳೆಯಲ್ಲೂ ಪ್ರತಿಭಟಿಸಿ ಭಾರತ್ ಬಂದ್ ಆಚರಿಸಿದ ಪ್ರಜ್ಞಾವಂತರು…

ಪಾಂಡವಪುರ ವರದಿ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ರೈತರಿಂದ ಬೈಕ್ ರ್‍ಯಾಲಿ ನಡೆಯಿತು.

***

ರಾಯಚೂರು ವರದಿ

ರಾಯಚೂರು ಗ್ರಾಮೀಣ ಶಾಸಕ ದದ್ದಲ ಬಸನಗೌಡ ಅವರು ಭಾರತ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.

***

ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...