Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...